• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ದಕ್ಷಿಣ ಕನ್ನಡ ಜಿಪಂನಲ್ಲಿ ಧೂಳು ಹಿಡಿಯುತ್ತಿವೆ ಅಂಗವಿಕಲರ ವಾಹನಗಳು!

Tulunadu News Posted On July 11, 2018


  • Share On Facebook
  • Tweet It

ಮಂಗಳೂರು: ರಾಜ್ಯ ಸರ್ಕಾರದಿಂದ ಅಂಗವಿಕಲರಿಗಾಗಿ ಮಂಜೂರಾಗಿರುವ ವಾಹನಗಳು ವಿತರಣೆಯಾಗದೇ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ನಲ್ಲಿ ಧೂಳು ಹಿಡಿಯುತ್ತಿರುವುದು ಬೆಳಕಿಗೆ ಬಂದಿದೆ. ಜಿಲ್ಲೆಯ 91 ಅಂಗವಿಕಲರಿಗಾಗಿ ರಾಜ್ಯ ಸರ್ಕಾರದಿಂದ ವಾಹನಗಳೂ ಬಂದಿದ್ದರೂ ಅಧಿಕಾರಿಗಳ ಬೇಜವಾಬ್ದಾರಿಂದಾಗಿ ವಾಹನಗಳು ವಿತರಣೆಯಾಗದೇ ತುಕ್ಕು ಹಿಡಿಯುತ್ತಿವೆ.

ಜಿಲ್ಲೆಯ 91 ಫಲಾನುಭವಿಗಳಿಗೆ 2017-18 ರ ಸಾಲಿನಲ್ಲಿ 91 ದ್ವಿಚಕ್ರ ವಾಹನಗಳು ಮಂಜೂರಾಗಿ ಕಳೆದ ಮಾರ್ಚ್ ತಿಂಗಳಲ್ಲೇ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಗೆ ಬಂದಿವೆ . ಆದರೆ ಅವುಗಳನ್ನು ಈ ವರೆಗೆ ವಿತರಿಸಲಾಗಿಲ್ಲ.ಜಿಲ್ಲಾ ಪಂಚಾಯತ್ ನ ನೇತ್ರಾವತಿ ಸಭಾಂಗಣದ ಕೆಳ ಅಂತಸ್ಥಿನಲ್ಲಿ ಈ ವಾಹನಗಳು ಧೂಳು ಹಿಡಿಯುತ್ತಿದ್ದು, ಮಳೆಗಾಲದ ಹಿನ್ನೆಲೆಯಲ್ಲಿ ಕೆಲ ವಾಹನಗಳು ತುಕ್ಕು ಹಿಡಿಯುತ್ತಿವೆ.

ಈ ದ್ವಿಚಕ್ರ ವಾಹನಗಳು ಇಲಾಖೆಗೆ ಬಂದ ಕಲವೇ ದಿನಗಳಲ್ಲಿ ವಿಧಾನಸಭೆ ಚುನಾವಣೆ ಘೋಷಣೆಯಾದ ಹಿನ್ನಲೆಯಲ್ಲಿ ಅವುಗಳ ವಿತರಣೆ ಸಾಧ್ಯವಾಗಿಲ್ಲ ಎಂದು ಹೇಳಲಾಗಿದೆ. ವಿಧಾನ ಸಭಾ ಚುನಾವಣೆಯ ಬಳಿಕ ವಿಧಾನ ಪರಿಷತ್ ಚುನಾವಣೆಯ ನೀತಿ ಸಂಹಿತೆ ವಾಹನ ವಿತರಣೆಗೆ ಅಡ್ಡಿಯಾಗಿತ್ತು.ಆದರೆ ಎಲ್ಲಾ ಚುನಾವಣಾ ಪ್ರಕ್ರಿಯೆ ಮುಗಿದಿದೆ.ನೂತನ ಮೈತ್ರಿ ಸರ್ಕಾರ ರಚನೆಯಾಗಿದೆ ಆದರೂ ಫಲಾನುಭವಿಗಳಿಗೆ ಈ ದ್ವಿಚಕ್ರ ವಾಹನಗಳು ವಿತರಣೆಯಾಗಿಲ್ಲ. ಈ ವಾಹನಗಳನ್ನು ಜಿಲ್ಲಾ ಉಸ್ತುವಾರಿ ಸಚಿವರೇ ಫಲಾನುಭವಿಗಳಿಗೆ ವಿತರಿಸಬೇಕೆಂಬ ಅಧಿಕಾರಿಗಳ ಧೋರಣೆಯಿಂದಾಗಿ ಈ ವಾಹನಗಳು ಉಪಯೋಗಕ್ಕಿಲ್ಲದೇ ಧೂಳು ಹಿಡಿಯುತ್ತಿವೆ.

