• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಅಭಿಪ್ರಾಯ ಸುದ್ದಿ 

ಕರಾವಳಿಗರ ವಿರುದ್ಧ ಬಜೆಟ್ ಮೂಲಕ ಹಗೆ ತೀರಿಸಿಕೊಂಡ ಕಾಂಗ್ರೆಸ್-ಜೆಡಿಎಸ್

Tulunadu News Posted On July 6, 2018
0


0
Shares
  • Share On Facebook
  • Tweet It

ಮಂಗಳೂರು: ರಾಜ್ಯದ ಮೈತ್ರಿ ಸರ್ಕಾರದ ಚೊಚ್ಚಲ ಬಜೆಟ್ ಮಂಡಿಸಲಾಗಿದೆ. ಬಜೆಟ್ ನಲ್ಲಿ ಕರಾವಳಿ ಭಾಗವನ್ನು ಸಂಪೂರ್ಣ ನಿರ್ಲಕ್ಷಿಸಿದ್ದು, ಹಳೆ ಮೈಸೂರು ಭಾಗಕ್ಕೆ ಮಾತ್ರ ಬಜೆಟ್ ಸೀಮಿತವಾಗಿಸಿದ್ದಾರೆ ಎಂಬ ಆಕ್ರೋಶ ಕರಾವಳಿಯಾದ್ಯಂತ ವ್ಯಕ್ತವಾಗುತ್ತಿದೆ.

 ಬಜೆಟ್ ನಲ್ಲಿ ಎಲ್ಲಿಯೂ ಕರಾವಳಿ ಅಭಿವೃದ್ಧಿಗೆ ಒತ್ತು ನೀಡದಿರುವುದು ಕರಾವಳಿ ಭಾಗದ ಶಾಸಕರ ಆಕ್ರೋಶಕ್ಕೆ ಕಾರಣವಾಗಿದೆ. ಸಂಪೂರ್ಣ ಬಜೆಟ್ ನಲ್ಲಿ ಎಲ್ಲಿಯೂ “ಕರಾವಳಿ ” ಅನ್ನುವ ಪದವನ್ನೇ ಬಳಸದ ಕುಮಾರ ಸ್ವಾಮಿ ಚುನಾವಣೆಯ ಫಲಿತಾಂಶದ ಪ್ರತಿಕಾರ ತೀರಿಸಿಕೊಂಡಿದ್ದಾರೆ ಎನ್ನುವ ಆರೋಪ ಕೇಳಿ ಬರುತ್ತಿದೆ.

ಈ ಬಜೆಟ್ ನಲ್ಲಿ ಕರಾವಳಿಯ ಅಡಿಕೆ , ರಬ್ಬರ್ ಬೆಳೆಗಾರರನ್ನು ಕಡೆಗಣಿಸಲಾಗಿದೆ. ಅಡಿಕೆ ಮತ್ತು ರಬ್ಬರ್ ಬೆಳೆಗಾಗರರು ಈ ಬಜೆಟ್ ನಲ್ಲಿ ಬೆಂಬಲ ಬೆಲೆ ಘೋಷಣೆ ಯಾಗುವ ನಿರೀಕ್ಷೆಯಲ್ಲಿದ್ದರು . ರಾಜ್ಯ ಸರ್ಕಾರ ಅಡಿಕೆ ಹಾಗು ರಬ್ಬರ್ ಬೆಳೆಗಾರರ ಹಿತಕಾಪಾಡಲಿದೆ ಎಂಬ ಭರವಸೆಯನ್ನು ಕೃಷಿಕರು ಹೊಂದಿದ್ದರು ಆದರೆ ಅಡಿಕೆ ಹಾಗು ರಬ್ಬರ್ ಬೆಳೆಗಾರರ ನಿರೀಕ್ಷೆಯನ್ನು ಕುಮಾರಸ್ವಾಮಿ ಹುಸಿಯಾಗಿಸಿದ್ದಾರೆ. ಈ ಬಜೆಟ್ ನಲ್ಲಿ ಯೋಜನೆಗಳ ಘೋಷಣೆ ಆಗುವ ನಿರೀಕ್ಷೆಯಲ್ಲಿದ್ದ ಎಂಡೋ ಪೀಡಿತರಿಗೆ ನಿರಾಶೆಯುಂಟಾಗಿದೆ. ಕರಾವಳಿ ಭಾಗದಲ್ಲಿ ಪ್ರತ್ಯೇಕ ಮರಳು ನೀತಿ ಘೋಷಣೆ ಯಾಗುವ ನಿರೀಕ್ಷೆಯಲ್ಲಿದ್ದ ಕರಾವಳಿಗರಿಗೆ ಮುಖ್ಯಮಂತ್ರಿ ಮಂಡಿಸಿದ ಇಂದಿನ ಬಜೆಟ್ ಶಾಕ್ ನೀಡಿದೆ.

