• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಅಭಿಪ್ರಾಯ ಸುದ್ದಿ 

ಕರಾವಳಿಗರ ವಿರುದ್ಧ ಬಜೆಟ್ ಮೂಲಕ ಹಗೆ ತೀರಿಸಿಕೊಂಡ ಕಾಂಗ್ರೆಸ್-ಜೆಡಿಎಸ್

Tulunadu News Posted On July 6, 2018
0


0
Shares
  • Share On Facebook
  • Tweet It

ಮಂಗಳೂರು: ರಾಜ್ಯದ ಮೈತ್ರಿ ಸರ್ಕಾರದ ಚೊಚ್ಚಲ ಬಜೆಟ್ ಮಂಡಿಸಲಾಗಿದೆ. ಬಜೆಟ್ ನಲ್ಲಿ ಕರಾವಳಿ ಭಾಗವನ್ನು ಸಂಪೂರ್ಣ ನಿರ್ಲಕ್ಷಿಸಿದ್ದು, ಹಳೆ ಮೈಸೂರು ಭಾಗಕ್ಕೆ ಮಾತ್ರ ಬಜೆಟ್ ಸೀಮಿತವಾಗಿಸಿದ್ದಾರೆ ಎಂಬ ಆಕ್ರೋಶ ಕರಾವಳಿಯಾದ್ಯಂತ ವ್ಯಕ್ತವಾಗುತ್ತಿದೆ.

 ಬಜೆಟ್ ನಲ್ಲಿ ಎಲ್ಲಿಯೂ ಕರಾವಳಿ ಅಭಿವೃದ್ಧಿಗೆ ಒತ್ತು ನೀಡದಿರುವುದು ಕರಾವಳಿ ಭಾಗದ ಶಾಸಕರ ಆಕ್ರೋಶಕ್ಕೆ ಕಾರಣವಾಗಿದೆ. ಸಂಪೂರ್ಣ ಬಜೆಟ್ ನಲ್ಲಿ ಎಲ್ಲಿಯೂ “ಕರಾವಳಿ ” ಅನ್ನುವ ಪದವನ್ನೇ ಬಳಸದ ಕುಮಾರ ಸ್ವಾಮಿ ಚುನಾವಣೆಯ ಫಲಿತಾಂಶದ ಪ್ರತಿಕಾರ ತೀರಿಸಿಕೊಂಡಿದ್ದಾರೆ ಎನ್ನುವ ಆರೋಪ ಕೇಳಿ ಬರುತ್ತಿದೆ.

ಈ ಬಜೆಟ್ ನಲ್ಲಿ ಕರಾವಳಿಯ ಅಡಿಕೆ , ರಬ್ಬರ್ ಬೆಳೆಗಾರರನ್ನು ಕಡೆಗಣಿಸಲಾಗಿದೆ. ಅಡಿಕೆ ಮತ್ತು ರಬ್ಬರ್ ಬೆಳೆಗಾಗರರು ಈ ಬಜೆಟ್ ನಲ್ಲಿ ಬೆಂಬಲ ಬೆಲೆ ಘೋಷಣೆ ಯಾಗುವ ನಿರೀಕ್ಷೆಯಲ್ಲಿದ್ದರು . ರಾಜ್ಯ ಸರ್ಕಾರ ಅಡಿಕೆ ಹಾಗು ರಬ್ಬರ್ ಬೆಳೆಗಾರರ ಹಿತಕಾಪಾಡಲಿದೆ ಎಂಬ ಭರವಸೆಯನ್ನು ಕೃಷಿಕರು ಹೊಂದಿದ್ದರು ಆದರೆ ಅಡಿಕೆ ಹಾಗು ರಬ್ಬರ್ ಬೆಳೆಗಾರರ ನಿರೀಕ್ಷೆಯನ್ನು ಕುಮಾರಸ್ವಾಮಿ ಹುಸಿಯಾಗಿಸಿದ್ದಾರೆ. ಈ ಬಜೆಟ್ ನಲ್ಲಿ ಯೋಜನೆಗಳ ಘೋಷಣೆ ಆಗುವ ನಿರೀಕ್ಷೆಯಲ್ಲಿದ್ದ ಎಂಡೋ ಪೀಡಿತರಿಗೆ ನಿರಾಶೆಯುಂಟಾಗಿದೆ. ಕರಾವಳಿ ಭಾಗದಲ್ಲಿ ಪ್ರತ್ಯೇಕ ಮರಳು ನೀತಿ ಘೋಷಣೆ ಯಾಗುವ ನಿರೀಕ್ಷೆಯಲ್ಲಿದ್ದ ಕರಾವಳಿಗರಿಗೆ ಮುಖ್ಯಮಂತ್ರಿ ಮಂಡಿಸಿದ ಇಂದಿನ ಬಜೆಟ್ ಶಾಕ್ ನೀಡಿದೆ.

