• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಅಭಿಪ್ರಾಯ ಸುದ್ದಿ 

ಕರಾವಳಿಗರ ವಿರುದ್ಧ ಬಜೆಟ್ ಮೂಲಕ ಹಗೆ ತೀರಿಸಿಕೊಂಡ ಕಾಂಗ್ರೆಸ್-ಜೆಡಿಎಸ್

Tulunadu News Posted On July 6, 2018
0


0
Shares
  • Share On Facebook
  • Tweet It

ಮಂಗಳೂರು: ರಾಜ್ಯದ ಮೈತ್ರಿ ಸರ್ಕಾರದ ಚೊಚ್ಚಲ ಬಜೆಟ್ ಮಂಡಿಸಲಾಗಿದೆ. ಬಜೆಟ್ ನಲ್ಲಿ ಕರಾವಳಿ ಭಾಗವನ್ನು ಸಂಪೂರ್ಣ ನಿರ್ಲಕ್ಷಿಸಿದ್ದು, ಹಳೆ ಮೈಸೂರು ಭಾಗಕ್ಕೆ ಮಾತ್ರ ಬಜೆಟ್ ಸೀಮಿತವಾಗಿಸಿದ್ದಾರೆ ಎಂಬ ಆಕ್ರೋಶ ಕರಾವಳಿಯಾದ್ಯಂತ ವ್ಯಕ್ತವಾಗುತ್ತಿದೆ.

 ಬಜೆಟ್ ನಲ್ಲಿ ಎಲ್ಲಿಯೂ ಕರಾವಳಿ ಅಭಿವೃದ್ಧಿಗೆ ಒತ್ತು ನೀಡದಿರುವುದು ಕರಾವಳಿ ಭಾಗದ ಶಾಸಕರ ಆಕ್ರೋಶಕ್ಕೆ ಕಾರಣವಾಗಿದೆ. ಸಂಪೂರ್ಣ ಬಜೆಟ್ ನಲ್ಲಿ ಎಲ್ಲಿಯೂ “ಕರಾವಳಿ ” ಅನ್ನುವ ಪದವನ್ನೇ ಬಳಸದ ಕುಮಾರ ಸ್ವಾಮಿ ಚುನಾವಣೆಯ ಫಲಿತಾಂಶದ ಪ್ರತಿಕಾರ ತೀರಿಸಿಕೊಂಡಿದ್ದಾರೆ ಎನ್ನುವ ಆರೋಪ ಕೇಳಿ ಬರುತ್ತಿದೆ.

ಈ ಬಜೆಟ್ ನಲ್ಲಿ ಕರಾವಳಿಯ ಅಡಿಕೆ , ರಬ್ಬರ್ ಬೆಳೆಗಾರರನ್ನು ಕಡೆಗಣಿಸಲಾಗಿದೆ. ಅಡಿಕೆ ಮತ್ತು ರಬ್ಬರ್ ಬೆಳೆಗಾಗರರು ಈ ಬಜೆಟ್ ನಲ್ಲಿ ಬೆಂಬಲ ಬೆಲೆ ಘೋಷಣೆ ಯಾಗುವ ನಿರೀಕ್ಷೆಯಲ್ಲಿದ್ದರು . ರಾಜ್ಯ ಸರ್ಕಾರ ಅಡಿಕೆ ಹಾಗು ರಬ್ಬರ್ ಬೆಳೆಗಾರರ ಹಿತಕಾಪಾಡಲಿದೆ ಎಂಬ ಭರವಸೆಯನ್ನು ಕೃಷಿಕರು ಹೊಂದಿದ್ದರು ಆದರೆ ಅಡಿಕೆ ಹಾಗು ರಬ್ಬರ್ ಬೆಳೆಗಾರರ ನಿರೀಕ್ಷೆಯನ್ನು ಕುಮಾರಸ್ವಾಮಿ ಹುಸಿಯಾಗಿಸಿದ್ದಾರೆ. ಈ ಬಜೆಟ್ ನಲ್ಲಿ ಯೋಜನೆಗಳ ಘೋಷಣೆ ಆಗುವ ನಿರೀಕ್ಷೆಯಲ್ಲಿದ್ದ ಎಂಡೋ ಪೀಡಿತರಿಗೆ ನಿರಾಶೆಯುಂಟಾಗಿದೆ. ಕರಾವಳಿ ಭಾಗದಲ್ಲಿ ಪ್ರತ್ಯೇಕ ಮರಳು ನೀತಿ ಘೋಷಣೆ ಯಾಗುವ ನಿರೀಕ್ಷೆಯಲ್ಲಿದ್ದ ಕರಾವಳಿಗರಿಗೆ ಮುಖ್ಯಮಂತ್ರಿ ಮಂಡಿಸಿದ ಇಂದಿನ ಬಜೆಟ್ ಶಾಕ್ ನೀಡಿದೆ.

