• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಮಹಿಳೆ ವಿರುದ್ಧ ಸುಳ್ಳು ದಾಖಲೆ ನೀಡಿದ ಅಲ್ಪೇಶ, ಹಾರ್ದಿಕ್, ಮೇವಾನಿ ವಿರುದ್ಧ ಪ್ರಕರಣ ದಾಖಲು

TNN Correspondent Posted On July 8, 2018


  • Share On Facebook
  • Tweet It

ಗಾಂಧಿನಗರ: ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ವಿರುದ್ಧ ಸದಾ ಹಲ್ಲು ಮಸೆಯುವ ಗುಜರಾತ್ ನ ಮುಖಂಡ ಹಾರ್ದಿಕ್ ಪಟೇಲ್, ಶಾಸಕರಾದ ಅಲ್ಪೇಶ್ ಠಾಕೂರ ಮತ್ತು ಜಿಗ್ನೇಶ್ ಮೇವಾನಿ, ಇದೀಗ ಗುಜರಾತ್ನಲ್ಲಿರುವ ಬಿಜೆಪಿ ಸರ್ಕಾರ ಅಕ್ರಮ ಸಾರಾಯಿ ಮಾರಾಟ ಮಾಡುವಲ್ಲಿ ವಿಫಲವಾಗಿದೆ ಎಂಬುದನ್ನು ಸಾಬೀತು ಪಡಿಸಲು ಸುಳ್ಳು ದಾಖಲೆ ಸೃಷ್ಟಿಸಿರುವುದು ಬಹಿರಂಗವಾಗಿದ್ದು, ಮೂವರ ವಿರುದ್ಧ ಪ್ರಕರಣ ದಾಖಲಾಗಿದೆ.

ಸದಾ ಮಾಧ್ಯಮಗಳಲ್ಲಿ ಮಿಂಚಬೇಕು ಎಂದು ವಿವಾದಗಳನ್ನು ಸೃಷ್ಟಿಸುತ್ತಲೇ ಎಡವಟ್ಟುಗಳನ್ನು ಮಾಡಿಕೊಳ್ಳುವ ಬಿಜೆಪಿಯ ತ್ರಿವಳಿ ವಿರೋಧಿಗಳಾದ ಶಾಸಕ ಅಲ್ಪೇಶ ಠಾಕೂರ, ಜಿಗ್ನೇಶ್ ಮೇವಾನಿ ಮತ್ತು ಹಾರ್ದಿಕ ಪಟೇಲ್ ವಿರುದ್ಧ ದೂರು ದಾಖಲಾಗಿದೆ. ಮಹಿಳೆಯೊಬ್ಬರ ವಿರುದ್ಧ ಅಕ್ರಮವಾಗಿ ಸಾರಾಯಿ ಮಾರುತ್ತಿದ್ದಾರೆ ಎಂದು ಶಾಸಕರಾದ ಅಲ್ಪೇಶ್ ಠಾಕೂರ, ಜಿಗ್ನೇಶ್ ಮೇವಾನಿ ಮತ್ತು ಹಾರ್ದಿಕ್ ಪಟೇಲ್ ಸುಳ್ಳು ದಾಖಲೆಗಳನ್ನು ನೀಡಿ, ರಾಜ್ಯ ಸರ್ಕಾರ ಅಕ್ರಮ ಸಾರಾಯಿ ಮಾರಾಟ ಮಾಡುವಲ್ಲಿ ವಿಫಲವಾಗಿದೆ ಎಂದು ಆರೋಪಿಸಿ, ಹೆಸರು ಪಡೆದುಕೊಳ್ಳಲು ಹಪಾಹಪಿಸಿದ್ದರು.

ಇದೀಗ ಮಹಿಳೆ ಮೂವರ ವಿರುದ್ಧ ತಿರುಗಿ ಬಿದ್ದಿದ್ದು, ಯಾವುದೇ ರೀತಿಯಲ್ಲೂ ಅಕ್ರಮವಾಗಿ ಸಾರಾಯಿ ಮಾರಾಟ ಮಾಡಿಲ್ಲ. ಸುಳ್ಳು ದಾಖಲೆಗಳನ್ನು ಸೃಷ್ಠಿಸಿ ನನ್ನಗೆ ಕಿರುಕುಳ ನೀಡಿದ್ದಾರೆ. ನನ್ನ ಮನೆಯಲ್ಲಿ ಎರಡು ಲಿಕ್ಕರ್ ಬಾಟಲಿಗಳನ್ನು ತಂದಿಟ್ಟು, ಅದನ್ನೇ ಅಕ್ರಮ ಸಾರಾಯಿ ಮಾರಾಟ ಮಾಡುತ್ತಿದ್ದಾರೆ ಎಂದು ಸುಳ್ಳು ಸೃಷ್ಟಿಸಿದ್ದಾರೆ. ಅಲ್ಲದೇ ನನಗೆ ವಿನಾಕಾರಣ ಕಿರುಕುಳ ನೀಡಿದ್ದಾರೆ ಎಂದು ಮಹಿಳೆ ದೂರು ನೀಡಿದ್ದರು. ಅಲ್ಲದೇ ಮಹಿಳೆಗೆ ಭಯಹುಟ್ಟಿಸಿದ್ದರು ಎನ್ನಲಾಗಿದೆ. ಈ ಕುರಿತು ತನಿಖೆ ನಡೆಸಿರುವ ಪೊಲೀಸರು ರಾಜಕೀಯ ಮೈಲೇಜ್ ಪಡೆಯಲು ಹಂಬಲಿಸುತ್ತಿರುವ ಮೂವರು ಮುಖಂಡರ ವಿರುದ್ಧ ಸುಳ್ಳು ದಾಖಲೆ ಸೃಷ್ಟಿ ಆರೋಪದಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಉದ್ದೇಶ ಪೂರ್ವಕವಾಗಿ ಸುಳ್ಳು ಸೃಷ್ಟಿ, ಮನೆ ಮೇಲೆ ವಿನಾಕಾರಣ ದಾಳಿ ನಡೆಸಿರುವುದು, ಸಮಾಜಕ್ಕೆ ತಪ್ಪು ಸಂದೇಶ ರವಾನಿಸುವುದು ಸೇರಿ ನಾನಾ ಪ್ರಕರಣಗಳು ದಾಖಲಿಸಲಾಗಿದೆ.

