• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಈ ಮುಸ್ಲಿಂ ಯುವತಿಯ ಕ್ರೀಡಾ ಸಾಧನೆಗೆ 5 ಲಕ್ಷ ರೂಪಾಯಿ ಕೊಡದೆ ಅನ್ಯಾಯ ಮಾಡಿತಲ್ಲ ಪಿಣರಾಯಿ ಸರ್ಕಾರ!

TNN Correspondent Posted On July 5, 2018


  • Share On Facebook
  • Tweet It

ದೇಶದಲ್ಲಿ ಮುಸ್ಲಿಮರು ಏಳಿಗೆ ಹೊಂದುತ್ತಿದ್ದಾರೆ. ಪರಿಸ್ಥಿತಿ ಬದಲಾಗಿದೆ. ಸಿನಿಮಾ, ಕ್ರೀಡೆ ಸೇರಿ ಹಲವು ಕ್ಷೇತ್ರಗಳಲ್ಲಿ ಮುಸ್ಲಿಂ ಮಹಿಳೆಯರು ಸಾಧನೆ ಮಾಡುತ್ತಿದ್ದಾರೆ. ಮುಸ್ಲಿಂ ಮಹಿಳೆಯರಿಗೆ ತೊಂದರೆ ಆಗಬಾರದು ಎಂದು ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ತ್ರಿವಳಿ ತಲಾಖ್ ನಿಷೇಧ ಕಾಯಿದೆ ಜಾರಿಗೆ ತರಲು ಸಹ ಮುಂದಾಗಿದೆ.

ಆದರೆ ಕೇರಳದ ಪಿಣರಾಯಿ ವಿಜಯನ್ ನೇತೃತ್ವದ ರಾಜ್ಯ ಸರ್ಕಾರ ಮಾತ್ರ ರಾಜ್ಯದಲ್ಲಿ ಕ್ರೀಡಾ ಸಾಧನೆ ಮೆರೆಯಲು ಉತ್ಸಾಹ ತೋರಿಸುತ್ತಿರುವ ಮುಸ್ಲಿಂ ಮಹಿಳೆಗೆ ಧನಸಹಾಯ ಮಾಡದೆ, ಅವರ ಕನಸನ್ನೇ ಕಮರಿಸುವ ಹಂತಕ್ಕೆ ತಂದುಬಿಟ್ಟಿದೆ. ಆ ಮೂಲಕ ಯುವತಿಯ ಅಸಮಾಧಾನಕ್ಕೆ ಕಾರಣವಾಗಿದೆ.

ಹೌದು, ಕೇರಳದಲ್ಲಿ ಭಾರತ ಎತ್ತುವ ಸ್ಪರ್ಧೆಯಲ್ಲಿ ಉತ್ತಮ ಹೆಸರು ಮಾಡಿರುವ ಮಜಿಜಿಯಾ ಭಾನು ಅವರು ಕಳೆದ ಮಾರ್ಚ್ ನಲ್ಲಿ ಕೇರಳದಲ್ಲಿ ಆಯೋಜಿಸಿದ್ದ ಆರ್ಮ್ ರೆಸ್ಲಿಂಗ್ ಸ್ಪರ್ಧೆಯಲ್ಲಿ ವಿಜೇತರಾಗಿದ್ದು, ಅಕ್ಟೋಬರ್ ನಲ್ಲಿ ಟರ್ಕಿಯಲ್ಲಿ ನಡೆಯಲಿರುವ ವಿಶ್ವ ಆರ್ಮ್ ರೆಸ್ಲಿಂಗ್ ಚಾಂಪಿಯನ್ ಶಿಪ್ ಗೆ ಆಯ್ಕೆಯಾಗಿದ್ದಾರೆ.

ಅಷ್ಟೇ ಅಲ್ಲ, ಕಳೆದ ಮೇ ತಿಂಗಳಲ್ಲಿ ನಡೆದ ರಾಷ್ಟ್ರೀಯ ಆರ್ಮ್ ರೆಸ್ಲಿಂಗ್ ಚಾಂಪಿಯನ್ ಶಿಪ್ ನಲ್ಲೂ ಚಿನ್ನದ ಪದಕ ಪಡೆದಿದ್ದಾರೆ. ಈಗ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡುವ ಹಂಬಲ ಹೊಂದಿರುವ ಭಾನು, ಟರ್ಕಿಯಲ್ಲಿ ನಡೆಯುವ ಪಂದ್ಯಾವಳಿಗೆ ತೆರಳುವ ಇಚ್ಛೆ ವ್ಯಕ್ತಪಡಿಸಿದ್ದಾರೆ.

