• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಅಭಿಪ್ರಾಯ ಸುದ್ದಿ 

ಕರಾವಳಿಗರ ವಿರುದ್ಧ ಬಜೆಟ್ ಮೂಲಕ ಹಗೆ ತೀರಿಸಿಕೊಂಡ ಕಾಂಗ್ರೆಸ್-ಜೆಡಿಎಸ್

Tulunadu News Posted On July 6, 2018
0


0
Shares
  • Share On Facebook
  • Tweet It

ಮಂಗಳೂರು: ರಾಜ್ಯದ ಮೈತ್ರಿ ಸರ್ಕಾರದ ಚೊಚ್ಚಲ ಬಜೆಟ್ ಮಂಡಿಸಲಾಗಿದೆ. ಬಜೆಟ್ ನಲ್ಲಿ ಕರಾವಳಿ ಭಾಗವನ್ನು ಸಂಪೂರ್ಣ ನಿರ್ಲಕ್ಷಿಸಿದ್ದು, ಹಳೆ ಮೈಸೂರು ಭಾಗಕ್ಕೆ ಮಾತ್ರ ಬಜೆಟ್ ಸೀಮಿತವಾಗಿಸಿದ್ದಾರೆ ಎಂಬ ಆಕ್ರೋಶ ಕರಾವಳಿಯಾದ್ಯಂತ ವ್ಯಕ್ತವಾಗುತ್ತಿದೆ.

 ಬಜೆಟ್ ನಲ್ಲಿ ಎಲ್ಲಿಯೂ ಕರಾವಳಿ ಅಭಿವೃದ್ಧಿಗೆ ಒತ್ತು ನೀಡದಿರುವುದು ಕರಾವಳಿ ಭಾಗದ ಶಾಸಕರ ಆಕ್ರೋಶಕ್ಕೆ ಕಾರಣವಾಗಿದೆ. ಸಂಪೂರ್ಣ ಬಜೆಟ್ ನಲ್ಲಿ ಎಲ್ಲಿಯೂ “ಕರಾವಳಿ ” ಅನ್ನುವ ಪದವನ್ನೇ ಬಳಸದ ಕುಮಾರ ಸ್ವಾಮಿ ಚುನಾವಣೆಯ ಫಲಿತಾಂಶದ ಪ್ರತಿಕಾರ ತೀರಿಸಿಕೊಂಡಿದ್ದಾರೆ ಎನ್ನುವ ಆರೋಪ ಕೇಳಿ ಬರುತ್ತಿದೆ.

ಈ ಬಜೆಟ್ ನಲ್ಲಿ ಕರಾವಳಿಯ ಅಡಿಕೆ , ರಬ್ಬರ್ ಬೆಳೆಗಾರರನ್ನು ಕಡೆಗಣಿಸಲಾಗಿದೆ. ಅಡಿಕೆ ಮತ್ತು ರಬ್ಬರ್ ಬೆಳೆಗಾಗರರು ಈ ಬಜೆಟ್ ನಲ್ಲಿ ಬೆಂಬಲ ಬೆಲೆ ಘೋಷಣೆ ಯಾಗುವ ನಿರೀಕ್ಷೆಯಲ್ಲಿದ್ದರು . ರಾಜ್ಯ ಸರ್ಕಾರ ಅಡಿಕೆ ಹಾಗು ರಬ್ಬರ್ ಬೆಳೆಗಾರರ ಹಿತಕಾಪಾಡಲಿದೆ ಎಂಬ ಭರವಸೆಯನ್ನು ಕೃಷಿಕರು ಹೊಂದಿದ್ದರು ಆದರೆ ಅಡಿಕೆ ಹಾಗು ರಬ್ಬರ್ ಬೆಳೆಗಾರರ ನಿರೀಕ್ಷೆಯನ್ನು ಕುಮಾರಸ್ವಾಮಿ ಹುಸಿಯಾಗಿಸಿದ್ದಾರೆ. ಈ ಬಜೆಟ್ ನಲ್ಲಿ ಯೋಜನೆಗಳ ಘೋಷಣೆ ಆಗುವ ನಿರೀಕ್ಷೆಯಲ್ಲಿದ್ದ ಎಂಡೋ ಪೀಡಿತರಿಗೆ ನಿರಾಶೆಯುಂಟಾಗಿದೆ. ಕರಾವಳಿ ಭಾಗದಲ್ಲಿ ಪ್ರತ್ಯೇಕ ಮರಳು ನೀತಿ ಘೋಷಣೆ ಯಾಗುವ ನಿರೀಕ್ಷೆಯಲ್ಲಿದ್ದ ಕರಾವಳಿಗರಿಗೆ ಮುಖ್ಯಮಂತ್ರಿ ಮಂಡಿಸಿದ ಇಂದಿನ ಬಜೆಟ್ ಶಾಕ್ ನೀಡಿದೆ.

