• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಅಭಿಪ್ರಾಯ ಸುದ್ದಿ 

ಕರಾವಳಿಗರ ವಿರುದ್ಧ ಬಜೆಟ್ ಮೂಲಕ ಹಗೆ ತೀರಿಸಿಕೊಂಡ ಕಾಂಗ್ರೆಸ್-ಜೆಡಿಎಸ್

Tulunadu News Posted On July 6, 2018
0


0
Shares
  • Share On Facebook
  • Tweet It

ಮಂಗಳೂರು: ರಾಜ್ಯದ ಮೈತ್ರಿ ಸರ್ಕಾರದ ಚೊಚ್ಚಲ ಬಜೆಟ್ ಮಂಡಿಸಲಾಗಿದೆ. ಬಜೆಟ್ ನಲ್ಲಿ ಕರಾವಳಿ ಭಾಗವನ್ನು ಸಂಪೂರ್ಣ ನಿರ್ಲಕ್ಷಿಸಿದ್ದು, ಹಳೆ ಮೈಸೂರು ಭಾಗಕ್ಕೆ ಮಾತ್ರ ಬಜೆಟ್ ಸೀಮಿತವಾಗಿಸಿದ್ದಾರೆ ಎಂಬ ಆಕ್ರೋಶ ಕರಾವಳಿಯಾದ್ಯಂತ ವ್ಯಕ್ತವಾಗುತ್ತಿದೆ.

 ಬಜೆಟ್ ನಲ್ಲಿ ಎಲ್ಲಿಯೂ ಕರಾವಳಿ ಅಭಿವೃದ್ಧಿಗೆ ಒತ್ತು ನೀಡದಿರುವುದು ಕರಾವಳಿ ಭಾಗದ ಶಾಸಕರ ಆಕ್ರೋಶಕ್ಕೆ ಕಾರಣವಾಗಿದೆ. ಸಂಪೂರ್ಣ ಬಜೆಟ್ ನಲ್ಲಿ ಎಲ್ಲಿಯೂ “ಕರಾವಳಿ ” ಅನ್ನುವ ಪದವನ್ನೇ ಬಳಸದ ಕುಮಾರ ಸ್ವಾಮಿ ಚುನಾವಣೆಯ ಫಲಿತಾಂಶದ ಪ್ರತಿಕಾರ ತೀರಿಸಿಕೊಂಡಿದ್ದಾರೆ ಎನ್ನುವ ಆರೋಪ ಕೇಳಿ ಬರುತ್ತಿದೆ.

ಈ ಬಜೆಟ್ ನಲ್ಲಿ ಕರಾವಳಿಯ ಅಡಿಕೆ , ರಬ್ಬರ್ ಬೆಳೆಗಾರರನ್ನು ಕಡೆಗಣಿಸಲಾಗಿದೆ. ಅಡಿಕೆ ಮತ್ತು ರಬ್ಬರ್ ಬೆಳೆಗಾಗರರು ಈ ಬಜೆಟ್ ನಲ್ಲಿ ಬೆಂಬಲ ಬೆಲೆ ಘೋಷಣೆ ಯಾಗುವ ನಿರೀಕ್ಷೆಯಲ್ಲಿದ್ದರು . ರಾಜ್ಯ ಸರ್ಕಾರ ಅಡಿಕೆ ಹಾಗು ರಬ್ಬರ್ ಬೆಳೆಗಾರರ ಹಿತಕಾಪಾಡಲಿದೆ ಎಂಬ ಭರವಸೆಯನ್ನು ಕೃಷಿಕರು ಹೊಂದಿದ್ದರು ಆದರೆ ಅಡಿಕೆ ಹಾಗು ರಬ್ಬರ್ ಬೆಳೆಗಾರರ ನಿರೀಕ್ಷೆಯನ್ನು ಕುಮಾರಸ್ವಾಮಿ ಹುಸಿಯಾಗಿಸಿದ್ದಾರೆ. ಈ ಬಜೆಟ್ ನಲ್ಲಿ ಯೋಜನೆಗಳ ಘೋಷಣೆ ಆಗುವ ನಿರೀಕ್ಷೆಯಲ್ಲಿದ್ದ ಎಂಡೋ ಪೀಡಿತರಿಗೆ ನಿರಾಶೆಯುಂಟಾಗಿದೆ. ಕರಾವಳಿ ಭಾಗದಲ್ಲಿ ಪ್ರತ್ಯೇಕ ಮರಳು ನೀತಿ ಘೋಷಣೆ ಯಾಗುವ ನಿರೀಕ್ಷೆಯಲ್ಲಿದ್ದ ಕರಾವಳಿಗರಿಗೆ ಮುಖ್ಯಮಂತ್ರಿ ಮಂಡಿಸಿದ ಇಂದಿನ ಬಜೆಟ್ ಶಾಕ್ ನೀಡಿದೆ.

