• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಬಿಜೆಪಿ ಕಾರ್ಯಕರ್ತರೊಬ್ಬರ ಕೊಂದ ಸಿಪಿಎಂ 11 ಕಾರ್ಯಕರ್ತರ ಗತಿ ಏನಾಗಿದೆ ಗೊತ್ತಾ?

TNN Correspondent Posted On July 7, 2018


  • Share On Facebook
  • Tweet It

ತಿರುವನಂತಪುರ: ಕೇರಳದ ಕಣ್ಣೂರು ಸಿಪಿಎಂ ಕಾರ್ಯಕರ್ತರಿಗೆ ಹಿಂದೂಗಳು, ಆರೆಸ್ಸೆಸ್ ಹಾಗೂ ಬಿಜೆಪಿ ಕಾರ್ಯಕರ್ತರ ಹತ್ಯೆಗೆ ಪ್ರಾಯೋಗಿಕ ಕ್ಷೇತ್ರವಾಗಿದೆ ಎನ್ನುಷ್ಟರಮಟ್ಟಿಗೆ ಪ್ರತಿವರ್ಷ ಅಲ್ಲಿ ಹತ್ಯೆಗಳು ನಡೆಯುತ್ತವೆ. ಅದರಲ್ಲೂ ಸಿಪಿಎಂನ ಪಿಣರಾಯಿ ವಿಜಯನ್ ನೇತೃತ್ವದ ಸರ್ಕಾರವೇ ಇರುವುದರಿಂದ ಈ ಹಲ್ಲೆ, ಹತ್ಯೆಗಳಿಗೆ ಯಾವಾಗಲೂ ಉತ್ತೇಜನ ಇದೆ ಎಂಬ ಮಾತುಗಳು ಸಹ ಕೇಳಿಬರುತ್ತವೆ.

ಇಂಥಾದ್ದೇ ಪ್ರಕರಣವೊಂದರಲ್ಲಿ, ಬಿಜೆಪಿ ಕಾರ್ಯಕರ್ತರೊಬ್ಬರನ್ನು ಹತ್ಯೆ ಮಾಡಿದ ಆರೋಪದಲ್ಲಿ ಸಿಪಿಎಂನ ಹನ್ನೊಂದು ಕಾರ್ಯಕರ್ತರಿಗೆ ನ್ಯಾಯಾಲಯ ತಕ್ಕ ಶಾಸ್ತಿ ಮಾಡಿದ್ದು, ಜೀವಾವಧಿ ಶಿಕ್ಷೆ ವಿಧಿಸಿದೆ. ಆ ಮೂಲಕ ಹತ್ಯೆ ಮಾಡಿದ ಆರೋಪಿಗಳಿಗೆ ಪಾಠ ಕಲಿಸಿದ್ದು, ಇನ್ನು ಮುಂದಾದರೂ ಹತ್ಯೆಗಳು ನಿಲ್ಲುತ್ತಾವಾ ಎಂಬುದು ಸದ್ಯದ ಪ್ರಶ್ನೆಯಾಗಿದೆ.

2008ರಲ್ಲಿ ಮಹೇಶ್ ಎಂಬುವವರು ಭಾರತೀಯ ಕಮ್ಯುನಿಸ್ಟ್ ಪಾರ್ಟಿ ತೊರೆದು ಭಾರತೀಯ ಜನತಾ ಪಾರ್ಟಿ ಸೇರಿದ್ದರು. ಆದರೆ ಇದನ್ನೇ ಮಹಾಪರಾಧ ಎಂಬಂತೆ ಭಾವಿಸಿದ್ದ ಹಲವು ಸಿಪಿಎಂ ಕಾರ್ಯಕರ್ತರು ಇದೇ ವರ್ಷ ಮಹೇಶ್ ಅವರನ್ನು ಹತ್ಯೆ ಮಾಡಿದ್ದರು. ಈ ಆರೋಪದಲ್ಲಿ ಬಂಧಿತರಾಗಿದ್ದ ಆರೋಪಿಗಳ ವಿರುದ್ಧದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಕಣ್ಣೂರು ಜಿಲ್ಲಾ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ.

ಮಹೇಶ್ ಒಬ್ಬ ಆಟೋ ಚಾಲಕರಾಗಿದ್ದು, ಬಿಜೆಪಿ ಪಕ್ಷ ಸಂಘಟನೆಯಲ್ಲೂ ತೊಡಗಿದ್ದರು. ಒಂದು ದಿನ ಆಟೋ ಪ್ರಯಾಣಿಕರಿಗೆ ಕಾಯುತ್ತಿದ್ದಾಗ ಸಿಪಿಎಂ ಕಾರ್ಯಕರ್ತರು ದಾಳಿ ಮಾಡಿ ಹತ್ಯೆಗೈದಿದ್ದರು. ಮಾಡಿದ ಪಾಪಕ್ಕೆ ಈಗ ನ್ಯಾಯದೇವತೆ ಸರಿಯಾಗಿಯೇ ಪಾಠ ಕಲಿಸಿದ್ದು, ಇನ್ನಾದರೂ ಸಿಪಿಎಂ ಕಾರ್ಯಕರ್ತರು ಪಾಠ ಕಲಿತು, ಶಾಂತಿಯುತವಾಗಿ ಜೀವನ ನಡೆಸಬೇಕು ಎಂಬುದು ಜನರ ಒತ್ತಾಸೆಯಾಗಿದೆ.

