• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಭಾರೀ ಮಳೆ: ನಾಲ್ಕನೇ ಬಾರಿ ಮುಳುಗಿದ ಸುಬ್ರಹ್ಮಣ್ಯ ಹೊಸಮಠ ಸೇತುವೆ

Tulunadu News Posted On July 11, 2018
0


0
Shares
  • Share On Facebook
  • Tweet It

ಮಂಗಳೂರು: ಕಳೆದ 3 ದಿನಗಳಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿರಂತರವಾಗಿ ಸುರಿದ ಮಳೆ ಈಗ ಸ್ವಲ್ಪ ಬಿಡುವು ಪಡೆದಿದೆ. ಮಳೆಯ ಅಬ್ಬರ ಕರಾವಳಿಯಲ್ಲಿ ತಗ್ಗಿದ್ದು, ಮೂರು ದಿನಗಳಿಂದ ಪ್ರವಾಹ ಪರಿಸ್ಥಿತಿ ಇಳಿಮುಖ ಗೊಂಡಿದೆ. ತಗ್ಗು ಪ್ರದೇಶಕ್ಕೆ ನುಗ್ಗಿದ್ದ ಮಳೆನೀರು ಹರಿದು ಹೋಗಿದೆ. ಈ ಹಿನ್ನೆಲೆಯಲ್ಲಿ ಜನರು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ.

ಆದರೆ ಪಶ್ಚಿಮ ಘಟ್ಟ ಪ್ರದೇಶದಲ್ಲಿ ಎಡೆಬಿಡದೆ ಮಳೆ ಮುಂದುವರಿದ ಪರಿಣಾಮ ಜಿಲ್ಲೆಯ ನೇತ್ರಾವತಿ ಮತ್ತು ಕುಮಾರಧಾರಾ ಸೇರಿದಂತೆ ಇನ್ನಿತರ ನದಿಗಳು ತುಂಬಿ ಉಕ್ಕಿ ಹರಿಯತೊಡಗಿವೆ. ಸುಬ್ರಹ್ಮಣ್ಯ ಬಳಿಯ ಹೊಸಮಠ ಸೇತುವೆ ಮತ್ತೆ ಮುಳುಗಡೆಯಾಗಿದೆ.ಕುಮಾರಧಾರಾ ನದಿಯಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದ್ದು, ಹೊಸಮಠ ಸೇತುವೆ ಮುಳುಗಡೆಯಾದ ಕಾರಣ ಶ್ರೀ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ – ಉಪ್ಪಿನಂಗಡಿ ರಾಜ್ಯ ಹೆದ್ದಾರಿ ಬಂದ್ ಆಗಿದೆ. ಈ ಪರಿಣಾಮ ಶ್ರೀ ಕ್ಷೇತ್ರಕ್ಕೆ ಭೇಟಿ ನೀಡಿದ್ದ ಭಕ್ತರು ಪರದಾಡುವಂತಾಗಿದೆ.

ಇದೇ ವೇಳೆ, ಸಂಗಮ ಕ್ಷೇತ್ರ ಉಪ್ಪಿನಂಗಡಿ ಬಳಿ ನೀರಿನ ಮಟ್ಟ ಏರಿಕೆಯಾಗಿದ್ದು, ಕುಮಾರಧಾರಾ ಮತ್ತು ನೇತ್ರಾವತಿ ನದಿಗಳು ಸಂಗಮಗೊಂಡು ಸಹಸ್ರಲಿಂಗೇಶ್ವರ ದೇವಸ್ಥಾನದ ಅಂಗಣಕ್ಕೆ ನೀರು ನುಗ್ಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.ಕಳೆದ 1 ತಿಂಗಳಲ್ಲಿ ಇದು 4 ನೇ ಬಾರಿ ಹೊಸಮಠ ಸೇತುವೆ ಮುಳುಗಡೆಯಾಗಿದೆ. ಸೇತುವೆ ಮುಳುಗಡೆಯಾದ ಕಾರಣ ಸೇತುವೆಯ ಎರಡು ಬದಿಗಳಲ್ಲಿ ಪೊಲೀಸರು ಬ್ಯಾರಿಕೇಡ್ ಗಳನ್ನು ಅಳವಡಿಸಿ ವಾಹನ ಸಂಚಾರ ಸ್ಥಗಿತಗೊಳಿಸಿದ್ದಾರೆ.ನೀರಿನ ಮಟ್ಟ ಇಳಿಕೆಯಾದ ಬಳಿಕ ಮತ್ತೆ ಸೇತುವೆಯ ಮೇಲೆ ವಾಹನ ಸಂಚಾರ ಆರಂಭವಾಗಲಿದೆ. ಇನ್ನು ಜಡಿ ಮಳೆಯಿಂದಾಗಿ ಹೆಚ್ಚಿನ ಹಾನಿ ಆಗದಿದ್ದರೂ, ಜನರು ಚಳಿಯಿಂದ ಥರಗುಟ್ಟುವಂತಾಗಿದೆ.

0
Shares
  • Share On Facebook
  • Tweet It




Trending Now
ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
Tulunadu News December 27, 2025
ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
Tulunadu News December 23, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!
    • ಭಕ್ತಿಗೀತೆ ಹಾಡುತ್ತಿದ್ದ ಗಾಯಕಿಯ ಮೇಲೆ ದರ್ಪ! ಜಾತ್ಯಾತೀತ ಗೀತೆ ಹಾಡಲು ಒತ್ತಾಯ!
    • ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ನೀಡಿ - ಸರಕಾರಕ್ಕೆ ಶಾಸಕ ಆಗ್ರಹ!
    • ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!
    • ಅಜಾನ್ ಚರ್ಚೆಯ ಸಂದರ್ಭದಲ್ಲಿ ದೀಪಾವಳಿ ಪಟಾಕಿ ವಿಷಯ ಎತ್ತಿದ ಸಚಿವ!
  • Popular Posts

    • 1
      ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!

  • Privacy Policy
  • Contact
© Tulunadu Infomedia.

Press enter/return to begin your search