• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಪ್ರತ್ಯೇಕತೆಯ ವಿಷ ಬೀಜ ಬಿತ್ತುತ್ತಿರುವ ಮತ್ತೊಂದು ಕುಳ ಜೈಲಿಗೆ: ಆಸಿಯಾ ಅಂದ್ರಾಬಿ ಜೈಲು ಪಾಲು

TNN Correspondent Posted On July 7, 2018
0


0
Shares
  • Share On Facebook
  • Tweet It

ಶ್ರೀನಗರ: ಜಮ್ಮು ಕಾಶ್ಮೀರದಲ್ಲಿ ಪ್ರತ್ಯೇಕತೆಯ ವಿಷ ಬೀಜ ಬಿತ್ತಿ, ದೇಶವಿರೋಧಿ ಚಟುವಟಿಕೆಯಲ್ಲಿ ಭಾಗಿಯಾಗಿರುವ ಪ್ರತ್ಯೇಕತವಾದಿ ಆಸಿಯಾ ಅಂದ್ರಾಬಿ ಮತ್ತು ಅವಳ ಇಬ್ಬರು ಸಹಚಾರಿಣಿಯರನ್ನು  ರಾಷ್ಟ್ರೀಯ ತನಿಖಾ ದಳ ಶುಕ್ರವಾರ ಬಂಧಿಸಿದೆ. ಈ ಮೂಲಕ ಕಣಿವೆ ರಾಜ್ಯದಲ್ಲಿ ಗಲಭೆಗೆ ಪ್ರಚೋಧನೆ ನೀಡುತ್ತಿದ್ದ ಮತ್ತೊಂದು ಪ್ರಮುಖ ಕುಳವನ್ನು ಜೈಲಿಗಟ್ಟಿದಂತಾಗಿದೆ. ಜಮ್ಮು ಕಾಶ್ಮೀರದಲ್ಲಿ ಪಿಡಿಪಿ ಬಿಜೆಪಿ ಮೈತ್ರಿ ಸರ್ಕಾರ ಮುರಿದು ಬಿದ್ದ ನಂತರ ಪ್ರತ್ಯೇಕವಾದಿಗಳನ್ನು ಹದ್ದು ಬಸ್ತಿನಲ್ಲಿರುವ ಕಾರ್ಯವನ್ನು ಯಶಸ್ವಿಯಾಗಿ ನಡೆಸುತ್ತಿದ್ದು, ಆಸಿಯಾ ಅಂದ್ರಾಬಿಯನ್ನು ಬಂಧಿಸಿ ಮತ್ತೊಂದು ಭರ್ಜರಿ ಕಾರ್ಯಾಚರಣೆಯನ್ನು ರಾಷ್ಟ್ರೀಯ ತನಿಖೆ ದಳ ನಡೆಸಿದೆ.

ದುಕ್ತರನ್ ಈ ಮಿಲತ್ ಸಂಘಟನೆಯ ಮುಖ್ಯಸ್ಥೆಯಾಗಿರುವ ಆಸಿಯಾ ಅಂದ್ರಾಬಿ ಮತ್ತು ಅವಳ ಸಹಚರರಾದ ಸೋಫಿ ಫಾಹ್ಮಿದಾ ಮತ್ತು ನಾಹೀದ್ ನಸ್ರೀನ್ ರನ್ನು ಬಂಧಿಸಿ, ಶ್ರೀನಗರದ ಜೈಲಿಗೆ ಕಳುಹಿಸಲಾಗಿದೆ. ಅವರನ್ನು ದೆಹಲಿಯಲ್ಲಿರುವ ರಾಷ್ಟ್ರೀಯ ತನಿಖಾ ದಳ(ಎನ್ ಐಎ)ದ ವಿಶೇಷ ಕೋರ್ಟ್ ಗೆ ಹಾಜರುಪಡಿಸಬೇಕಾಗಿದ್ದು, 10 ದಿನ ಎನ್ ಐಎ ವಶಕ್ಕೆ ನೀಡಲಾಗಿದೆ.

