• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಮಂಗಳೂರಿಗೂ ಬಂದಿದೆ  ಫಾರ್ಮಾಲಿನ್‌’ ,”ಅಮೋನಿಯಾ’ ರಾಸಾಯನಿಕ ವಸ್ತುಗಳನ್ನು ಪತ್ತೆ ಹಚ್ಚುವ ಕಿಟ್‌ !

Tulunadu News Posted On July 6, 2018


  • Share On Facebook
  • Tweet It

ಮಂಗಳೂರು: ಮೀನಿನ ತಾಜಾತನ ಕಾಪಾಡುವುದಕ್ಕೆ ಬೆರೆಸಬಹುದಾದ ವಿಷಕಾರಿ “ಫಾರ್ಮಾಲಿನ್‌’ ಅಥವಾ “ಅಮೋನಿಯಾ’ ರಾಸಾಯನಿಕ ವಸ್ತುಗಳನ್ನು ಪತ್ತೆ ಹಚ್ಚುವ ಕಿಟ್‌ ಇದೀಗ ಮಂಗಳೂರಿಗೂ ಬಂದಿದೆ. ಈ ಕಿಟ್‌ ಅನ್ನು ಕೇರಳದ ಕೊಚ್ಚಿಯಲ್ಲಿರುವ ಕೇಂದ್ರ ಮೀನುಗಾರಿಕೆ ತಂತ್ರಜ್ಞಾನ ಸಂಸ್ಥೆಯಿಂದ ಗುರುವಾರ ತರಿಸಿ ಕೊಳ್ಳಲಾಗಿದೆ.

ಜಿಲ್ಲೆಯ ಆಹಾರ ಇಲಾಖೆಯ ಅಧಿಕಾರಿಗಳ ಜತೆಗೂಡಿ ಶುಕ್ರವಾರ ನಗರದ ಕೆಲವು ಮಾರುಕಟ್ಟೆ ಸೇರಿದಂತೆ ಮೀನು ಮಾರಾಟವಾಗುವ ಜಾಗಳಲ್ಲಿ ರಾಸಾಯನಿಕ ಮಿಶ್ರಣ ಕುರಿತಂತೆ ತಪಾಸಣೆ ನಡೆಸಲಾಗುತ್ತದೆ. ಹೀಗಾಗಿ ಮುಂದಿನ ದಿನಗಳಲ್ಲಿ ಸಾರ್ವಜನಿಕರು ಅದರಲ್ಲಿಯೂ ಮೀನು ಪ್ರಿಯರು, ತಾವು ಖರೀದಿಸುವ ಮೀನಿನಲ್ಲಿ ರಾಸಾಯನಿಕ ಪದಾರ್ಥ ಬೆರೆಸಿರುವ ಬಗ್ಗೆ ಅನುಮಾನ ಉಂಟಾದರೆ ನಗರದ ಎಕ್ಕೂರಿನಲ್ಲಿರುವ ಮೀನುಗಾರಿಕಾ ಕಾಲೇಜಿನಲ್ಲಿ ಗುಣಮಟ್ಟ ಪರೀಕ್ಷಿಸಿ ಕೊಳ್ಳಬಹುದಾಗಿದೆ.

ಮೀನುಗಾರಿಕೆ ನಿಷೇಧ ಅವಧಿಯಲ್ಲಿ ಹೊರರಾಜ್ಯಗಳಿಂದ ಬರುವ ಮೀನುಗಳಲ್ಲಿ ಕ್ಯಾನ್ಸರ್‌ ಕಾರಕ ಫಾರ್ಮಾ ಲಿನ್‌ ರಾಸಾಯನಿಕ ಅಂಶವಿದೆ ಎಂಬ ಸುದ್ದಿ ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ಹರಡುತ್ತಿದ್ದಂತೆ ಕರಾ ವಳಿಯಲ್ಲೂ ಆತಂಕ ಸೃಷ್ಟಿಯಾಗಿತ್ತು. ಈ ಹಿನ್ನೆಲೆಯಲ್ಲಿ ಮೀನುಗಾರಿಕಾ ಕಾಲೇಜಿನ ತಂಡವು ಕೊಚ್ಚಿಗೆ ತೆರಳಿ ಗುರುವಾರ ಕಿಟ್‌ ಮಂಗಳೂರಿಗೆ ತಂದಿದೆ.

