• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಅಭಿಪ್ರಾಯ ಸುದ್ದಿ 

ಕರಾವಳಿಯ ಕಾಂಗ್ರೆಸ್ ನಾಯಕ ಬಿ.ಎ ಮೊಹಿದೀನ್ ಆತ್ಮಕಥೆ ‘ನನ್ನೊಳಗಿನ ನಾನು ಪುಸ್ತಕ ಬಿಡುಗಡೆ- ಕಾಂಗ್ರೆಸ್ ಪಾಳಯದಲ್ಲಿ ಸಂಚಲನ

Tulunadu News Posted On July 7, 2018
0


0
Shares
  • Share On Facebook
  • Tweet It

ಮಂಗಳೂರು : ಮತ್ತೆ ರಾಜ್ಯದ ಕಾಂಗ್ರೆಸ್ ಪಾಳಯದಲ್ಲಿ ಸಂಚಲನ ಮೂಡಿಸುತ್ತಿದೆ ಕರಾವಳಿಯ ಕಾಂಗ್ರೆಸ್ ಹಿರಿಯ ನಾಯಕ ಬಿ.ಎ ಮೊಹಿದೀನ್ ಅವರ ಆತ್ಮಕಥೆ ‘ನನ್ನೊಳಗಿನ ನಾನು’. ಇತ್ತೀಚೆಗೆ ಕಾಂಗ್ರೆಸ್ ಹಿರಿಯ ಮುಖಂಡ ಜನಾರ್ಧನ ಪೂಜಾರಿ ಅವರ ಆತ್ಮಕಥೆ ‘ಸಾಲ ಮೇಳದ ಸಂಗ್ರಾಮ’ ಬಿಡುಗಡೆಯಾಗಿತ್ತು. ಆದರೆ ಕೇಂದ್ರದ ಸಚಿವರಾಗಿ ಕಾಂಗ್ರೆಸ್ ನ ಹಲವು ಹುದ್ದೆಗಳನ್ನು ಅಲಂಕರಿಸಿದ್ದರೂ ಪೂಜಾರಿ ಅವರ ಆತ್ಮಕಥೆಯಲ್ಲಿ ಯಾವುದೇ ರೀತಿಯ ವಿವಾದಾತ್ಮಕ ಅಂಶಗಳಿರದೇ ಅದು ಸಂಪೂರ್ಣ ಸಪ್ಪೆಯಾಗಿತ್ತು.

ಆದರೆ ಈಗ ಕರಾವಳಿಯ ಹಿರಿಯ ಕಾಂಗ್ರೆಸ್ ನಾಯಕ ಬಿ.ಎ ಮೊಹಿದೀನ್ ಅವರ ಆತ್ಮಕಥೆ ‘ನನ್ನೊಳಗಿನ ನಾನು’ ಬಿಡುಗಡೆಗೆ ಮುನ್ನವೇ ಕುತೂಹಲ ಸೃಷ್ಠಿಸಿದೆ. ಕರಾವಳಿಯಲ್ಲಿ ಕಾಂಗ್ರೆಸ್ ನಾಯಕರ ಸ್ಫೋಟಕ ಮಾಹಿತಿಗಳನ್ನು ತಮ್ಮ ಆತ್ಮಕಥೆಯಲ್ಲಿ ಬರೆದಿರುವ ಮೊಹಿದೀನ್ ಅವರು, ಕಾಂಗ್ರೆಸ್ ನ ಹಿರಿಯ ನಾಯಕರ ವಿರುದ್ಧ ತಮ್ಮ ಆತ್ಮಕಥೆಯಲ್ಲಿ ತಮ್ಮ ನೋವನ್ನು ತೆರೆದಿಟ್ಟಿದ್ದಾರೆ. ನನಗೀಗ 80 ವರ್ಷ ಪ್ರಾಯ. ಬದುಕಿನ ಮುಸ್ಸಂಜೆಯ ಹೊತ್ತು ಎಂದು ಆರಂಭಿಸುವ ಮೊಹಿದೀನ್ ಅವರು ತನ್ನ ಬಾಲ್ಯ, ಶಿಕ್ಷಣ, ಕಾಲೇಜಿನ ದಿನಗಳು , ಮದುವೆ ಎಲ್ಲವನ್ನೂ ಆತ್ಮಕಥೆಯಲ್ಲಿ ವಿವರಿಸಿದ್ದಾರೆ.