ಕರಾವಳಿ ಭಾಗದ ಅಭಿವೃದ್ಧಿಗೆ ಯೋಜನೆಗಳ ಘೋಷಣೆಯಾಗದಿರುವುದರ ವಿರುದ್ಧ ಕರಾವಳಿ ಭಾಗದ ಶಾಸಕರು ಕಿಡಿಕಾರಿದ್ದಾರೆ.

ಕಳೆದ ಚುನಾವಣೆಯಲ್ಲಿ ಕರಾವಳಿಯುದ್ದಕ್ಕೂ ಕಾಂಗ್ರೆಸ್ ಹಾಗು ಜೆಡಿಎಸ್ ಗೆ ಹಿನಾಯ ಸೋಲನುಭವಿಸಿದ್ದೇ ಈ ನಿರ್ಲಕ್ಷಕ್ಕೆ ಕಾರಣ ಎಂದು ಹೇಳಲಾಗುತ್ತಿದೆ. ದಕ್ಷಿಣಕನ್ನಡ ಜಿಲ್ಲೆಯ 8 ವಿಧಾನಸಭಾ ಕ್ಷೇತ್ರಗಳ ಪೈಕಿ 7 ರಲ್ಲಿ ಬಿಜೆಪಿ ಗೆಲುವು ಸಾಧಿಸಿದೆ.

ಉಡುಪಿಯ ಎಲ್ಲಾ 5 ವಿಧಾನಸಭಾ ಕ್ಷೇತ್ರ ಬಿಜೆಪಿ ತೆಕ್ಕೆಗೆ ಬಿದ್ದಿದೆ. ಕರಾವಳಿ ಭಾಗದಲ್ಲಿ ಕಾಂಗ್ರೆಸ್ ನ ಈ ಹೀನಾಯ ಸೋಲಿಗೆ ಬಜೆಟ್ ನಲ್ಲಿ ಹಗೆ ತೀರಿಸಿಕೊಳ್ಳಲಾಗಿದೆ ಎಂದು ಅರೋಪಿಸಲಾಗಿದೆ.

ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಮುಖಾಂತರ ಕರಾವಳಿಗೆ ಯಾವುದೇ ಅಭಿವೃದ್ದಿ ಯೋಜನೆಗಳು ಬಾರದಂತೆ ಕಾಂಗ್ರೆಸ್ ನೇತೃತ್ವ ವಹಿಸಿದೆ ಎಂಬ ಆರೋಪ ಕೇಳಿ ಬರುತ್ತಿದೆ. ಬಜೆಟ್ ನಲ್ಲಿ ಕರಾವಳಿ ಭಾಗದ ಈ ನಿರ್ಲಕ್ಷ್ಯ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಕರಾವಳಿಗರೂ ತಕ್ಕ ಉತ್ತರ ನೀಡಲಿದ್ದಾರೆ ಎಂದು ವಿಮರ್ಶಿಸಲಾಗುತ್ತಿದೆ.

0
Shares
  • Share On Facebook
  • Tweet It




Trending Now
ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
Tulunadu News April 14, 2026
ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
Tulunadu News April 7, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
  • Popular Posts

    • 1
      ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!

  • Privacy Policy
  • Contact
© Tulunadu Infomedia.

Press enter/return to begin your search