ಕರಾವಳಿ ಭಾಗದ ಅಭಿವೃದ್ಧಿಗೆ ಯೋಜನೆಗಳ ಘೋಷಣೆಯಾಗದಿರುವುದರ ವಿರುದ್ಧ ಕರಾವಳಿ ಭಾಗದ ಶಾಸಕರು ಕಿಡಿಕಾರಿದ್ದಾರೆ.

ಕಳೆದ ಚುನಾವಣೆಯಲ್ಲಿ ಕರಾವಳಿಯುದ್ದಕ್ಕೂ ಕಾಂಗ್ರೆಸ್ ಹಾಗು ಜೆಡಿಎಸ್ ಗೆ ಹಿನಾಯ ಸೋಲನುಭವಿಸಿದ್ದೇ ಈ ನಿರ್ಲಕ್ಷಕ್ಕೆ ಕಾರಣ ಎಂದು ಹೇಳಲಾಗುತ್ತಿದೆ. ದಕ್ಷಿಣಕನ್ನಡ ಜಿಲ್ಲೆಯ 8 ವಿಧಾನಸಭಾ ಕ್ಷೇತ್ರಗಳ ಪೈಕಿ 7 ರಲ್ಲಿ ಬಿಜೆಪಿ ಗೆಲುವು ಸಾಧಿಸಿದೆ.

ಉಡುಪಿಯ ಎಲ್ಲಾ 5 ವಿಧಾನಸಭಾ ಕ್ಷೇತ್ರ ಬಿಜೆಪಿ ತೆಕ್ಕೆಗೆ ಬಿದ್ದಿದೆ. ಕರಾವಳಿ ಭಾಗದಲ್ಲಿ ಕಾಂಗ್ರೆಸ್ ನ ಈ ಹೀನಾಯ ಸೋಲಿಗೆ ಬಜೆಟ್ ನಲ್ಲಿ ಹಗೆ ತೀರಿಸಿಕೊಳ್ಳಲಾಗಿದೆ ಎಂದು ಅರೋಪಿಸಲಾಗಿದೆ.

ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಮುಖಾಂತರ ಕರಾವಳಿಗೆ ಯಾವುದೇ ಅಭಿವೃದ್ದಿ ಯೋಜನೆಗಳು ಬಾರದಂತೆ ಕಾಂಗ್ರೆಸ್ ನೇತೃತ್ವ ವಹಿಸಿದೆ ಎಂಬ ಆರೋಪ ಕೇಳಿ ಬರುತ್ತಿದೆ. ಬಜೆಟ್ ನಲ್ಲಿ ಕರಾವಳಿ ಭಾಗದ ಈ ನಿರ್ಲಕ್ಷ್ಯ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಕರಾವಳಿಗರೂ ತಕ್ಕ ಉತ್ತರ ನೀಡಲಿದ್ದಾರೆ ಎಂದು ವಿಮರ್ಶಿಸಲಾಗುತ್ತಿದೆ.

0
Shares
  • Share On Facebook
  • Tweet It




Trending Now
ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
Tulunadu News November 1, 2025
ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
Tulunadu News October 31, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
    • ದೀಪಾವಳಿ ಬೋನಸ್ ಕಡಿಮೆ ಕೊಟ್ಟಿದ್ದಕ್ಕೆ ಟೋಲ್ ಸಿಬ್ಬಂದಿಗಳು ಮಾಡಿದ್ದೇನು?
  • Popular Posts

    • 1
      ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!

  • Privacy Policy
  • Contact
© Tulunadu Infomedia.

Press enter/return to begin your search