ಸಜ್ಜನ ರಾಜಕಾರಣಿ ಎಂದೇ ಗುರುತಿಸಿಕೊಂಡ ಮೊಹಿದಿನ್ ಅವರು ದಕ್ಷಿಣಕನ್ನಡ ಜಿಲ್ಲೆಯ ಪ್ರಮುಖ ಹಿರಿಯ ನಾಯಕರ ವಿರುದ್ಧವೇ ತಮ್ಮ ಆತ್ಮಕಥೆಯಲ್ಲಿ ಗುಡುಗಿದ್ದಾರೆ. ನನ್ನ ರಾಜಕೀಯ ಜೀವನವನ್ನು ಮುಗಿಸಿದ್ದೇ ಜನಾರ್ಧನ ಪೂಜಾರಿ, ವೀರಪ್ಪ ಮೊಯ್ಲಿ ಹಾಗೂ ಆಸ್ಕರ್ ಫರ್ನಾಂಡಿಸ್ ಎಂದು ಆರೋಪಿಸಿದ್ದಾರೆ. ದಕ್ಷಿಣಕನ್ನಡ ಜಿಲ್ಲೆಯಲ್ಲಿ ಕಾಂಗ್ರೆಸನ್ನು ಜಾತ್ಯಾತೀತವಾಗಿ ಕಟ್ಟಿ ಬೆಳೆಸಿದ ನನ್ನನ್ನು ಸೇರಿ, ಅನೇಕ ಕಾಂಗ್ರೆಸ್ ಮುಖಂಡರು ರಾಜಕೀಯ ಜೀವನವನ್ನೇ ಕಾಂಗ್ರೆಸ್ ಹಿರಿಯ ಮುಖಂಡ ಜನಾರ್ಧನ ಪೂಜಾರಿ ಸರ್ವನಾಶ ಮಾಡಿದರು. ದಕ್ಷಿಣಕನ್ನಡ ಜಿಲ್ಲೆಯಲ್ಲಿ ಕೋಮುವಾದಿ ರಾಜಕೀಯಕ್ಕೆ ಮುನ್ನುಡಿ ಬರೆದವರು ಜನಾರ್ಧನ ಪೂಜಾರಿ ಎಂಬ ಸ್ಪೋಟಕ ಮಾಹಿತಿಯನ್ನು ತಮ್ಮ ಆತ್ಮಕಥೆಯಲ್ಲಿ ಬರೆದಿದ್ದಾರೆ.

ದೇವರಾಜು ಅರಸು ನಿಕಟವರ್ತಿಯಾಗಿ ರಾಜಕೀಯ ಪ್ರವೇಶಿಸಿದ ಮೊಹಿದೀನ್ ಅವರು ಕಾಂಗ್ರೆಸ್ ಹಾಗೂ ಜನತಾ ಪಾಳಯದಲ್ಲಿ ಸಮವಾಗಿ ಮಿಂಚಿದರು. 1978ರಲ್ಲಿ ಬಂಟ್ವಾಳದ ಕಾಂಗ್ರೆಸ್ ಶಾಸಕರಾಗಿ ಆಯ್ಕೆಯಾಗಿದ್ದರು. ನಂತರ ಕಾಂಗ್ರೆಸ್ ನ ಬಂಡಾಯ ಕಾಲದಲ್ಲಿ ಅರಸು ಪಾಳಯದಲ್ಲಿದ್ದ ಕಾರಣ ಅವರಿಗೆ ನಂತರ ಚುನಾವಣೆಯಲ್ಲಿ ಟಿಕೇಟ್ ನಿರಾಕರಿಸಲಾಗಿತ್ತು. ಬಿ.ಎ ಮೊಹಿದೀನ್ ಅವರು ಒಂದು ಬಾರಿ ಶಾಸಕರಾಗಿ ಎರಡು ಬಾರಿ ವಿಧಾನ ಪರಿಷತ್ ಸದಸ್ಯರಾಗಿ ಆಯ್ಕೆಯಾಗಿದ್ದು, ಒಂದು ಬಾರಿ ರಾಜ್ಯ ಸಚಿವರಾಗಿ ಸೇವೆ ಸಲ್ಲಿಸಿದ್ದರು. ಅರಸು ಕಾಂಗ್ರೆಸ್ ನಿಂದ ಬಂದವರಿಗೆ ಪೂಜಾರಿ, ಮೊಯ್ಲಿ ಮತ್ತು ಆಸ್ಕರ್ ಮಾಡಿದ ಅನ್ಯಾಯದ ಬಗ್ಗೆ ಆತ್ಮಕಥನದುದ್ದಕ್ಕೂ ವಿವರಿಸಿರುವ ಮೊಹಿದ್ದಿನ್ ಅವರು , ಒಂದು ಹಂತದಲ್ಲಿ ನನ್ನ ರಾಜಕೀಯ ಜೀವನವನ್ನು ಮುಗಿಸಿದ ಈ ಮೂವರು ನಾಯಕರ ವಿರುದ್ಧ ಕಿಡಿಕಾರಿದ್ದಾರೆ.