ಕರಾವಳಿ ಭಾಗದ ಅಭಿವೃದ್ಧಿಗೆ ಯೋಜನೆಗಳ ಘೋಷಣೆಯಾಗದಿರುವುದರ ವಿರುದ್ಧ ಕರಾವಳಿ ಭಾಗದ ಶಾಸಕರು ಕಿಡಿಕಾರಿದ್ದಾರೆ.

ಕಳೆದ ಚುನಾವಣೆಯಲ್ಲಿ ಕರಾವಳಿಯುದ್ದಕ್ಕೂ ಕಾಂಗ್ರೆಸ್ ಹಾಗು ಜೆಡಿಎಸ್ ಗೆ ಹಿನಾಯ ಸೋಲನುಭವಿಸಿದ್ದೇ ಈ ನಿರ್ಲಕ್ಷಕ್ಕೆ ಕಾರಣ ಎಂದು ಹೇಳಲಾಗುತ್ತಿದೆ. ದಕ್ಷಿಣಕನ್ನಡ ಜಿಲ್ಲೆಯ 8 ವಿಧಾನಸಭಾ ಕ್ಷೇತ್ರಗಳ ಪೈಕಿ 7 ರಲ್ಲಿ ಬಿಜೆಪಿ ಗೆಲುವು ಸಾಧಿಸಿದೆ.

ಉಡುಪಿಯ ಎಲ್ಲಾ 5 ವಿಧಾನಸಭಾ ಕ್ಷೇತ್ರ ಬಿಜೆಪಿ ತೆಕ್ಕೆಗೆ ಬಿದ್ದಿದೆ. ಕರಾವಳಿ ಭಾಗದಲ್ಲಿ ಕಾಂಗ್ರೆಸ್ ನ ಈ ಹೀನಾಯ ಸೋಲಿಗೆ ಬಜೆಟ್ ನಲ್ಲಿ ಹಗೆ ತೀರಿಸಿಕೊಳ್ಳಲಾಗಿದೆ ಎಂದು ಅರೋಪಿಸಲಾಗಿದೆ.

ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಮುಖಾಂತರ ಕರಾವಳಿಗೆ ಯಾವುದೇ ಅಭಿವೃದ್ದಿ ಯೋಜನೆಗಳು ಬಾರದಂತೆ ಕಾಂಗ್ರೆಸ್ ನೇತೃತ್ವ ವಹಿಸಿದೆ ಎಂಬ ಆರೋಪ ಕೇಳಿ ಬರುತ್ತಿದೆ. ಬಜೆಟ್ ನಲ್ಲಿ ಕರಾವಳಿ ಭಾಗದ ಈ ನಿರ್ಲಕ್ಷ್ಯ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಕರಾವಳಿಗರೂ ತಕ್ಕ ಉತ್ತರ ನೀಡಲಿದ್ದಾರೆ ಎಂದು ವಿಮರ್ಶಿಸಲಾಗುತ್ತಿದೆ.