  • Share On Facebook
  • Tweet It


- Advertisement -


Trending Now
ಪಾಲಿಕೆಯ ಹೊಸ ಕಮೀಷನರ್ ಕಿವಿ ಹಿತ್ತಾಳೆಯಾಗದಿದ್ದರೆ ಅಷ್ಟೇ ಸಾಕು!!
Tulunadu News February 6, 2023
ಸಾವಿರ ಕೋಟಿ ಖರ್ಚು, ಪಾರ್ಕಿಂಗ್ ಗಾಗಿ ರಸ್ತೆ ಅಗಲ!!
Tulunadu News February 3, 2023
Leave A Reply

  • Recent Posts

    • ಪಾಲಿಕೆಯ ಹೊಸ ಕಮೀಷನರ್ ಕಿವಿ ಹಿತ್ತಾಳೆಯಾಗದಿದ್ದರೆ ಅಷ್ಟೇ ಸಾಕು!!
    • ಸಾವಿರ ಕೋಟಿ ಖರ್ಚು, ಪಾರ್ಕಿಂಗ್ ಗಾಗಿ ರಸ್ತೆ ಅಗಲ!!
    • ಶರಣ್ ಪಂಪ್ವೆಲ್ ಎಚ್ಚರಿಕೆ ಕೊಡುವ ಸನ್ನಿವೇಶ ತಂದದ್ದೇ ಮತಾಂಧರು!!
    • ಕಂಬಳಕ್ಕೆ ನಟಿಯರು ಮತ್ತು ಅಸಹ್ಯ ಮನಸ್ಸಿನ ದುರುಳರೂ....
    • ಗ್ರಾಹಕರಿಗೆ ಮಾತ್ರ ಈ ಜಾಗ ಎಂದು ಹೇಳಲು ಸಾಧ್ಯವಿಲ್ಲ!!
    • ಸೌದಿ ಮುಂದಿದೆ ಆರೋಪಿಗಳಾ ಅಥವಾ ಭಾರತವಾ ಎನ್ನುವ ಆಯ್ಕೆ!!
    • ಮಂಗಳೂರಿನಲ್ಲಿ ಪೈಪುಗಳ ಮೇಲಿನ ಮಣ್ಣು ತೆಗೆಸಬಲ್ಲ ಗಂಡಸರು ಯಾರಿದ್ದಾರೆ!!
    • ಮೋದಿ ವಿರುದ್ಧ ಬಿಬಿಸಿ, ಪರ ಆಂಟೋನಿ!!
    • ಮುತಾಲಿಕ್ ಖಡ್ಗಕ್ಕೆ ಸಾಣೆ ಹಾಕಿಸಿಕೊಟ್ಟ ಚಾಣಾಕ್ಷ ಯಾರು?
    • ವೆನಲಾಕ್ ನಲ್ಲಿ ಕ್ಯಾನ್ಸರ್ ಚಿಕಿತ್ಸಾ ಘಟಕ ಯಾಕಿಲ್ಲ!!
  • Popular Posts

    • 1
      ಪಾಲಿಕೆಯ ಹೊಸ ಕಮೀಷನರ್ ಕಿವಿ ಹಿತ್ತಾಳೆಯಾಗದಿದ್ದರೆ ಅಷ್ಟೇ ಸಾಕು!!
    • 2
      ಸಾವಿರ ಕೋಟಿ ಖರ್ಚು, ಪಾರ್ಕಿಂಗ್ ಗಾಗಿ ರಸ್ತೆ ಅಗಲ!!
    • 3
      ಶರಣ್ ಪಂಪ್ವೆಲ್ ಎಚ್ಚರಿಕೆ ಕೊಡುವ ಸನ್ನಿವೇಶ ತಂದದ್ದೇ ಮತಾಂಧರು!!


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search