  • Share On Facebook
  • Tweet It


- Advertisement -


Trending Now
ಮರಳು ಕದಿಯಲು ಹೋದ ದೋಣಿ ಮಗುಚಿ ಸತ್ತವನ ಕಥೆ ಏನು?
Tulunadu News July 5, 2022
ನುಪೂರ್ ಕ್ಷಮೆ ಕೇಳಬೇಕು ಎಂದ ನ್ಯಾಯಾಧೀಶರ ಹೇಳಿಕೆ ಮತ್ತು ವಾಸ್ತವ!
Tulunadu News July 4, 2022
Leave A Reply

  • Recent Posts

    • ಮರಳು ಕದಿಯಲು ಹೋದ ದೋಣಿ ಮಗುಚಿ ಸತ್ತವನ ಕಥೆ ಏನು?
    • ನುಪೂರ್ ಕ್ಷಮೆ ಕೇಳಬೇಕು ಎಂದ ನ್ಯಾಯಾಧೀಶರ ಹೇಳಿಕೆ ಮತ್ತು ವಾಸ್ತವ!
    • ಮೇಲಿನವರು ಏನೂ ಹೇಳಬಹುದು, ಅನುಷ್ಟಾನ ಆಗಬೇಕಲ್ಲ!
    • ಮಳೆ ಕಥೆ ಅಲ್ಲ ವ್ಯಥೆ! ಅದಕ್ಕಿದೆ ಇಷ್ಟು ಕಾರಣಗಳು?
    • ಮಾಣಿಪ್ಪಾಡಿ ವರದಿಯ 4 ಲಕ್ಷ ಕೋಟಿಯಲ್ಲಿ ಬಿಜೆಪಿಗೆ ಸಿಕ್ಕಿದ ಸೊನ್ನೆ ಎಷ್ಟು?
    • ಕನ್ನಯ್ಯ ಹತ್ಯೆ ಮಾಡಿದವರಿಗೆ ಮೂರೇ ತಿಂಗಳಲ್ಲಿ ಗಲ್ಲಾಗಬಹುದಾ?
    • ರಾಹುಲ್ ಕಚೇರಿ ಧ್ವಂಸವಾದರೂ ಕಾಂಗ್ರೆಸ್ ಪ್ರತಿಭಟಿಸಲಿಲ್ಲ, ಯಾಕೆ?
    • ಚಕ್ರತೀರ್ಥ ಹೆಗಲ ಮೇಲೆ ಕೋವಿ ಇಟ್ಟು ಹೊಡೆಯಲು ಹೊರಟಿದ್ದು ಯಾರನ್ನಾ?
    • ರೋಹಿತ್ ಸನ್ಮಾನದಿಂದ ಎಡಚರರು ವಿಲವಿಲ!!
    • ರಾಜಕೀಯ ಆತ್ಮಹತ್ಯೆ ಎಂದರೆ ಏನು ಉದ್ಧವ್!
  • Popular Posts

    • 1
      ಮರಳು ಕದಿಯಲು ಹೋದ ದೋಣಿ ಮಗುಚಿ ಸತ್ತವನ ಕಥೆ ಏನು?
    • 2
      ನುಪೂರ್ ಕ್ಷಮೆ ಕೇಳಬೇಕು ಎಂದ ನ್ಯಾಯಾಧೀಶರ ಹೇಳಿಕೆ ಮತ್ತು ವಾಸ್ತವ!
    • 3
      ಮೇಲಿನವರು ಏನೂ ಹೇಳಬಹುದು, ಅನುಷ್ಟಾನ ಆಗಬೇಕಲ್ಲ!
    • 4
      ಮಳೆ ಕಥೆ ಅಲ್ಲ ವ್ಯಥೆ! ಅದಕ್ಕಿದೆ ಇಷ್ಟು ಕಾರಣಗಳು?
    • 5
      ಮಾಣಿಪ್ಪಾಡಿ ವರದಿಯ 4 ಲಕ್ಷ ಕೋಟಿಯಲ್ಲಿ ಬಿಜೆಪಿಗೆ ಸಿಕ್ಕಿದ ಸೊನ್ನೆ ಎಷ್ಟು?


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search