ಏಪ್ರಿಲ್ 27ರಂದು ಆಸಿಯಾ ಅಂದ್ರಾಬಿ ವಿರುದ್ಧ ದೂರು ದಾಖಲಿಸಲಾಗಿತ್ತು. ಅವಳ ವಿರುದ್ಧ ದೇಶವಿರೋಧಿ ಚಟುವಟಿಕೆಗಳು ನಡೆಸಿರುವುದು, ಗಲಭೆಗೆ ಪ್ರಚೋಧನೆ ನೀಡಿರುವುದು, ರಾಷ್ಟ್ರಪತಿ, ಪ್ರಧಾನಿ ಮಂತ್ರಿಗಳ ವಿರುದ್ಧ ಮಾತನಾಡಿರುವುದು, ಜನರಲ್ಲಿ ಸುಳ್ಳು ಹರಡಿರುವುದು, ಸರ್ಕಾರದ ವಿರುದ್ಧ ಜನರನ್ನು ಎತ್ತಿಕಟ್ಟಿರುವುದು ಸೇರಿ ನಾನಾ ದೂರುಗಳನ್ನು ದಾಖಲಿಸಿಕೊಳ್ಳಲಾಗಿದೆ.

ಮಾಧ್ಯಮಗಳಲ್ಲಿ ಪ್ರಚೋದನಕಾರಿ ಭಾಷಣ ಮಾಡಿ, ಜನರಲ್ಲಿ ವಿಷ ಬೀಜ ಬಿತ್ತಿದ್ದಾರೆ. ಅದರಿಂದ ಜಮ್ಮು ಕಾಶ್ಮೀರದಲ್ಲಿ ಭಾರಿ ಪ್ರಮಾಣದ ಗಲಭೆ ಸೃಷ್ಟಿಸಿದ್ದಾರೆ. ಅಲ್ಲದೇ ದೇಶದ ವಿರುದ್ಧ ಸಂಚು ರೂಪಿಸುವ ಕುರಿತು ಜನರ ಮನದಲ್ಲಿ ದೇಶವಿರೋಧಿ ವಿಷಯಗಳನ್ನು ಬಿತ್ತಿದ್ದಾರೆ ಎಂದು ಎನ್ ಐಎ ಐಜಿ ಅಲೋಕ್ ಮಿತ್ತಲ್ ತಿಳಿಸಿದ್ದಾರೆ.

0
Shares
  • Share On Facebook
  • Tweet It




Trending Now
ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
Tulunadu News September 17, 2025
ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
Tulunadu News September 17, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
    • ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
    • ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
    • ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
    • ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!
    • ಹಿಮಾಚಲ ಪ್ರವಾಹ ಪೀಡಿತರಿಗೆ 5 ಕೋಟಿ ನೆರವು – ಸಿಎಂ ಸಿದ್ದರಾಮಯ್ಯ ನಿರ್ಧಾರಕ್ಕೆ ಬಿಜೆಪಿ ಆಕ್ರೋಶ
    • ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
    • ಮದ್ದೂರು ಗಣೇಶ ಗಲಾಟೆಗೆ ಪೂರ್ತಿ ಮುಸ್ಲಿಮರೇ ಕಾರಣ: ಸಚಿವ ಚೆಲುವರಾಯ ಸ್ವಾಮಿ
    • ಹೆದ್ದಾರಿ ಸಮಸ್ಯೆ ನೋಡಬೇಕಾದ ಸಂಸದರು, ಶಾಸಕರು ಏನು ಮಾಡುತ್ತಿದ್ದಾರೆ- ಹೆಗ್ಡೆ
  • Popular Posts

    • 1
      ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
    • 2
      ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
    • 3
      ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
    • 4
      ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
    • 5
      ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!

  • Privacy Policy
  • Contact
© Tulunadu Infomedia.

Press enter/return to begin your search