ಕರಾವಳಿ ಭಾಗದ ಅಭಿವೃದ್ಧಿಗೆ ಯೋಜನೆಗಳ ಘೋಷಣೆಯಾಗದಿರುವುದರ ವಿರುದ್ಧ ಕರಾವಳಿ ಭಾಗದ ಶಾಸಕರು ಕಿಡಿಕಾರಿದ್ದಾರೆ.

ಕಳೆದ ಚುನಾವಣೆಯಲ್ಲಿ ಕರಾವಳಿಯುದ್ದಕ್ಕೂ ಕಾಂಗ್ರೆಸ್ ಹಾಗು ಜೆಡಿಎಸ್ ಗೆ ಹಿನಾಯ ಸೋಲನುಭವಿಸಿದ್ದೇ ಈ ನಿರ್ಲಕ್ಷಕ್ಕೆ ಕಾರಣ ಎಂದು ಹೇಳಲಾಗುತ್ತಿದೆ. ದಕ್ಷಿಣಕನ್ನಡ ಜಿಲ್ಲೆಯ 8 ವಿಧಾನಸಭಾ ಕ್ಷೇತ್ರಗಳ ಪೈಕಿ 7 ರಲ್ಲಿ ಬಿಜೆಪಿ ಗೆಲುವು ಸಾಧಿಸಿದೆ.

ಉಡುಪಿಯ ಎಲ್ಲಾ 5 ವಿಧಾನಸಭಾ ಕ್ಷೇತ್ರ ಬಿಜೆಪಿ ತೆಕ್ಕೆಗೆ ಬಿದ್ದಿದೆ. ಕರಾವಳಿ ಭಾಗದಲ್ಲಿ ಕಾಂಗ್ರೆಸ್ ನ ಈ ಹೀನಾಯ ಸೋಲಿಗೆ ಬಜೆಟ್ ನಲ್ಲಿ ಹಗೆ ತೀರಿಸಿಕೊಳ್ಳಲಾಗಿದೆ ಎಂದು ಅರೋಪಿಸಲಾಗಿದೆ.

ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಮುಖಾಂತರ ಕರಾವಳಿಗೆ ಯಾವುದೇ ಅಭಿವೃದ್ದಿ ಯೋಜನೆಗಳು ಬಾರದಂತೆ ಕಾಂಗ್ರೆಸ್ ನೇತೃತ್ವ ವಹಿಸಿದೆ ಎಂಬ ಆರೋಪ ಕೇಳಿ ಬರುತ್ತಿದೆ. ಬಜೆಟ್ ನಲ್ಲಿ ಕರಾವಳಿ ಭಾಗದ ಈ ನಿರ್ಲಕ್ಷ್ಯ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಕರಾವಳಿಗರೂ ತಕ್ಕ ಉತ್ತರ ನೀಡಲಿದ್ದಾರೆ ಎಂದು ವಿಮರ್ಶಿಸಲಾಗುತ್ತಿದೆ.

