• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

5 ವರ್ಷ ಮಾತ್ರವಲ್ಲ, ಇನ್ನೂ ಹಲವು ಬಾರಿ ಮೋದಿಯವರೇ ಪಿಎಂ ಆಗಬೇಕೆಂದ ಕರ್ನಾಟಕದ ಅರಸ ಯಾರು ಗೊತ್ತಾ?

TNN Correspondent Posted On July 8, 2018
0


0
Shares
  • Share On Facebook
  • Tweet It

ಪ್ರಧಾನಿ ನರೇಂದ್ರ ಮೋದಿ ಅವರು ಎಲ್ಲ ರಾಜಕಾರಣಿಗಳಂತಲ್ಲ ಎಂಬುದು ಇಡೀ ವಿಶ್ವಕ್ಕೇ ಗೊತ್ತಿರುವ ಸಂಗತಿ. ಅದೇ ಕಾರಣಕ್ಕೆ ಪ್ರಸ್ತುತ ನರೇಂದ್ರ ಮೋದಿಯವರು ಯಾವುದೇ ದೇಶಕ್ಕೆ ಹೋದರೂ, ಅಲ್ಲಿ ಕೆಂಪುಹಾಸು ಹಾಸಿ ಸ್ವಾಗತಿಸುತ್ತಾರೆ. ಭಾರತದ ಯಾವುದೇ ಮೂಲೆಗೆ ಹೋದರೂ ಲಕ್ಷಾಂತರ ಜನ ಸೇರುತ್ತಾರೆ.

ನರೇಂದ್ರ ಮೋದಿ ಅವರೂ ಅಷ್ಟೇ, ಕಳೆದ ನಾಲ್ಕು ವರ್ಷದಿಂದ ಪ್ರಧಾನಿಯಾಗಿರುವ ಅವರು ಒಂದು ದಿನವೂ ರಜೆ ತೆಗೆದುಕೊಳ್ಳದೆ ದೇಶಕ್ಕಾಗಿ ದುಡಿಯುತ್ತಿದ್ದಾರೆ. ನಾನಾ ಯೋಜನೆಗಳ ಮೂಲಕ ದೇಶವನ್ನು ಅಭಿವೃದ್ಧಿ ಪಥದತ್ತ ಸಾಗಿಸುತ್ತಾರೆ. ಈ ನಾಲ್ಕು ವರ್ಷದಲ್ಲಿ ಒಂದೇ ಒಂದು ಭ್ರಷ್ಟಾಚಾರದ ಹಗರಣ ಮಾಡದ ಹಾಗೆ ನೋಡಿಕೊಂಡು, ತಾವೂ ತಿನ್ನದೆ, ಬೇರೆಯವರಿಗೂ ತಿನ್ನಲು ಬಿಡದೆ ಉತ್ತಮ ಆಡಳಿತ ನೀಡುತ್ತಿದ್ದಾರೆ.

ಪ್ರಾಯಶಃ, ಇದೇ ಕಾರಣಕ್ಕೇ ಇರಬೇಕು, ಮೈಸೂರಿನ ಅರಸ ಮಹಾರಾಜ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಪ್ರಧಾನಿ ನರೇಂದ್ರ ಮೋದಿ ಅವರ ಆಡಳಿತವನ್ನು ಮೆಚ್ಚಿಕೊಂಡಿದ್ದು, ಈಗ ನೀಡುತ್ತಿರುವ ಐದು ವರ್ಷದ ಆಡಳಿತದ ಜತೆಗೆ, ಇನ್ನೂ ಹಲವು ಬಾರಿ ನರೇಂದ್ರ ಮೋದಿ ಅವರೇ ಪ್ರಧಾನಿಯಾಗಬೇಕು ಎಂದಿದ್ದಾರೆ.

ಹೌದು, ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಅವರು ಉತ್ತಮ ಆಡಳಿತ ನೀಡಿದ್ದಾರೆ. ನಾವು ಎಂದಿಗೂ ಉತ್ತಮ ಕೆಲಸಕ್ಕೆ ಬೆಂಬಲ ನೀಡಲಿದ್ದು, ಕಳೆದ ನಾಲ್ಕು ವರ್ಷದಿಂದ ಮೋದಿ ಆಡಳಿತ ನಡೆಸುತ್ತಿರುವುದು ಸಂತಸದ ಸಂಗತಿ. ಐದು ವರ್ಷಕ್ಕೆ ಎಲ್ಲವೂ ಬದಲಾಗಲು ಸಾಧ್ಯವಿಲ್ಲ, ಅವರು ಮತ್ತಷ್ಟು ಅವಧಿಗೆ ಪ್ರಧಾನಿಯಾಗಬೇಕು ಎಂದು ಮಹಾರಾಜರು ತಿಳಿಸಿದ್ದಾರೆ. ಮಹಾರಾಜರ ಮಾತು ಸತ್ಯವಾಗಲಿ, ಮೋದಿ ಅವರಿಂದ ದೇಶದ ಪ್ರಭೆ ಮತ್ತಷ್ಟು ಎತ್ತರಕ್ಕೆ ಹೋಗಲಿ.

0
Shares
  • Share On Facebook
  • Tweet It




Trending Now
ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
Tulunadu News January 20, 2026
ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
Tulunadu News January 19, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
  • Popular Posts

    • 1
      ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • 2
      ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • 3
      ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • 4
      ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..

  • Privacy Policy
  • Contact
© Tulunadu Infomedia.

Press enter/return to begin your search