• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಜಾಕೀರ್ ನಾಯಕ್ ನನ್ನು ಹೆಡೆಮುರಿ ಕಟ್ಟಲು ನಿರ್ಧಾರ: ರೆಡ್ ಕಾರ್ನ್ ನೋಟಿಸ್ ಜಾರಿಗೆ ಎನ್ ಐಎ ಯತ್ನ?

TNN Correspondent Posted On July 7, 2018
0


0
Shares
  • Share On Facebook
  • Tweet It

ದೆಹಲಿ: ಮತಾಂತರ, ಭಯೋತ್ಪಾದಕರಿಗೆ ಹಣ ಸಾಗಣೆ ಸೇರಿ ನಾನಾ ಆರೋಪಗಳನ್ನು ಹೊತ್ತಿರುವ ಮುಸ್ಲಿಂ ಧರ್ಮ ಪ್ರಚಾರಕ, ಉಗ್ರ ಬೋಧಕ ಜಾಕೀರ್ ನಾಯಕ್ ನನ್ನು ಶತಾಯಗತಾಯ ದೇಶಕ್ಕೆ ಕರೆತರಬೇಕು ಎಂದು ನಿರ್ಧರಿಸಿರುವ ರಾಷ್ಟ್ರೀಯ ತನಿಖಾ ದಳ ನಾನಾ ಪ್ರಯತ್ನಗಳನ್ನು ಮಾಡುತ್ತಿದೆ. ಆ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವೂ ಕಾರ್ಯ ನಿರ್ವಹಿಸುತ್ತಿದ್ದು, ವಿಶ್ವಮಟ್ಟದಲ್ಲಿ ಜಾಕೀರ್ ನಾಯಕ್ ಗೆ ಆಶ್ರಯ ನೀಡಿರುವ ರಾಷ್ಟ್ರಗಳ ಮೇಲೆ ಒತ್ತಡ ಹೇರುವ ಕಾರ್ಯವನ್ನು ಯಶಸ್ವಿಯಾಗಿ ಮಾಡುತ್ತಿದೆ. ಆದರೂ ಮಲೇಷಿಯಾ ಪ್ರಧಾನಿ ಮಹಾತೀರ್ ಮಹಮ್ಮದ ಜಾಕೀರ್ ನಾಯಕ್ ನನ್ನು ಹಸ್ತಾಂತರ ಮಾಡುವುದಕ್ಕೆ ನಿರಾಕರಿಸಿದ್ದರು.

ಹಸ್ತಾಂತರಕ್ಕೆ ಮಲೇಷಿಯಾ ನಿರಾಕರಿಸಿರುವುದರಿಂದ ಕಂಗೆಡದ ಭಾರತದ ತನಿಖಾ ಅಧಿಕಾರಿಗಳ ಜಾಕೀರ್ ನಾಯಕ್ ನನ್ನ ಹೇಗಾದರೂ ಮಾಡಿ ಹೆಡೆಮುರಿ ಕಟ್ಟಬೇಕು ಎಂದು ದೃಢ ನಿರ್ಧಾರ ಕೈಗೊಂಡಿದೆ. ಆ ನಿಟ್ಟಿನಲ್ಲಿ ಜಾಕೀರ್ ನಾಯಕ್ ವಿರುದ್ಧ ರೆಡ್ ಕಾರ್ನರ್ ನೋಟಿಸ್ ಹೊರಡಿಸಲು ರಾಷ್ಟ್ರೀಯ ತನಿಖಾ ದಳ(ಎನ್ ಐಎ)ದವರು ಪ್ರಯತ್ನಿಸುತ್ತಿದ್ದಾರೆ ಎಂದು ರಾಷ್ಟ್ರೀಯ ವಾಹಿನಿಯೊಂದಕ್ಕೆ ಉನ್ನತ ಮೂಲಗಳು ಮಾಹಿತಿ ನೀಡಿವೆ ಎನ್ನಲಾಗಿದೆ.

ಜಾಕೀರ್ ನಾಯಕ್ ನನ್ನು ದೇಶಕ್ಕೆ ಕರೆದುಕೊಂಡು ಬರುವ ನಿಟ್ಟಿನಲ್ಲಿ ಇಂಟರ್ ಪೋಲ್ ಅಧಿಕಾರಿಗಳಿಗೆ ಭಾರತದ ರಾಷ್ಟ್ರೀಯ ತನಿಖಾ ದಳದಿಂದ ಸೂಕ್ತ ದಾಖಲೆಗಳನ್ನು ನೀಡಲಾಗಿದೆ. ಆತನ ವಿರುದ್ಧ ದಾಖಲಾಗಿರುವ ಪ್ರಕರಣಗಳು ಕುರಿತು ಇಂಟರ್ ಪೋಲ್ ಗೆ ಸೂಕ್ತ ದಾಖಲೆ ಸಮೇತ ಮಾಹಿತಿ ನೀಡಲಾಗಿದೆ ಎಂದು ಎನ್ ಐಎ ಉನ್ನತ ಮೂಲಗಳು ತಿಳಿಸಿವೆ.

ತನ್ನ ಪ್ರಚೋದನಾತ್ಮಕ ಬೋಧನೆಯಿಂದ ಭಯೋತ್ಪಾದನೆಯ ವಿಷ ಬೀಜ ಬಿತ್ತುತ್ತಿದ್ದ ಮತ್ತು ಭಯೋತ್ಪಾದಕರಿಗೆ ಹಣ ವರ್ಗಾವಣೆ ಮಾಡುತ್ತಿರುವ ಆರೋಪ ಹೊತ್ತಿರುವ ಜಾಕೀರ್ ನಾಯಕ್ 2016ರದಲ್ಲಿ ಭಾರತವನ್ನು ಬಿಟ್ಟು ಓಡಿ ಹೋಗಿದ್ದ.

0
Shares
  • Share On Facebook
  • Tweet It




Trending Now
ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
Tulunadu News January 23, 2026
ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
Tulunadu News January 20, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
  • Popular Posts

    • 1
      ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • 2
      ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • 3
      ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • 4
      ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!

  • Privacy Policy
  • Contact
© Tulunadu Infomedia.

Press enter/return to begin your search