• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ನಳಿನ್, ಜಗದೀಶ್ ಕಾರಂತ್ ಸುಳ್ಯ ಪ್ರಖರ ಭಾಷಣ ಪ್ರಕರಣದಲ್ಲಿ ಖುಲಾಸೆ

tulunadunews Network Posted On July 8, 2018
0


0
Shares
  • Share On Facebook
  • Tweet It

ದಕ್ಷಿಣ ಕನ್ನಡ ಲೋಕಸಭಾ ಸಂಸದ ನಳಿನ್ ಕುಮಾರ್ ಕಟೀಲು, ಹಿಂದೂ ಜಾಗರಣ ವೇದಿಕೆಯ ದಕ್ಷಿಣ ಪ್ರಾಂತ ಸಂಚಾಲಕ ಜಗದೀಶ್ ಕಾರಂತ ಸೇರಿದಂತೆ ಹನ್ನೆರಡು ಮಂದಿ ಮೇಲೆ ಕೋಮು ಸೌಹಾರ್ಧತೆಗೆ ದಕ್ಕೆ ತರುವಂತಹ ಪ್ರಚೋದನಾಕಾರಿ ಭಾಷಣ ಮಾಡಿ ಸಮಾಜದಲ್ಲಿ ಶಾಂತಿ ಕದಡುವಂತಹ ಕೃತ್ಯ ಮಾಡಿದ್ದಾರೆ ಎಂದು ಎಸ್ ಡಿಪಿಐ ಕಾರ್ಯಕರ್ತ ಹಾಗೂ ಗ್ರಾಮ ಪಂಚಾಯತಿ ಸದಸ್ಯ ಕೆ ಎಸ್ ಉಮರ್, ಸುಳ್ಯ ಇವರು ದಿನಾಂಕ 04/03/2009 ರಲ್ಲಿ ಖಾಸಗಿ ಪಿರ್ಯಾದು ಸಲ್ಲಿಸಿ ಪ್ರಕರಣವನ್ನು ಪೊಲೀಸರ ಮುಖಾಂತರ ತನಿಖೆ ನಡೆಸಿ ಸರಕಾರದ ವಿಶೇಷ ಅನುಮತಿ ಪಡೆದು ಆರೋಪ ಪಟ್ಟಿಯನ್ನು ಸುಳ್ಯದ ಜೆಎಂಎಫ್ ಸಿ ನ್ಯಾಯಾಲಯಕ್ಕೆ ಸಲ್ಲಿಸಲಾಗಿತ್ತು.
ದಿನಾಂಕ 12/2/2009 ರಲ್ಲಿ ಸಂಜೆ ಹಿಂದೂ ಹಿತ ರಕ್ಷಣಾ ವೇದಿಕೆ, ಸುಳ್ಯ ತಾಲೂಕು ಇವರ ನೇತೃತ್ವದಲ್ಲಿ ನಡೆದ ಸಾರ್ವಜನಿಕ ಕಾರ್ಯಕ್ರಮದ ಕುರಿತಾಗಿ ಆರೋಪಿಸಲಾದ ಪ್ರಕರಣ ಇದಾಗಿತ್ತು. ಸರ್ವೋಚ್ಚ ನ್ಯಾಯಾಲಯದ ನಿರ್ದೇಶನದ ಪ್ರಕಾರ ಕರ್ನಾಟಕ ಉಚ್ಛ ನ್ಯಾಯಾಲಯ ಸ್ಥಾಪಿಸಿದ ಶಾಸಕರು ಹಾಗೂ ಸಂಸದರ ಮೇಲೆ ದಾಖಲಾದ ಕ್ರಿಮಿನಲ್ ಮೊಕದ್ದಮೆಗಳ ವಿಚಾರಣಾ ವಿಶೇಷ ನ್ಯಾಯಾಲಯ ಈ ಪ್ರಕರಣವನ್ನು ವಿಚಾರಣೆಗೆ ಕೈಗೆತ್ತಿಕೊಂಡು ಎಲ್ಲಾ ಆರೋಪಿಗಳನ್ನು ದೋಷ ಮುಕ್ತಗೊಳಿಸಿ ಆದೇಶ ಹೊರಡಿಸಿದೆ.
ಈ ಪ್ರಕರಣದಲ್ಲಿ ಯಾವುದೇ ಸಕಾರಣವಿಲ್ಲದೆ ದೂರು ದಾಖಲಿಸಲು ವಿಳಂಬವಾಗಿದ್ದು ಸಾಕ್ಷಿದಾರರೆಲ್ಲರೂ ರಾಜಕೀಯ ದುರುದ್ದೇಶ ಯಾ ದ್ವೇಷದಿಂದ ಆರೋಪಿಗಳ ವಿರುದ್ಧ ಸಾಕ್ಷಿ ನುಡಿದಿರುವುದು ಸ್ಪಷ್ಟವಾಗಿದ್ದು, ಸರಕಾರದ ಅಭಿಯೋಜನೆಗೆ ಪೂರ್ವಾನುಮತಿ ನೀಡುವ ಸಂದರ್ಭದಲ್ಲಿ ಕಾನೂನಿನ ಉಲ್ಲಂಘನೆಯಾಗಿದ್ದು, ಆರೋಪಿಗಳು ದುರುದ್ದೇಶದಿಂದ ಪ್ರಚೋದನಕಾರಿ ಭಾಷಣ ಮಾಡಿದ್ದರು ಎಂಬ ಆರೋಪಗಳನ್ನು ಸಾಬೀತುಪಡಿಸಲು ಸರಕಾರ ವಿಫಲವಾಗಿದ್ದು, ಆರೋಪಿಗಳನ್ನು ಶಿಕ್ಷೆಗೊಳಪಡಿಸಲು ಯಾವುದೇ ಸಕಾರಣ ಮತ್ತು ಸಾಕ್ಷ್ಯಾಧಾರಗಳು ಇಲ್ಲವೆಂದು ಆರೋಪಿಗಳ ಪರ ವಕೀಲರಾದ ಅರುಣ್ ಶ್ಯಾಂ ಎಂ ರವರು ಮಂಡಿಸಿದ ವಾದವನ್ನು ಆಲಿಸಿದ ವಿಶೇಷ ನ್ಯಾಯಾಲಯ ಈ ಆದೇಶ ಹೊರಡಿಸಿದೆ.

0
Shares
  • Share On Facebook
  • Tweet It




Trending Now
ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
tulunadunews Network January 30, 2026
ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
tulunadunews Network January 28, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
  • Popular Posts

    • 1
      ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • 2
      ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ

  • Privacy Policy
  • Contact
© Tulunadu Infomedia.

Press enter/return to begin your search