• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ದಕ್ಷಿಣ ಕನ್ನಡ ಜಿಪಂನಲ್ಲಿ ಧೂಳು ಹಿಡಿಯುತ್ತಿವೆ ಅಂಗವಿಕಲರ ವಾಹನಗಳು!

Tulunadu News Posted On July 11, 2018


  • Share On Facebook
  • Tweet It

ಮಂಗಳೂರು: ರಾಜ್ಯ ಸರ್ಕಾರದಿಂದ ಅಂಗವಿಕಲರಿಗಾಗಿ ಮಂಜೂರಾಗಿರುವ ವಾಹನಗಳು ವಿತರಣೆಯಾಗದೇ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ನಲ್ಲಿ ಧೂಳು ಹಿಡಿಯುತ್ತಿರುವುದು ಬೆಳಕಿಗೆ ಬಂದಿದೆ. ಜಿಲ್ಲೆಯ 91 ಅಂಗವಿಕಲರಿಗಾಗಿ ರಾಜ್ಯ ಸರ್ಕಾರದಿಂದ ವಾಹನಗಳೂ ಬಂದಿದ್ದರೂ ಅಧಿಕಾರಿಗಳ ಬೇಜವಾಬ್ದಾರಿಂದಾಗಿ ವಾಹನಗಳು ವಿತರಣೆಯಾಗದೇ ತುಕ್ಕು ಹಿಡಿಯುತ್ತಿವೆ.

ಜಿಲ್ಲೆಯ 91 ಫಲಾನುಭವಿಗಳಿಗೆ 2017-18 ರ ಸಾಲಿನಲ್ಲಿ 91 ದ್ವಿಚಕ್ರ ವಾಹನಗಳು ಮಂಜೂರಾಗಿ ಕಳೆದ ಮಾರ್ಚ್ ತಿಂಗಳಲ್ಲೇ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಗೆ ಬಂದಿವೆ . ಆದರೆ ಅವುಗಳನ್ನು ಈ ವರೆಗೆ ವಿತರಿಸಲಾಗಿಲ್ಲ.ಜಿಲ್ಲಾ ಪಂಚಾಯತ್ ನ ನೇತ್ರಾವತಿ ಸಭಾಂಗಣದ ಕೆಳ ಅಂತಸ್ಥಿನಲ್ಲಿ ಈ ವಾಹನಗಳು ಧೂಳು ಹಿಡಿಯುತ್ತಿದ್ದು, ಮಳೆಗಾಲದ ಹಿನ್ನೆಲೆಯಲ್ಲಿ ಕೆಲ ವಾಹನಗಳು ತುಕ್ಕು ಹಿಡಿಯುತ್ತಿವೆ.

ಈ ದ್ವಿಚಕ್ರ ವಾಹನಗಳು ಇಲಾಖೆಗೆ ಬಂದ ಕಲವೇ ದಿನಗಳಲ್ಲಿ ವಿಧಾನಸಭೆ ಚುನಾವಣೆ ಘೋಷಣೆಯಾದ ಹಿನ್ನಲೆಯಲ್ಲಿ ಅವುಗಳ ವಿತರಣೆ ಸಾಧ್ಯವಾಗಿಲ್ಲ ಎಂದು ಹೇಳಲಾಗಿದೆ. ವಿಧಾನ ಸಭಾ ಚುನಾವಣೆಯ ಬಳಿಕ ವಿಧಾನ ಪರಿಷತ್ ಚುನಾವಣೆಯ ನೀತಿ ಸಂಹಿತೆ ವಾಹನ ವಿತರಣೆಗೆ ಅಡ್ಡಿಯಾಗಿತ್ತು.ಆದರೆ ಎಲ್ಲಾ ಚುನಾವಣಾ ಪ್ರಕ್ರಿಯೆ ಮುಗಿದಿದೆ.ನೂತನ ಮೈತ್ರಿ ಸರ್ಕಾರ ರಚನೆಯಾಗಿದೆ ಆದರೂ ಫಲಾನುಭವಿಗಳಿಗೆ ಈ ದ್ವಿಚಕ್ರ ವಾಹನಗಳು ವಿತರಣೆಯಾಗಿಲ್ಲ. ಈ ವಾಹನಗಳನ್ನು ಜಿಲ್ಲಾ ಉಸ್ತುವಾರಿ ಸಚಿವರೇ ಫಲಾನುಭವಿಗಳಿಗೆ ವಿತರಿಸಬೇಕೆಂಬ ಅಧಿಕಾರಿಗಳ ಧೋರಣೆಯಿಂದಾಗಿ ಈ ವಾಹನಗಳು ಉಪಯೋಗಕ್ಕಿಲ್ಲದೇ ಧೂಳು ಹಿಡಿಯುತ್ತಿವೆ.

ಆದರೆ ಈ ವಾಹನಗಳತ್ತ ಅಧಿಕಾರಿಗಳೂ ತಲೆ ಕೆಡಿಸಿಕೊಂಡಿಲ್ಲ. ಜಿಲ್ಲಾಉಸ್ತುವಾರಿ ಸಚಿವರಿಗೆ ಈ ವಿಚಾರವೇ ಗೊತ್ತಿಲ್ಲ. ಅದರೆ ಅಂಗವಿಕಲ ಫಲಾನುಭವಿಗಳು ಮಾತ್ರ ವಾಹನಗಳಿಗಾಗಿ ಜಾತಕ ಪಕ್ಷಿಗಳಂತೆ ಕಾದು ಕುಳಿತಿದ್ದಾರೆ. ಇನ್ನಾದರೂ ಸರ್ಕಾರ ಈ ವಾಹನಗಳ ವಿತರಣೆಗೆ ಗಮನ ಹರಿಸುವುದೋ ಕಾದು ನೋಡಬೇಕಿದೆ.

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search