ಈ ಮೂವರು ಈ ರೀತಿಯಾಗಿ ನನಗೇಕೆ ಅನ್ಯಾಯ ಮಾಡಿದ್ದಾರೆ ಎಂದು ಈಗಲೂ ನಾನು ಒಮ್ಮೊಮ್ಮೆ ಯೋಚಿಸುತ್ತೇನೆ. ನಾನು ಯಾರಿಗೂ ಅನ್ಯಾಯ ಮಾಡಿಲ್ಲ, ತೊಂದರೆಕೊಟ್ಟಿಲ್ಲ. ಆದರೆ ಈ ಮೂವರು ನನಗೆ ಮಾಡಿದ ಅನ್ಯಾಯ ನೆನಪಾದಾಗ ಒಂದು ರೀತಿಯ ನೋವು ಕಾಡುತ್ತದೆ ಎನ್ನುವ ಸಾಲುಗಳು ಈ ಆತ್ಮಕಥನದಲ್ಲಿ ಒಳಗೊಂಡಿದೆ. ‘ನನ್ನೊಳಗಿನ ನಾನು’ ಆತ್ಮಕಥೆಯ ನಿರೂಪಣೆಯ ಕಾರ್ಯವನ್ನು ಮಹಮ್ಮದ್ ಕುಳಾಯಿ ಮತ್ತು ಬಿ.ಎ. ಮೊಹಮ್ಮದ್ ಆಲಿ ವಹಿಸಿದ್ದಾರೆ. ರಾಜಕೀಯದಲ್ಲಿ ಉಂಡ ಸಿಹಿ – ಕಹಿ ಘಟನೆಗಳನ್ನು ಮೊಹಿದೀನ್ ಅವರು 232 ಪುಟಗಳ ತನ್ನ ಆತ್ಮಕಥನದಲ್ಲಿ ಮಾರ್ಮಿಕವಾಗಿ ಹಂಚಿಕೊಂಡಿದ್ದಾರೆ. ಈ ಆತ್ಮಕಥೆ ಇನ್ನಷ್ಟೇ ಬಿಡುಗಡೆಯಾಗಬೇಕಿದೆ.

0
Shares
  • Share On Facebook
  • Tweet It




Trending Now
ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
Tulunadu News November 1, 2025
ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
Tulunadu News October 31, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
    • ದೀಪಾವಳಿ ಬೋನಸ್ ಕಡಿಮೆ ಕೊಟ್ಟಿದ್ದಕ್ಕೆ ಟೋಲ್ ಸಿಬ್ಬಂದಿಗಳು ಮಾಡಿದ್ದೇನು?
  • Popular Posts

    • 1
      ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • 2
      ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • 3
      ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • 4
      ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • 5
      ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!

  • Privacy Policy
  • Contact
© Tulunadu Infomedia.

Press enter/return to begin your search