ಕರಾವಳಿ ಭಾಗದ ಅಭಿವೃದ್ಧಿಗೆ ಯೋಜನೆಗಳ ಘೋಷಣೆಯಾಗದಿರುವುದರ ವಿರುದ್ಧ ಕರಾವಳಿ ಭಾಗದ ಶಾಸಕರು ಕಿಡಿಕಾರಿದ್ದಾರೆ.

ಕಳೆದ ಚುನಾವಣೆಯಲ್ಲಿ ಕರಾವಳಿಯುದ್ದಕ್ಕೂ ಕಾಂಗ್ರೆಸ್ ಹಾಗು ಜೆಡಿಎಸ್ ಗೆ ಹಿನಾಯ ಸೋಲನುಭವಿಸಿದ್ದೇ ಈ ನಿರ್ಲಕ್ಷಕ್ಕೆ ಕಾರಣ ಎಂದು ಹೇಳಲಾಗುತ್ತಿದೆ. ದಕ್ಷಿಣಕನ್ನಡ ಜಿಲ್ಲೆಯ 8 ವಿಧಾನಸಭಾ ಕ್ಷೇತ್ರಗಳ ಪೈಕಿ 7 ರಲ್ಲಿ ಬಿಜೆಪಿ ಗೆಲುವು ಸಾಧಿಸಿದೆ.

ಉಡುಪಿಯ ಎಲ್ಲಾ 5 ವಿಧಾನಸಭಾ ಕ್ಷೇತ್ರ ಬಿಜೆಪಿ ತೆಕ್ಕೆಗೆ ಬಿದ್ದಿದೆ. ಕರಾವಳಿ ಭಾಗದಲ್ಲಿ ಕಾಂಗ್ರೆಸ್ ನ ಈ ಹೀನಾಯ ಸೋಲಿಗೆ ಬಜೆಟ್ ನಲ್ಲಿ ಹಗೆ ತೀರಿಸಿಕೊಳ್ಳಲಾಗಿದೆ ಎಂದು ಅರೋಪಿಸಲಾಗಿದೆ.

ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಮುಖಾಂತರ ಕರಾವಳಿಗೆ ಯಾವುದೇ ಅಭಿವೃದ್ದಿ ಯೋಜನೆಗಳು ಬಾರದಂತೆ ಕಾಂಗ್ರೆಸ್ ನೇತೃತ್ವ ವಹಿಸಿದೆ ಎಂಬ ಆರೋಪ ಕೇಳಿ ಬರುತ್ತಿದೆ. ಬಜೆಟ್ ನಲ್ಲಿ ಕರಾವಳಿ ಭಾಗದ ಈ ನಿರ್ಲಕ್ಷ್ಯ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಕರಾವಳಿಗರೂ ತಕ್ಕ ಉತ್ತರ ನೀಡಲಿದ್ದಾರೆ ಎಂದು ವಿಮರ್ಶಿಸಲಾಗುತ್ತಿದೆ.

0
Shares
  • Share On Facebook
  • Tweet It




Trending Now
ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
Tulunadu News January 23, 2026
ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
Tulunadu News January 20, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
  • Popular Posts

    • 1
      ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • 2
      ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!

  • Privacy Policy
  • Contact
© Tulunadu Infomedia.

Press enter/return to begin your search