ಆದರೆ ಈ ವಾಹನಗಳತ್ತ ಅಧಿಕಾರಿಗಳೂ ತಲೆ ಕೆಡಿಸಿಕೊಂಡಿಲ್ಲ. ಜಿಲ್ಲಾಉಸ್ತುವಾರಿ ಸಚಿವರಿಗೆ ಈ ವಿಚಾರವೇ ಗೊತ್ತಿಲ್ಲ. ಅದರೆ ಅಂಗವಿಕಲ ಫಲಾನುಭವಿಗಳು ಮಾತ್ರ ವಾಹನಗಳಿಗಾಗಿ ಜಾತಕ ಪಕ್ಷಿಗಳಂತೆ ಕಾದು ಕುಳಿತಿದ್ದಾರೆ. ಇನ್ನಾದರೂ ಸರ್ಕಾರ ಈ ವಾಹನಗಳ ವಿತರಣೆಗೆ ಗಮನ ಹರಿಸುವುದೋ ಕಾದು ನೋಡಬೇಕಿದೆ.

  • Share On Facebook
  • Tweet It


- Advertisement -


Trending Now
ಯಾರು ಯಾವ ಕ್ಷೇತ್ರದಲ್ಲಿ ಎಂದು ಯಾರಿಗೂ ಗೊತ್ತಿಲ್ಲ!!
Tulunadu News March 21, 2023
ಗುಳಿಗನಿಗೆ ತಮಾಷೆ ಮಾಡಿ ಬದುಕುವುದುಂಟೆ!!
Tulunadu News March 20, 2023
Leave A Reply

  • Recent Posts

    • ಯಾರು ಯಾವ ಕ್ಷೇತ್ರದಲ್ಲಿ ಎಂದು ಯಾರಿಗೂ ಗೊತ್ತಿಲ್ಲ!!
    • ಗುಳಿಗನಿಗೆ ತಮಾಷೆ ಮಾಡಿ ಬದುಕುವುದುಂಟೆ!!
    • ನಾವು ಅಂಡರ್ ಸ್ಟ್ಯಾಂಡಿಂಗ್ ಮಾಡಿಕೊಂಡಿದ್ದೇವು ಎಂದು ಒಪ್ಪಿದ ಎಸ್ ಡಿಪಿಐ!!
    • ಲೋಕಾಯುಕ್ತ ಬಲಗೊಂಡಿದೆ ಎನ್ನುವ ಸ್ಯಾಂಪಲ್!
    • ಚುನಾವಣಾ ಪೂರ್ವದ ಕೊನೆಯ ನಾಟಕಕ್ಕೆ ಕಾಂಗ್ರೆಸ್ ರೆಡಿ!!
    • ಲೋಕಾಯುಕ್ತದಲ್ಲಿ ಸಿದ್ದು ಕೇಸ್ ಯಾಕೆ ಮುಚ್ಚಿಹೋದವು!!
    • ಹಿಂದೂ ರಾಷ್ಟ್ರ ಸಮ್ಮೇಳನ ಮಾಡುವುದು ಗ್ಯಾರಂಟಿ ರಿಯಾಜ್!!
    • ಯಾವ ಮುಸ್ಲಿಂ ರಾಜ ಜಾಗ ಕೊಟ್ಟಿದ್ದು ಮಿಥುನ್ ರೈ!!
    • ಮೇಯರ್ ಇನ್ನೆಷ್ಟು ದಿನ ತುಂಬೆಯಲ್ಲಿ ನೀರಿದೆ?
    • ಜೆಎನ್ ಯು ದಂಡದ ಮೂಲಕವಾದರೂ ಸ್ವಚ್ಛವಾಗಲಿ!!
  • Popular Posts

    • 1
      ಯಾರು ಯಾವ ಕ್ಷೇತ್ರದಲ್ಲಿ ಎಂದು ಯಾರಿಗೂ ಗೊತ್ತಿಲ್ಲ!!
    • 2
      ಗುಳಿಗನಿಗೆ ತಮಾಷೆ ಮಾಡಿ ಬದುಕುವುದುಂಟೆ!!
    • 3
      ನಾವು ಅಂಡರ್ ಸ್ಟ್ಯಾಂಡಿಂಗ್ ಮಾಡಿಕೊಂಡಿದ್ದೇವು ಎಂದು ಒಪ್ಪಿದ ಎಸ್ ಡಿಪಿಐ!!
    • 4
      ಲೋಕಾಯುಕ್ತ ಬಲಗೊಂಡಿದೆ ಎನ್ನುವ ಸ್ಯಾಂಪಲ್!
    • 5
      ಚುನಾವಣಾ ಪೂರ್ವದ ಕೊನೆಯ ನಾಟಕಕ್ಕೆ ಕಾಂಗ್ರೆಸ್ ರೆಡಿ!!


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search