0
Shares
  • Share On Facebook
  • Tweet It




Trending Now
20 ವರ್ಷಗಳ ಬಳಿಕ ರಾಜ್ ಠಾಕ್ರೆ ಹಾಗೂ ಉದ್ದವ್ ಠಾಕ್ರೆ ಸಮ್ಮಿಲನ!
Tulunadu News July 5, 2025
20, 30 ವಯಸ್ಸಿನಲ್ಲಿ ಮಗು ಬೇಕೆನ್ನುವ ಆಸೆ ಹುಟ್ಟಿರಲಿಲ್ಲ, 40 ರಲ್ಲಿ ಬಂತು! ಖ್ಯಾತ ನಟಿಯ ಮನದಿಂಗಿತ...
Tulunadu News July 5, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • 20 ವರ್ಷಗಳ ಬಳಿಕ ರಾಜ್ ಠಾಕ್ರೆ ಹಾಗೂ ಉದ್ದವ್ ಠಾಕ್ರೆ ಸಮ್ಮಿಲನ!
    • 20, 30 ವಯಸ್ಸಿನಲ್ಲಿ ಮಗು ಬೇಕೆನ್ನುವ ಆಸೆ ಹುಟ್ಟಿರಲಿಲ್ಲ, 40 ರಲ್ಲಿ ಬಂತು! ಖ್ಯಾತ ನಟಿಯ ಮನದಿಂಗಿತ...
    • ಸ್ಯಾನಿಟರಿ ಪ್ಯಾಡ್ ಪ್ಯಾಕೆಟ್ ಮೇಲೆ ರಾಹುಲ್ ಗಾಂಧಿ ಫೋಟೋಗೆ ಜೆಡಿಯು-ಬಿಜೆಪಿ ವ್ಯಂಗ್ಯ!
    • ಪರಸ್ಪರ ಸಮ್ಮತಿಯಿಂದ ನಡೆದ ಲೈಂಗಿಕ ಕ್ರಿಯೆ ನಂತರ ರೇಪ್ ಎನ್ನಲಾಗುವುದಿಲ್ಲ - ಕೇರಳ ಹೈಕೋರ್ಟ್ ಆದೇಶ
    • ಭಾರತದ ಇತಿಹಾಸದಲ್ಲಿ 2025ರ ಹಜ್ ಯಾತ್ರಾ ಆಯೋಜನೆ ಅತ್ಯಂತ ಯಶಸ್ವಿ - ಕೇಂದ್ರ ಸಚಿವ ಕಿರಣ್ ರಿಜ್ಜು
    • ಈ ಬಾರಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ಮಹಿಳೆಗೆ ಪಟ್ಟ?
    • ರೇಪ್ ಕೇಸಿನಲ್ಲಿ ಕಾಂಪ್ರಮೈಸ್ ಆದರೆ ಸಂತ್ರಸ್ತೆಯ ವಿರುದ್ಧವೇ ದೂರು ದಾಖಲು - ಬಾಂಬೆ ಹೈಕೋರ್ಟ್ ಪೀಠ!
    • ದೆಹಲಿಯಲ್ಲಿ 10 ವರ್ಷ ದಾಟಿದ ಕಾರುಗಳು ಕಡಿಮೆ ದರದಲ್ಲಿ ಸಿಗಲಿವೆ! ಯಾಕ್ ಗೊತ್ತಾ?
    • ಟಾಯ್ಲೆಟಲ್ಲಿ ಮಹಿಳಾ ಉದ್ಯೋಗಿಗಳ ವಿಡಿಯೋ ರೆಕಾರ್ಡ್... ಇನ್ಫೋಸಿಸ್ ಉದ್ಯೋಗಿ ಬಂಧನ!
    • ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಜಿಲ್ಲೆ ಎಂದು ನಾಮಕರಣ ಮಾಡಬೇಕಾ?
  • Popular Posts

    • 1
      20 ವರ್ಷಗಳ ಬಳಿಕ ರಾಜ್ ಠಾಕ್ರೆ ಹಾಗೂ ಉದ್ದವ್ ಠಾಕ್ರೆ ಸಮ್ಮಿಲನ!
    • 2
      20, 30 ವಯಸ್ಸಿನಲ್ಲಿ ಮಗು ಬೇಕೆನ್ನುವ ಆಸೆ ಹುಟ್ಟಿರಲಿಲ್ಲ, 40 ರಲ್ಲಿ ಬಂತು! ಖ್ಯಾತ ನಟಿಯ ಮನದಿಂಗಿತ...
    • 3
      ಸ್ಯಾನಿಟರಿ ಪ್ಯಾಡ್ ಪ್ಯಾಕೆಟ್ ಮೇಲೆ ರಾಹುಲ್ ಗಾಂಧಿ ಫೋಟೋಗೆ ಜೆಡಿಯು-ಬಿಜೆಪಿ ವ್ಯಂಗ್ಯ!
    • 4
      ಪರಸ್ಪರ ಸಮ್ಮತಿಯಿಂದ ನಡೆದ ಲೈಂಗಿಕ ಕ್ರಿಯೆ ನಂತರ ರೇಪ್ ಎನ್ನಲಾಗುವುದಿಲ್ಲ - ಕೇರಳ ಹೈಕೋರ್ಟ್ ಆದೇಶ
    • 5
      ಭಾರತದ ಇತಿಹಾಸದಲ್ಲಿ 2025ರ ಹಜ್ ಯಾತ್ರಾ ಆಯೋಜನೆ ಅತ್ಯಂತ ಯಶಸ್ವಿ - ಕೇಂದ್ರ ಸಚಿವ ಕಿರಣ್ ರಿಜ್ಜು

  • Privacy Policy
  • Contact
© Tulunadu Infomedia.

Press enter/return to begin your search