• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಬಿಜೆಪಿ ಕಾರ್ಯಕರ್ತರೊಬ್ಬರ ಕೊಂದ ಸಿಪಿಎಂ 11 ಕಾರ್ಯಕರ್ತರ ಗತಿ ಏನಾಗಿದೆ ಗೊತ್ತಾ?

TNN Correspondent Posted On July 7, 2018


  • Share On Facebook
  • Tweet It

ತಿರುವನಂತಪುರ: ಕೇರಳದ ಕಣ್ಣೂರು ಸಿಪಿಎಂ ಕಾರ್ಯಕರ್ತರಿಗೆ ಹಿಂದೂಗಳು, ಆರೆಸ್ಸೆಸ್ ಹಾಗೂ ಬಿಜೆಪಿ ಕಾರ್ಯಕರ್ತರ ಹತ್ಯೆಗೆ ಪ್ರಾಯೋಗಿಕ ಕ್ಷೇತ್ರವಾಗಿದೆ ಎನ್ನುಷ್ಟರಮಟ್ಟಿಗೆ ಪ್ರತಿವರ್ಷ ಅಲ್ಲಿ ಹತ್ಯೆಗಳು ನಡೆಯುತ್ತವೆ. ಅದರಲ್ಲೂ ಸಿಪಿಎಂನ ಪಿಣರಾಯಿ ವಿಜಯನ್ ನೇತೃತ್ವದ ಸರ್ಕಾರವೇ ಇರುವುದರಿಂದ ಈ ಹಲ್ಲೆ, ಹತ್ಯೆಗಳಿಗೆ ಯಾವಾಗಲೂ ಉತ್ತೇಜನ ಇದೆ ಎಂಬ ಮಾತುಗಳು ಸಹ ಕೇಳಿಬರುತ್ತವೆ.

ಇಂಥಾದ್ದೇ ಪ್ರಕರಣವೊಂದರಲ್ಲಿ, ಬಿಜೆಪಿ ಕಾರ್ಯಕರ್ತರೊಬ್ಬರನ್ನು ಹತ್ಯೆ ಮಾಡಿದ ಆರೋಪದಲ್ಲಿ ಸಿಪಿಎಂನ ಹನ್ನೊಂದು ಕಾರ್ಯಕರ್ತರಿಗೆ ನ್ಯಾಯಾಲಯ ತಕ್ಕ ಶಾಸ್ತಿ ಮಾಡಿದ್ದು, ಜೀವಾವಧಿ ಶಿಕ್ಷೆ ವಿಧಿಸಿದೆ. ಆ ಮೂಲಕ ಹತ್ಯೆ ಮಾಡಿದ ಆರೋಪಿಗಳಿಗೆ ಪಾಠ ಕಲಿಸಿದ್ದು, ಇನ್ನು ಮುಂದಾದರೂ ಹತ್ಯೆಗಳು ನಿಲ್ಲುತ್ತಾವಾ ಎಂಬುದು ಸದ್ಯದ ಪ್ರಶ್ನೆಯಾಗಿದೆ.

2008ರಲ್ಲಿ ಮಹೇಶ್ ಎಂಬುವವರು ಭಾರತೀಯ ಕಮ್ಯುನಿಸ್ಟ್ ಪಾರ್ಟಿ ತೊರೆದು ಭಾರತೀಯ ಜನತಾ ಪಾರ್ಟಿ ಸೇರಿದ್ದರು. ಆದರೆ ಇದನ್ನೇ ಮಹಾಪರಾಧ ಎಂಬಂತೆ ಭಾವಿಸಿದ್ದ ಹಲವು ಸಿಪಿಎಂ ಕಾರ್ಯಕರ್ತರು ಇದೇ ವರ್ಷ ಮಹೇಶ್ ಅವರನ್ನು ಹತ್ಯೆ ಮಾಡಿದ್ದರು. ಈ ಆರೋಪದಲ್ಲಿ ಬಂಧಿತರಾಗಿದ್ದ ಆರೋಪಿಗಳ ವಿರುದ್ಧದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಕಣ್ಣೂರು ಜಿಲ್ಲಾ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ.

ಮಹೇಶ್ ಒಬ್ಬ ಆಟೋ ಚಾಲಕರಾಗಿದ್ದು, ಬಿಜೆಪಿ ಪಕ್ಷ ಸಂಘಟನೆಯಲ್ಲೂ ತೊಡಗಿದ್ದರು. ಒಂದು ದಿನ ಆಟೋ ಪ್ರಯಾಣಿಕರಿಗೆ ಕಾಯುತ್ತಿದ್ದಾಗ ಸಿಪಿಎಂ ಕಾರ್ಯಕರ್ತರು ದಾಳಿ ಮಾಡಿ ಹತ್ಯೆಗೈದಿದ್ದರು. ಮಾಡಿದ ಪಾಪಕ್ಕೆ ಈಗ ನ್ಯಾಯದೇವತೆ ಸರಿಯಾಗಿಯೇ ಪಾಠ ಕಲಿಸಿದ್ದು, ಇನ್ನಾದರೂ ಸಿಪಿಎಂ ಕಾರ್ಯಕರ್ತರು ಪಾಠ ಕಲಿತು, ಶಾಂತಿಯುತವಾಗಿ ಜೀವನ ನಡೆಸಬೇಕು ಎಂಬುದು ಜನರ ಒತ್ತಾಸೆಯಾಗಿದೆ.

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • 4
      ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • 5
      ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search