0
Shares
  • Share On Facebook
  • Tweet It


- Advertisement -


Trending Now
ಪೊಲೀಸರ ಮಧ್ಯರಾತ್ರಿ ಕಾರ್ಯಾಚರಣೆ: 20 ಲಕ್ಷ ರೂ ಮಾನನಷ್ಟ ಕೋರಿ ಅರ್ಜಿ: ಅರುಣ್ ಶ್ಯಾಮ್ ವಾದ...
Tulunadu News June 20, 2025
ಮಂಗಳೂರಿನಲ್ಲಿ ಮಗುವಿನ ಅಪಹರಣ, ಮಾರಾಟಕ್ಕೆ ಯತ್ನ - ಒಬ್ಬನ ಬಂಧನ!
Tulunadu News June 18, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಪೊಲೀಸರ ಮಧ್ಯರಾತ್ರಿ ಕಾರ್ಯಾಚರಣೆ: 20 ಲಕ್ಷ ರೂ ಮಾನನಷ್ಟ ಕೋರಿ ಅರ್ಜಿ: ಅರುಣ್ ಶ್ಯಾಮ್ ವಾದ...
    • ಮಂಗಳೂರಿನಲ್ಲಿ ಮಗುವಿನ ಅಪಹರಣ, ಮಾರಾಟಕ್ಕೆ ಯತ್ನ - ಒಬ್ಬನ ಬಂಧನ!
    • ಫಾಸ್ಟ್ ಟ್ಯಾಗ್ ಇನ್ನು ವರ್ಷದ ಪಾಸ್ ನಲ್ಲಿ ಲಭ್ಯ: ಎಷ್ಟು ಕೊಟ್ಟರೆ ಸಾಕು ಗೊತ್ತಾ?
    • ಭೀಕರ ರಸ್ತೆ ಅಪಘಾತ- ದಕ ಜಿಲ್ಲಾ NSUI ಉಪಾಧ್ಯಕ್ಷ ಸೇರಿ ಇಬ್ಬರು ಯುವಕರು ಸಾವು!
    • ವಿಮಾನ ದುರಂತ ಸ್ಥಳದಲ್ಲಿ ಸಿಕ್ಕಿವೆ ಸಾಕಷ್ಟು ಚಿನ್ನ, ಹಣ, ಭಗವದ್ಗೀತೆ!
    • ಲಂಡನ್ನಿಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ ಕೊನೆಯ ಕ್ಷಣದಲ್ಲಿ ಪ್ರಯಾಣ ರದ್ದು!
    • ಗಿರೀಶ್ ಭಾರದ್ವಾಜ್ ಮನವಿಗೆ ಸ್ಪಂದನೆ: ಹಿಂದೂ ಮುಖಂಡರ ರಾತ್ರಿ ಮನೆ ಭೇಟಿಯ ಬಗ್ಗೆ ವರದಿ ಕೇಳಿದ ಪೊಲೀಸ್ ದೂರು ಪ್ರಾಧಿಕಾರ!
    • ಹಿಂದೂಗಳು 3 ಮಕ್ಕಳನ್ನು ಹೆರಲು ಕೊಪ್ಪಳದಲ್ಲಿ ತೊಗಾಡಿಯಾ ಕರೆ!
    • ಬೈಕ್ ಟ್ಯಾಕ್ಸಿ ಬ್ಯಾನ್ ನಿಂದ ಬೆಂಗಳೂರಿನ 1 ಲಕ್ಷ ಯುವಕರ ಉದ್ಯೋಗಕ್ಕೆ ಕುತ್ತು!
    • ಯುಪಿಐನಲ್ಲಿ ಇನ್ನು ಹಣ ವರ್ಗಾವಣೆಗೆ 15 ಸೆಕೆಂಡ್ ಸಾಕು!
  • Popular Posts

    • 1
      ಪೊಲೀಸರ ಮಧ್ಯರಾತ್ರಿ ಕಾರ್ಯಾಚರಣೆ: 20 ಲಕ್ಷ ರೂ ಮಾನನಷ್ಟ ಕೋರಿ ಅರ್ಜಿ: ಅರುಣ್ ಶ್ಯಾಮ್ ವಾದ...
    • 2
      ಮಂಗಳೂರಿನಲ್ಲಿ ಮಗುವಿನ ಅಪಹರಣ, ಮಾರಾಟಕ್ಕೆ ಯತ್ನ - ಒಬ್ಬನ ಬಂಧನ!
    • 3
      ಫಾಸ್ಟ್ ಟ್ಯಾಗ್ ಇನ್ನು ವರ್ಷದ ಪಾಸ್ ನಲ್ಲಿ ಲಭ್ಯ: ಎಷ್ಟು ಕೊಟ್ಟರೆ ಸಾಕು ಗೊತ್ತಾ?
    • 4
      ಭೀಕರ ರಸ್ತೆ ಅಪಘಾತ- ದಕ ಜಿಲ್ಲಾ NSUI ಉಪಾಧ್ಯಕ್ಷ ಸೇರಿ ಇಬ್ಬರು ಯುವಕರು ಸಾವು!
    • 5
      ವಿಮಾನ ದುರಂತ ಸ್ಥಳದಲ್ಲಿ ಸಿಕ್ಕಿವೆ ಸಾಕಷ್ಟು ಚಿನ್ನ, ಹಣ, ಭಗವದ್ಗೀತೆ!

  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search