• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured

ಭಾರತ ತೇರೆ ತುಕಡೇ ಹೋಂಗೇ ಗ್ಯಾಂಗ್ ನ ಉಮರ್ ಖಲೀದ್ ಗೆ ಜೆಎನ್ ಯು ಪ್ರವೇಶ ನಿಷೇಧ, ಕನ್ನಯ್ಯಗೆ 10 ಸಾವಿರ ದಂಡ

TNN Correspondent Posted On July 5, 2018
0


0
Shares
  • Share On Facebook
  • Tweet It

ದೆಹಲಿ: ದೇಶದ ಅನ್ನ ತಿಂದು ಭಾರತದ ಪ್ರತಿಷ್ಠಿತ ವಿಶ್ವವಿದ್ಯಾಲಯವಾದ ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದಲ್ಲಿ ಕಾಶ್ಮೀರ ಪ್ರತ್ಯೇಕತೆಗೆ ಪ್ರೋತ್ಸಾಹಿಸುವ ಹಾಗೂ ಭಯೋತ್ಪಾದಕ ಅಫ್ಜಲ್ ಗುರುಗೆ ನೀಡಿರುವ ಗಲ್ಲು ಶಿಕ್ಷೆ ವಿರೋಧಿ ಸೇರಿ ದೇಶವಿರೋಧಿ ಘೋಷಣೆಗಳನ್ನು ಕೂಗಿದ್ದ ವಿದ್ಯಾರ್ಥಿ ಮುಖಂಡ ಉಮರ್ ಖಲೀದ್ ಗೆ ಜೆಎನ್ ಯು ಉನ್ನತ ಮಟ್ಟದ ಸಮಿತಿ ಜೆಎನ್ ಯು ಪ್ರವೇಶವನ್ನು ನಿಷೇಧಿಸಿದೆ. ಅಲ್ಲದೇ ಅಫ್ಜಲ್ ಗುರುಗೆ ಬೆಂಬಲಿಸಿ ಘೋಷಣೆ ಕೂಗುವ ಆರೋಪದಲ್ಲಿ ಭಾಗಿಯಾಗಿರುವ ಕನ್ನಯ್ಯ ಕುಮಾರ್ ಗೆ 10,000 ರೂಪಾಯಿ ದಂಡವನ್ನು ವಿಧಿಸುವ ಮೂಲಕ ಜೆಎನ್ ಯು ದೇಶವಿರೋಧಿಗಳಿಗೆ ಸ್ಪಷ್ಟ ಸಂದೇಶವನ್ನು ನೀಡಿದೆ.

2016ರಲ್ಲಿ ಜೆಎನ್ ಯು ದಲ್ಲಿ ಕನ್ನಯ್ಯ ಕುಮಾರ ವಿಶ್ವವಿದ್ಯಾಲಯದ ನಿಯಮಗಳನ್ನು ಉಲ್ಲಂಘಿಸಿದ್ದ. ಅಲ್ಲದೇ ಭಯೋತ್ಪಾದಕ ಅಫ್ಜಲ್ ಗುರು ಪರ ಕಾಲೇಜಿನ ಕಾರ್ಯಕ್ರಮವೊಂದರಲ್ಲಿ ಘೋಷಣೆಗಳನ್ನು ಕೂಗಿದ್ದ. ಕನ್ನಯ್ಯಕುಮಾರ ಮತ್ತು ಉಮರ್ ಖಲೀದ್ ಇಬ್ಬರೂ ಜೆಎನ್ ಯು ವಿಶ್ವವಿದ್ಯಾಲಯದಲ್ಲಿ ಸಂಶೋಧನಾ ವಿದ್ಯಾರ್ಥಿಗಳಾಗಿ ಅಧ್ಯಯನ ಮಾಡುತ್ತಿದ್ದಾರೆ. ಉಮರ್ ಖಲೀದ್ ಗೆ ವಿವಿ 20,000 ದಂಢ ವಿಧಿಸಿದೆ.

ಕನ್ನಯ್ಯ ಮತ್ತು ಖಲೀದ್ ಜೊತೆಗೆ ಇನ್ನು ಇಬ್ಬರು ದೇಶ ವಿರೋಧಿ ಘೋಷಣೆಗಳನ್ನು ಕೂಗಿದ್ದ ವಿದ್ಯಾರ್ಥಿಗಳನ್ನು ಜೆಎನ್ ಯು ವಿಶ್ವವಿದ್ಯಾಲಯ ಪ್ರವೇಶಕ್ಕೆ ನಿಷೇಧವನ್ನು ಹೇರಲಾಗಿದೆ. ಇವರ ಸಹಪಾಠಿಗಳಾದ ಮುಜೇಬ್ ಬುಟ್ಟೋ ಮತ್ತು ಅನಿರ್ಬನ್ ಭಟ್ಟಾಚಾರ್ಯ ಎಂಬುವವರನ್ನು ಎರಡು ಸೆಮೆಸ್ಟರ್ ಗೆ ನಿಷೇಧ ಹೇರಲಾಗಿದೆ. ಈ ಮೂಲಕ ಜೆಎನ್ ಯ ಸೇರಿ ದೇಶದ ಯಾವುದೇ ವಿಶ್ವವಿದ್ಯಾಲಯದಲ್ಲಿ ದೇಶವಿರೋಧಿ ಚಟುವಟಿಕೆಗಳಲ್ಲಿ ಭಾಗಿಯಾಗಿರುವ ಸೂಕ್ತ ಮತ್ತು ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂಬ ಸ್ಪಷ್ಟ ಸಂದೇಶವನ್ನು ಜೆಎನ್ ಯು ರವಾನಿಸಿದೆ.

0
Shares
  • Share On Facebook
  • Tweet It




Trending Now
ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
Tulunadu News February 4, 2026
ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
Tulunadu News January 30, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
  • Popular Posts

    • 1
      ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • 2
      ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!

  • Privacy Policy
  • Contact
© Tulunadu Infomedia.

Press enter/return to begin your search