  • Share On Facebook
  • Tweet It


- Advertisement -


Trending Now
ಮೇ 15 ರ ತನಕ ಫ್ಲೆಕ್ಸ್ ರಹಿತ ಸುಂದರ ಮಂಗಳೂರು, ನಂತರ!!
Tulunadu News March 31, 2023
ಯಡ್ಡಿ ಮನೆ ಮೇಲೆ ಕಲ್ಲು ಬಿಸಾಡಿದ್ದೇ ಆಶ್ಚರ್ಯ!!
Tulunadu News March 30, 2023
Leave A Reply

  • Recent Posts

    • ಮೇ 15 ರ ತನಕ ಫ್ಲೆಕ್ಸ್ ರಹಿತ ಸುಂದರ ಮಂಗಳೂರು, ನಂತರ!!
    • ಯಡ್ಡಿ ಮನೆ ಮೇಲೆ ಕಲ್ಲು ಬಿಸಾಡಿದ್ದೇ ಆಶ್ಚರ್ಯ!!
    • ಶಾಸಕರು ಮುಂದಿನ ಅವಧಿಗೆ ಮಾಡಲೇಬೇಕಾದ ಕಾರ್ಯಗಳು ಇವು!!
    • ಲಿಂಕ್ ಮಾಡಿ ಎಂದರೆ ಕುಂಬಳಕಾಯಿ ಕಳ್ಳರಂತೆ ವರ್ತಿಸುವುದು ಯಾಕೆ?
    • ಪೌರ ಕಾರ್ಮಿಕರು ಕೆಲಸಕ್ಕೆ ಮರಳಿದ್ದು ಹೇಗೆ?
    • ರಾಹುಲ್ ಮುತ್ತಜ್ಜ ಮಾಡಿದ್ದ ಕಾನೂನು ಇವರಿಗೆ ಮುಳುವಾಯಿತು!
    • ಎಲ್ಲಾ ಗಾಂಧಿಗಳು ಮಹಾತ್ಮ ಗಾಂಧಿಯಂತಲ್ಲ ಎಂದು ರಾಹುಲ್ ಗೊತ್ತಿರಬೇಕಿತ್ತು!!
    • ಉಚಿತ ಖಚಿತ ಎನ್ನುವುದು ಯಾವಾಗಲೂ ಡೌಟ್ ಆಯಿತಾ?
    • ಕಸ ಸಂಗ್ರಹಣೆಯ ಹಿಂದೆ ಕಾಂಗ್ರೆಸ್ ರಾಜಕೀಯ ವಾಸನೆ!!
    • ಯಾರು ಯಾವ ಕ್ಷೇತ್ರದಲ್ಲಿ ಎಂದು ಯಾರಿಗೂ ಗೊತ್ತಿಲ್ಲ!!
  • Popular Posts

    • 1
      ಮೇ 15 ರ ತನಕ ಫ್ಲೆಕ್ಸ್ ರಹಿತ ಸುಂದರ ಮಂಗಳೂರು, ನಂತರ!!
    • 2
      ಯಡ್ಡಿ ಮನೆ ಮೇಲೆ ಕಲ್ಲು ಬಿಸಾಡಿದ್ದೇ ಆಶ್ಚರ್ಯ!!
    • 3
      ಶಾಸಕರು ಮುಂದಿನ ಅವಧಿಗೆ ಮಾಡಲೇಬೇಕಾದ ಕಾರ್ಯಗಳು ಇವು!!
    • 4
      ಲಿಂಕ್ ಮಾಡಿ ಎಂದರೆ ಕುಂಬಳಕಾಯಿ ಕಳ್ಳರಂತೆ ವರ್ತಿಸುವುದು ಯಾಕೆ?
    • 5
      ಪೌರ ಕಾರ್ಮಿಕರು ಕೆಲಸಕ್ಕೆ ಮರಳಿದ್ದು ಹೇಗೆ?


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search