• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಸುದ್ದಿ 

ಹೊಸಾಡು ಗ್ರಾಮದಲ್ಲಿ ಸಿಗಡಿ ಕೃಷಿ ಕೆರೆಗೆ ವಿಷ: 25 ಲಕ್ಷ ರೂ.ನಷ್ಟ

Tulunadu News Posted On July 12, 2018
0


0
Shares
  • Share On Facebook
  • Tweet It

ಉಡುಪಿ: ಮಾರಾಟ ಮಾಡಲು ಸಿದ್ಧವಾಗಿದ್ದ ಸುಮಾರು 25 ಲಕ್ಷ ರೂ. ಮೌಲ್ಯದ ಸಿಗಡಿಗಳಿದ್ದ 2 ಕೆರೆಗಳಿಗೆ ಕಿಡಿಗೇಡಿಗಳು ವಿಷವಿಕ್ಕಿದ ಘಟನೆ ಬೈಂದೂರು ತಾಲೂಕಿನ ಹೊಸಾಡು ಗ್ರಾಮದಲ್ಲಿ ಸೋಮವಾರ ಬೆಳ್ಳಂಬೆಳಗ್ಗೆ ನಡೆದಿದೆ.

ಬಂಟ್ವಾಡಿ ನಿವಾಸಿ ನರಸಿಂಹ ಮೊಗ ವೀರ ಅವರು ಹೊಸಾಡು ಗ್ರಾಮದ ಅರಾಟೆಯ ತಮ್ಮ 1.60 ಎಕರೆ ವಿಸ್ತೀ ರ್ಣದ ಜಾಗದಲ್ಲಿ ಮಾಡಿದ ಎರಡು ಸಿಗಡಿ ಕೆರೆಗೆ ದುಷ್ಕರ್ಮಿಗಳು ಬೆಳ್ಳಂಬೆಳಗ್ಗೆ ವಿಷ ಹಾಕಿದ್ದಾರೆ. ನರಸಿಂಹ ಮೊಗವೀರ ಕಳೆದ 90 ದಿನಗಳಿಂದ ಇಲ್ಲಿ ಸಿಗಡಿ ಕೃಷಿ ಮಾಡುತ್ತಿದ್ದರು. 1.60 ಎಕರೆ ವಿಸ್ತೀರ್ಣದ 2 ಕೆರೆಗಳ ಪೈಕಿ ಒಂದು ಇವರ ಸ್ವಂತದ್ದಾಗಿದ್ದು, ಇನ್ನೊಂದನ್ನು ದೇವಸ್ಥಾನದಿಂದ ಲೀಸ್ ಗೆ ಪಡೆದು ಸಿಗಡಿ ಕೃಷಿ ಮಾಡುತ್ತಿದ್ದರು. ಒಟ್ಟು 9,000 ಸಾವಿರ ಕೆಜಿ ಸಿಗಡಿ ಸಿಗಲಿತ್ತು. ದುಷ್ಕರ್ಮಿಗಳಿಂದಾಗಿ 9 ಟನ್‌ ಸಿಗಡಿ ಕೃಷಿಯೇ ನಾಶವಾಗಿದೆ.

ನರಸಿಂಹ ಅವರು ಆ ಕೆರೆಯ ಪಕ್ಕದಲ್ಲೇ ಶೆಡ್ ನಿರ್ಮಿಸಿ ಕಳೆದ 15 ದಿನಗಳಿಂದ ಪ್ರತಿ ರಾತ್ರಿ ಕಾವಲು ಕಾಯುತ್ತಿದ್ದರು. ಭಾನುವಾರ ಮಧ್ಯರಾತ್ರಿ 12.30ರ ವೇಳೆ ಎಚ್ಚರವಾಗಿದ್ದು, ಆಗ ಎಲ್ಲ ಕಡೆಗೆ ಲೈಟ್ ಹಾಕಿ ನೋಡಿದ್ದಾರೆ. ಮುಂಜಾನೆ 4.30ರ ಸುಮಾರಿಗೆ ಮತ್ತೆ ಎಚ್ಚರವಾಗಿದ್ದು, ಲೈಟ್ ಹಾಕಿ ನೋಡಿದಾಗ ಒಂದು ಕೆರೆಯಲ್ಲಿ ಕೆಮಿಕಲ್ ಇರುವ ಬಕೆಟ್‌ ಸಿಕ್ಕಿತ್ತು.

ತತ್‌ಕ್ಷಣ ಶೆಡ್ ನ‌ಲ್ಲಿ ನನ್ನೊಂದಿಗೆ ಕೆಲಸಕ್ಕಿದ್ದ ಇಬ್ಬರು ಕೆಲಸದವರನ್ನು ಕರೆದು ಎಲ್ಲ ಕಡೆ ಲೈಟ್ ಹಾಕಿ ನೋಡಿದಾಗ ಸಿಗಡಿಗಳು ಸತ್ತು ಬಿದ್ದಿದ್ದವು ಎಂದು ನರಸಿಂಹ ಮೊಗವೀರ ಅವರು ತಿಳಿಸಿದ್ದಾರೆ. ಗಂಗೊಳ್ಳಿ ಪೊಲೀಸ್‌ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ.

0
Shares
  • Share On Facebook
  • Tweet It




Trending Now
ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
Tulunadu News May 21, 2026
ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
Tulunadu News May 12, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
  • Popular Posts

    • 1
      ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್

  • Privacy Policy
  • Contact
© Tulunadu Infomedia.

Press enter/return to begin your search