ಚಾಂಪಿಯನ್ ಶಿಪ್ ನಲ್ಲಿ ಭಾಗವಹಿಸಲು ಭಾನು ಅವರಿಗೆ 5 ಲಕ್ಷ ರೂಪಾಯಿ ಖರ್ಚಾಗುತ್ತದೆ, ಅಲ್ಲದೆ, ಜುಲೈ 10ರೊಳಗೆ ಅವರು ಟರ್ಕಿಗೆ 2 ಲಕ್ಷ ರೂಪಾಯಿ ಪಾವತಿ ಮಾಡಬೇಕು. ಈ ಕುರಿತು ಕೇರಳ ಕ್ರೀಡಾ ಸಚಿವರಿಗೆ ಮನವಿ ಮಾಡಿದರೆ, ಅವರು ಶೀಘ್ರದಲ್ಲೇ ಇಷ್ಟು ಹಣ ನೀಡಲು ಆಗುವುದಿಲ್ಲ ಎಂದು ಹೇಳಿದ್ದಾರೆ, ಐದಾರು ಕಂಪನಿಗಳು ಹಣ ನೀಡಲು ಮುಂದೆ ಬಂದವಾದರೂ, ಕೊನೇ ಕ್ಷಣದಲ್ಲಿ ನೀಡಲಿಲ್ಲ, ಅತ್ತ ಸರ್ಕಾರವೂ ನೆರವಾಗುತ್ತಿಲ್ಲ ಎಂದು ಅಳಲು ತೋಡಿಕೊಳ್ಳುತ್ತಾರೆ ಭಾನು.

  • Share On Facebook
  • Tweet It


- Advertisement -


Trending Now
ಶಿಕ್ಷಕರು ಇಲ್ಲ, ಬಸ್ಸು ಇಲ್ಲ, ಬಾರ್ ಇದೆ!
Tulunadu News September 28, 2023
ಆತ್ಮಹತ್ಯೆ ಸೈಟ್ ಗೂಗಲ್ ಸರ್ಚ್ ಮಾಡಿದ್ರೆ ಪೊಲೀಸರಿಗೆ ಗೊತ್ತಾಗುತ್ತೆ!
Tulunadu News September 28, 2023
Leave A Reply

  • Recent Posts

    • ಶಿಕ್ಷಕರು ಇಲ್ಲ, ಬಸ್ಸು ಇಲ್ಲ, ಬಾರ್ ಇದೆ!
    • ಆತ್ಮಹತ್ಯೆ ಸೈಟ್ ಗೂಗಲ್ ಸರ್ಚ್ ಮಾಡಿದ್ರೆ ಪೊಲೀಸರಿಗೆ ಗೊತ್ತಾಗುತ್ತೆ!
    • ತನ್ನ ದೇಶದ ಭಿಕ್ಷುಕರನ್ನು ಅರಬ್ ರಾಷ್ಟ್ರಗಳಿಗೆ ಕಳುಹಿಸುತ್ತಿರುವ ಪಾಕ್!
    • ಇಲ್ಲಿ ಭಾವನೆ, ಅನಿವಾರ್ಯತೆ ಮತ್ತು ವಾಸ್ತವಕ್ಕೆ ಜಾಗ ಇಲ್ಲ!
    • ಅಯೋಧ್ಯೆ ರಾಮಮಂದಿರ ಪ್ರಾಣ ಪ್ರತಿಷ್ಟೆ ಡೇಟ್ ಫಿಕ್ಸ್!
    • ಮಾಂಸಾಹಾರಕ್ಕೆ ಹಲಾಲ್, ಸಸ್ಯಾಹಾರಕ್ಕೆ ಸಾತ್ವಿಕ್!
    • ಮದ್ಯ: ಗೋವಾ ಕನಿಷ್ಟ, ಕರ್ನಾಟಕ ಗರಿಷ್ಟ!
    • ರೈಲು ಬೋಗಿಗಳು ಆವತ್ತು ಮತ್ತು ಇವತ್ತು!
    • ಕಾಂಗ್ರೆಸ್ಸಿಗೆ ಇ.0.ಡಿ.ಯಾ ಮೈತ್ರಿಕೂಟದ ಒಳಗೆನೆ ಸ್ಪರ್ಧೆ!
    • ರಾಮ ಮಂದಿರ ಉದ್ಘಾಟನೆಯ ಬಳಿಕ ಗೋಧ್ರಾ ಹತ್ಯಾಕಾಂಡ ನಡೆಯಬಹುದು - ಠಾಕ್ರೆ
  • Popular Posts

    • 1
      ಶಿಕ್ಷಕರು ಇಲ್ಲ, ಬಸ್ಸು ಇಲ್ಲ, ಬಾರ್ ಇದೆ!
    • 2
      ಆತ್ಮಹತ್ಯೆ ಸೈಟ್ ಗೂಗಲ್ ಸರ್ಚ್ ಮಾಡಿದ್ರೆ ಪೊಲೀಸರಿಗೆ ಗೊತ್ತಾಗುತ್ತೆ!
    • 3
      ತನ್ನ ದೇಶದ ಭಿಕ್ಷುಕರನ್ನು ಅರಬ್ ರಾಷ್ಟ್ರಗಳಿಗೆ ಕಳುಹಿಸುತ್ತಿರುವ ಪಾಕ್!
    • 4
      ಇಲ್ಲಿ ಭಾವನೆ, ಅನಿವಾರ್ಯತೆ ಮತ್ತು ವಾಸ್ತವಕ್ಕೆ ಜಾಗ ಇಲ್ಲ!
    • 5
      ಅಯೋಧ್ಯೆ ರಾಮಮಂದಿರ ಪ್ರಾಣ ಪ್ರತಿಷ್ಟೆ ಡೇಟ್ ಫಿಕ್ಸ್!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search