• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

5 ವರ್ಷ ಮಾತ್ರವಲ್ಲ, ಇನ್ನೂ ಹಲವು ಬಾರಿ ಮೋದಿಯವರೇ ಪಿಎಂ ಆಗಬೇಕೆಂದ ಕರ್ನಾಟಕದ ಅರಸ ಯಾರು ಗೊತ್ತಾ?

TNN Correspondent Posted On July 8, 2018
0


0
Shares
  • Share On Facebook
  • Tweet It

ಪ್ರಧಾನಿ ನರೇಂದ್ರ ಮೋದಿ ಅವರು ಎಲ್ಲ ರಾಜಕಾರಣಿಗಳಂತಲ್ಲ ಎಂಬುದು ಇಡೀ ವಿಶ್ವಕ್ಕೇ ಗೊತ್ತಿರುವ ಸಂಗತಿ. ಅದೇ ಕಾರಣಕ್ಕೆ ಪ್ರಸ್ತುತ ನರೇಂದ್ರ ಮೋದಿಯವರು ಯಾವುದೇ ದೇಶಕ್ಕೆ ಹೋದರೂ, ಅಲ್ಲಿ ಕೆಂಪುಹಾಸು ಹಾಸಿ ಸ್ವಾಗತಿಸುತ್ತಾರೆ. ಭಾರತದ ಯಾವುದೇ ಮೂಲೆಗೆ ಹೋದರೂ ಲಕ್ಷಾಂತರ ಜನ ಸೇರುತ್ತಾರೆ.

ನರೇಂದ್ರ ಮೋದಿ ಅವರೂ ಅಷ್ಟೇ, ಕಳೆದ ನಾಲ್ಕು ವರ್ಷದಿಂದ ಪ್ರಧಾನಿಯಾಗಿರುವ ಅವರು ಒಂದು ದಿನವೂ ರಜೆ ತೆಗೆದುಕೊಳ್ಳದೆ ದೇಶಕ್ಕಾಗಿ ದುಡಿಯುತ್ತಿದ್ದಾರೆ. ನಾನಾ ಯೋಜನೆಗಳ ಮೂಲಕ ದೇಶವನ್ನು ಅಭಿವೃದ್ಧಿ ಪಥದತ್ತ ಸಾಗಿಸುತ್ತಾರೆ. ಈ ನಾಲ್ಕು ವರ್ಷದಲ್ಲಿ ಒಂದೇ ಒಂದು ಭ್ರಷ್ಟಾಚಾರದ ಹಗರಣ ಮಾಡದ ಹಾಗೆ ನೋಡಿಕೊಂಡು, ತಾವೂ ತಿನ್ನದೆ, ಬೇರೆಯವರಿಗೂ ತಿನ್ನಲು ಬಿಡದೆ ಉತ್ತಮ ಆಡಳಿತ ನೀಡುತ್ತಿದ್ದಾರೆ.

ಪ್ರಾಯಶಃ, ಇದೇ ಕಾರಣಕ್ಕೇ ಇರಬೇಕು, ಮೈಸೂರಿನ ಅರಸ ಮಹಾರಾಜ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಪ್ರಧಾನಿ ನರೇಂದ್ರ ಮೋದಿ ಅವರ ಆಡಳಿತವನ್ನು ಮೆಚ್ಚಿಕೊಂಡಿದ್ದು, ಈಗ ನೀಡುತ್ತಿರುವ ಐದು ವರ್ಷದ ಆಡಳಿತದ ಜತೆಗೆ, ಇನ್ನೂ ಹಲವು ಬಾರಿ ನರೇಂದ್ರ ಮೋದಿ ಅವರೇ ಪ್ರಧಾನಿಯಾಗಬೇಕು ಎಂದಿದ್ದಾರೆ.

ಹೌದು, ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಅವರು ಉತ್ತಮ ಆಡಳಿತ ನೀಡಿದ್ದಾರೆ. ನಾವು ಎಂದಿಗೂ ಉತ್ತಮ ಕೆಲಸಕ್ಕೆ ಬೆಂಬಲ ನೀಡಲಿದ್ದು, ಕಳೆದ ನಾಲ್ಕು ವರ್ಷದಿಂದ ಮೋದಿ ಆಡಳಿತ ನಡೆಸುತ್ತಿರುವುದು ಸಂತಸದ ಸಂಗತಿ. ಐದು ವರ್ಷಕ್ಕೆ ಎಲ್ಲವೂ ಬದಲಾಗಲು ಸಾಧ್ಯವಿಲ್ಲ, ಅವರು ಮತ್ತಷ್ಟು ಅವಧಿಗೆ ಪ್ರಧಾನಿಯಾಗಬೇಕು ಎಂದು ಮಹಾರಾಜರು ತಿಳಿಸಿದ್ದಾರೆ. ಮಹಾರಾಜರ ಮಾತು ಸತ್ಯವಾಗಲಿ, ಮೋದಿ ಅವರಿಂದ ದೇಶದ ಪ್ರಭೆ ಮತ್ತಷ್ಟು ಎತ್ತರಕ್ಕೆ ಹೋಗಲಿ.

0
Shares
  • Share On Facebook
  • Tweet It




Trending Now
ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ
Tulunadu News June 16, 2026
Najlepsze bonusy i sloty w polskim kasynie online
Tulunadu News May 29, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ
    • Najlepsze bonusy i sloty w polskim kasynie online
    • ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ

  • Privacy Policy
  • Contact
© Tulunadu Infomedia.

Press enter/return to begin your search