• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured

ಉಡುಪಿ: ಮಹಿಳೆಯನ್ನು ಪೀಡಿಸುತ್ತಿದ್ದ ಕನ್ನಡ ಸಂಘಟನೆ ನಾಯಕನ ಬಂಧನ

Tulunadu News Posted On July 17, 2018
0


0
Shares
  • Share On Facebook
  • Tweet It

ಉಡುಪಿ: ಮಹಿಳೆಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ವ್ಯಕ್ತಿ ಉಡುಪಿಯ ಶಿರ್ವ ಗ್ರಾಮದಲ್ಲಿ ಸಿಕ್ಕಿ ಬಿದ್ದ ಘಟನೆ ಶನಿವಾರ ನಡೆದಿದೆ. ಕರ್ನಾಟಕ ರಕ್ಷಣಾ ವೇದಿಕೆಯ ಜಿಲ್ಲಾ ಗೌರವಾಧ್ಯಕ್ಷ ಎಂದು ಹೇಳಿಕೊಳ್ಳುತ್ತಿರುವ ಸಂತೋಷ್ ಶೆಟ್ಟಿ ಪಂಜಿಮಾರ್ ಮಹಿಳೆಗೆ ಕಿರುಕುಳ ನೀಡಿ, ಬಂಧನಕ್ಕೆ ಒಳಗಾದ ಆರೋಪಿ.

ಸಂತೋಷ್ ಶೆಟ್ಟಿ ಪಂಜಿಮಾರ್ ಈ ಹಿಂದೆ ಕರ್ನಾಟಕ ರಕ್ಷಣಾ ವೇದಿಕೆಯ ಜಿಲ್ಲಾ ಗೌರವಾಧ್ಯಕ್ಷನಾಗಿದ್ದು, ಹಲವಾರು ಕೆಟ್ಟ ಕೆಲಸ ಮಾಡಿ ತನ್ನ ಸ್ಥಾನ ಕಳೆದುಕೊಂಡಿದ್ದ. ಆದರೆ ಅದೇ ಸ್ಥಾನದ ಹೆಸರು ಹೇಳಿ ಹಲವರನ್ನು ಈಗಲೂ ಮಂಗ ಮಾಡಿದ್ದಾನೆ. ಇತ್ತೀಚೆಗೆ ಶಿರ್ವ ಗ್ರಾಮದ ವಿವಾಹಿತ ಮಹಿಳೆಯೊಬ್ಬರನ್ನು ಪೀಡಿಸುತ್ತಿದ್ದು, ಹಲವು ಬಾರಿ ಎಚ್ಚರಿಕೆ ನೀಡಿದರೂ ಸಂತೋಷ್ ಯುವತಿಗೆ ಕಿರುಕುಳು ನೀಡುವುದನ್ನು ಬಿಟ್ಟಿರಲಿಲ್ಲ. ಸಂತೋಷ್ ಗೆ ತಕ್ಕ ಪಾಠ ಕಲಿಸಲು ಮುಂದಾದ ಮಹಿಳೆ, ಪ್ಲಾನ್ ಮಾಡಿ ತನ್ನ ಪತಿಯ ಸಹಾಯದೊಂದಿಗೆ ಆರೋಪಿಯನ್ನು ಸೆರೆಹಿಡಿದಿದ್ದಾರೆ. ರೂಮ್ ಬುಕ್ ಮಾಡಿ ಮಹಿಳೆಯನ್ನು ಕರೆಯಲು ಬಂದ ಸಂತೋಷ್ ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದಿದ್ದಾನೆ. ಸಂತೋಷ್ ಗೆ ಮಹಿಳೆ ಗೂಸಾ ನೀಡಿದ್ದಾಳೆ. ಸಂತೋಷ್ ವಿಷಯ ಮಾಧ್ಯಮಗಳಲ್ಲಿ ಪ್ರಚಾರವಾಗುತ್ತಿದ್ದಂತೆ , ಆತ ಸಂಘಟನೆಯಲ್ಲಿ ಇಲ್ಲ ಹಾಗೂ ಆತನನ್ನು ವಜಾಗೊಳಿಸಲಾಗಿದೆ ಎಂದು ಸಂಘಟನೆಯಿಂದ ಮಾಹಿತಿ ಬಂದಿದೆ. ಈ ಹಿಂದೆ ಹಲವು ಮಹಿಳೆಯರು, ಯುವತಿಯರಿಗೆ ಕರೆ ಮಾಡಿ ಮಂಚಕ್ಕೆ ಕರೆಯುತ್ತಿದ್ದ ಸಂತೋಷ್ ಶೆಟ್ಟಿಯ ನೈಜ ಮುಖವಾಡ ಈಗ ಬಯಲಾಗಿದೆ. ಸ್ಥಳಕ್ಕೆ ಶಿರ್ವ ಪೊಲೀಸರು ಆಗಮಿಸಿ ಆರೋಪಿಯನ್ನು ಬಂಧಿಸಿದ್ದಾರೆ. ಈ ಬಗ್ಗೆ ಶಿರ್ವ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

0
Shares
  • Share On Facebook
  • Tweet It




Trending Now
ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
Tulunadu News May 21, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ

  • Privacy Policy
  • Contact
© Tulunadu Infomedia.

Press enter/return to begin your search