• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಜಾಕೀರ್ ನಾಯಕ್ ನನ್ನು ಹೆಡೆಮುರಿ ಕಟ್ಟಲು ನಿರ್ಧಾರ: ರೆಡ್ ಕಾರ್ನ್ ನೋಟಿಸ್ ಜಾರಿಗೆ ಎನ್ ಐಎ ಯತ್ನ?

TNN Correspondent Posted On July 7, 2018


  • Share On Facebook
  • Tweet It

ದೆಹಲಿ: ಮತಾಂತರ, ಭಯೋತ್ಪಾದಕರಿಗೆ ಹಣ ಸಾಗಣೆ ಸೇರಿ ನಾನಾ ಆರೋಪಗಳನ್ನು ಹೊತ್ತಿರುವ ಮುಸ್ಲಿಂ ಧರ್ಮ ಪ್ರಚಾರಕ, ಉಗ್ರ ಬೋಧಕ ಜಾಕೀರ್ ನಾಯಕ್ ನನ್ನು ಶತಾಯಗತಾಯ ದೇಶಕ್ಕೆ ಕರೆತರಬೇಕು ಎಂದು ನಿರ್ಧರಿಸಿರುವ ರಾಷ್ಟ್ರೀಯ ತನಿಖಾ ದಳ ನಾನಾ ಪ್ರಯತ್ನಗಳನ್ನು ಮಾಡುತ್ತಿದೆ. ಆ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವೂ ಕಾರ್ಯ ನಿರ್ವಹಿಸುತ್ತಿದ್ದು, ವಿಶ್ವಮಟ್ಟದಲ್ಲಿ ಜಾಕೀರ್ ನಾಯಕ್ ಗೆ ಆಶ್ರಯ ನೀಡಿರುವ ರಾಷ್ಟ್ರಗಳ ಮೇಲೆ ಒತ್ತಡ ಹೇರುವ ಕಾರ್ಯವನ್ನು ಯಶಸ್ವಿಯಾಗಿ ಮಾಡುತ್ತಿದೆ. ಆದರೂ ಮಲೇಷಿಯಾ ಪ್ರಧಾನಿ ಮಹಾತೀರ್ ಮಹಮ್ಮದ ಜಾಕೀರ್ ನಾಯಕ್ ನನ್ನು ಹಸ್ತಾಂತರ ಮಾಡುವುದಕ್ಕೆ ನಿರಾಕರಿಸಿದ್ದರು.

ಹಸ್ತಾಂತರಕ್ಕೆ ಮಲೇಷಿಯಾ ನಿರಾಕರಿಸಿರುವುದರಿಂದ ಕಂಗೆಡದ ಭಾರತದ ತನಿಖಾ ಅಧಿಕಾರಿಗಳ ಜಾಕೀರ್ ನಾಯಕ್ ನನ್ನ ಹೇಗಾದರೂ ಮಾಡಿ ಹೆಡೆಮುರಿ ಕಟ್ಟಬೇಕು ಎಂದು ದೃಢ ನಿರ್ಧಾರ ಕೈಗೊಂಡಿದೆ. ಆ ನಿಟ್ಟಿನಲ್ಲಿ ಜಾಕೀರ್ ನಾಯಕ್ ವಿರುದ್ಧ ರೆಡ್ ಕಾರ್ನರ್ ನೋಟಿಸ್ ಹೊರಡಿಸಲು ರಾಷ್ಟ್ರೀಯ ತನಿಖಾ ದಳ(ಎನ್ ಐಎ)ದವರು ಪ್ರಯತ್ನಿಸುತ್ತಿದ್ದಾರೆ ಎಂದು ರಾಷ್ಟ್ರೀಯ ವಾಹಿನಿಯೊಂದಕ್ಕೆ ಉನ್ನತ ಮೂಲಗಳು ಮಾಹಿತಿ ನೀಡಿವೆ ಎನ್ನಲಾಗಿದೆ.

ಜಾಕೀರ್ ನಾಯಕ್ ನನ್ನು ದೇಶಕ್ಕೆ ಕರೆದುಕೊಂಡು ಬರುವ ನಿಟ್ಟಿನಲ್ಲಿ ಇಂಟರ್ ಪೋಲ್ ಅಧಿಕಾರಿಗಳಿಗೆ ಭಾರತದ ರಾಷ್ಟ್ರೀಯ ತನಿಖಾ ದಳದಿಂದ ಸೂಕ್ತ ದಾಖಲೆಗಳನ್ನು ನೀಡಲಾಗಿದೆ. ಆತನ ವಿರುದ್ಧ ದಾಖಲಾಗಿರುವ ಪ್ರಕರಣಗಳು ಕುರಿತು ಇಂಟರ್ ಪೋಲ್ ಗೆ ಸೂಕ್ತ ದಾಖಲೆ ಸಮೇತ ಮಾಹಿತಿ ನೀಡಲಾಗಿದೆ ಎಂದು ಎನ್ ಐಎ ಉನ್ನತ ಮೂಲಗಳು ತಿಳಿಸಿವೆ.

ತನ್ನ ಪ್ರಚೋದನಾತ್ಮಕ ಬೋಧನೆಯಿಂದ ಭಯೋತ್ಪಾದನೆಯ ವಿಷ ಬೀಜ ಬಿತ್ತುತ್ತಿದ್ದ ಮತ್ತು ಭಯೋತ್ಪಾದಕರಿಗೆ ಹಣ ವರ್ಗಾವಣೆ ಮಾಡುತ್ತಿರುವ ಆರೋಪ ಹೊತ್ತಿರುವ ಜಾಕೀರ್ ನಾಯಕ್ 2016ರದಲ್ಲಿ ಭಾರತವನ್ನು ಬಿಟ್ಟು ಓಡಿ ಹೋಗಿದ್ದ.

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • 4
      ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • 5
      ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search