• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಈ ಮಹಿಳೆಯ ಹಠ, ಬದುಕುತ್ತಿರುವ ರೀತಿಯ ಕತೆ ಕೇಳಿದರೆ ನಮ್ಮ ಸೋಮಾರಿತನವೂ ಓಡಿಹೋಗುತ್ತದೆ!

TNN Correspondent Posted On July 7, 2018
0


0
Shares
  • Share On Facebook
  • Tweet It

ಕೋಲ್ಕತ್ತಾ: ನಮ್ಮಲ್ಲಿ ಬಹುತೇಕರು ಇರುವುದೇ ಹೀಗೆ. ಅವರಿಗೆ ದಿನಕ್ಕೆ ಎಂಟು ತಾಸು ಕೆಲಸ ಮಾಡುವುದೇ ಸಾಧನೆ ಹಾಗೂ ಬೇಜಾರು. ಸಣ್ಣ ತಲೆನೋವು ಆವರಿಸಿದರೂ, ಜ್ವರ ಬಂದರೂ ಮೂರು ದಿನ ಕೆಲಸಕ್ಕೆ ರಜೆ ಹಾಕುವ ಕುರಿತು ಯೋಚಿಸುವವರೇ ತುಂಬ ದಿನ. ಅದರಲ್ಲೂ ಇಂದಿನ ಸ್ಮಾರ್ಟ್(ಫೋನ್) ಯುಗದಲ್ಲಿ ಹೊಟೇಲ್ ಹೋಗಿ ಊಟ ಮಾಡಲು ಸಹ ಸೋಮಾರಿತನ ಮಾಡುವವರೂ ಇದ್ದಾರೆ.

ಆದರೆ ಕೋಲ್ಕತ್ತಾದ ಸೋನಾಲಿ ಘೋಷ್ ಎಂಬ 28 ವರ್ಷದ ಮಹಿಳೆ ಮಾತ್ರ, ಸಹಜ ಸೋಮಾರಿತನವನ್ನೂ ಮರೆತು, ಪುರುಷರಿಗೇ ಸವಾಲಾಗುವ           ಮೂರು ಗಾಲಿಯ ಸೈಕಲ್ ಮೇಲೆ ಪ್ರಯಾಣಿಕರನ್ನು ಕೂರಿಸಿಕೊಂಡು, ಅವರು ಹೇಳಿದ ಜಾಗಕ್ಕೆ ತಲುಪಿಸುವ ಮೂಲಕ ಸ್ವಾವಲಂಬಿ ಹಾಗೂ ದಿಟ್ಟ ಜೀವನ ಸಾಗಿಸುತ್ತಿದ್ದಾರೆ.

ಇಷ್ಟೇ ಅಲ್ಲ, 2013ರಿಂದ ಮೂರು ಚಕ್ರದ ಸೈಕಲ್ ಓಡಿಸುತ್ತಿರುವ ಸೋನಾಲಿ ಪಶ್ಚಿಮ ಬಂಗಾಳದಲ್ಲಿ ಮೂರು ಚಕ್ರದ ಸೈಕಲ್ ತುಳಿಯುವ ಮೊದಲ ಮಹಿಳೆ ಎಂಬ ಕೀರ್ತಿಗೂ ಭಾಜನರಾಗಿದ್ದಾರೆ. ಅಂದಹಾಗೆ, ಪುರುಷರಿಗೇ ಸವಾಲಾಗುವ ಈ ಕೆಲಸವನ್ನು ಚಾಚೂತಪ್ಪದೆ ನಿತ್ಯ ಮಾಡುತ್ತಿರುವುದು ಸೋನಾಲಿ ವೈಶಿಷ್ಟ್ಯ.

ಸೋನಾಲಿ ಘೋಷ್ ಅವರಿಗೆ ಎಲ್ಲರಂತೆಯೇ ಉತ್ತಮ ಬಾಲ್ಯವಿತ್ತು. ಮನೆಯಲ್ಲಿ ನಗುವಿತ್ತು. ಸೋನಾಲಿ 23 ವರ್ಷದವಳಿದ್ದಾಗ ಮದುವೆ ಆಸೆಗಳು ಸಹ ಚಿಗುರೊಡೆದಿದ್ದವು. ಆದರೆ 2013ರಲ್ಲಿ ಅಪ್ಪ ತೀರಿಕೊಂಡ ಬಳಿಕ ಇಡೀ ಕುಟುಂಬವೇ ಬೀದಿಗೆ ಬರುವ ಪರಿಸ್ಥಿತಿ ಎದುರಾಗಿತ್ತು. ಆಗ ಸೋನಾಲಿ ಮೂರು ಗಾಲಿಯ ಸೈಕಲ್ ಓಡಿಸಲು ತೀರ್ಮಾನಿಸಿದ್ದು ಹಾಗೂ ಪ್ರಸ್ತುತ ಅದರಲ್ಲಿ ಯಶಸ್ವಿಯೂ ಆಗಿದ್ದಾರೆ.

23ನೇ ವರ್ಷದಿಂದ ಮೂರು ಚಕ್ರದ ಸೈಕಲ್ ಓಡಿಸಲು ಆರಂಭಿಸಿದೆ. ಅಪ್ಪ ನಮಗೆ ಶಿಕ್ಷಣ ಕೊಡಿಸುವ ಸ್ಥಿತಿಯಲ್ಲಿ ಇರದ ಕಾರಣ ಓದಲಿಲ್ಲ. ಹಾಗಾಗಿ ಶಿಕ್ಷಣ ಬೇಕಾಗದ ಸೈಕಲ್ ತುಳಿಯುವ ಕೆಲಸಕ್ಕೆ ಮುಂದಾದೆ. ಆರಂಭದಲ್ಲಿ ಕಷ್ಟವಾದರೂ ಈಗ ಹೊಂದಿಕೊಂಡಿದ್ದೇನೆ. ನಿತ್ಯ ನೂರಾರು ರೂಪಾಯಿ ದುಡಿಯುತ್ತೇನೆ ಎನ್ನುತ್ತಾರೆ ಸೋನಾಲಿ. ಅದೇನೇ ಇರಲಿ ಮದುವೆಯಾಗಿ, ಸ್ಥಿತಿವಂತ ಗಂಡನ ಮನೆ ಸೇರಬೇಕು ಎನ್ನುವ ಹೆಣ್ಣುಮಕ್ಕಳಿರುವ ಈ ಕಾಲದಲ್ಲಿ ಸೋನಾಲಿ ಕುಟುಂಬಕ್ಕೋಸ್ಕರ ದುಡಿಯುತ್ತಿರುವುದು ಶ್ಲಾಘನೀಯ.

0
Shares
  • Share On Facebook
  • Tweet It




Trending Now
ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
Tulunadu News March 3, 2026
ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
Tulunadu News March 2, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
    • ಕೇರಳ ಇನ್ನು ಮುಂದೆ ಕೇರಳಂ!
    • ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
    • ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
  • Popular Posts

    • 1
      ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • 2
      ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • 3
      ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • 4
      ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ

  • Privacy Policy
  • Contact
© Tulunadu Infomedia.

Press enter/return to begin your search