• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured

ಉಡುಪಿ: ಮಹಿಳೆಯನ್ನು ಪೀಡಿಸುತ್ತಿದ್ದ ಕನ್ನಡ ಸಂಘಟನೆ ನಾಯಕನ ಬಂಧನ

Tulunadu News Posted On July 17, 2018
0


0
Shares
  • Share On Facebook
  • Tweet It

ಉಡುಪಿ: ಮಹಿಳೆಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ವ್ಯಕ್ತಿ ಉಡುಪಿಯ ಶಿರ್ವ ಗ್ರಾಮದಲ್ಲಿ ಸಿಕ್ಕಿ ಬಿದ್ದ ಘಟನೆ ಶನಿವಾರ ನಡೆದಿದೆ. ಕರ್ನಾಟಕ ರಕ್ಷಣಾ ವೇದಿಕೆಯ ಜಿಲ್ಲಾ ಗೌರವಾಧ್ಯಕ್ಷ ಎಂದು ಹೇಳಿಕೊಳ್ಳುತ್ತಿರುವ ಸಂತೋಷ್ ಶೆಟ್ಟಿ ಪಂಜಿಮಾರ್ ಮಹಿಳೆಗೆ ಕಿರುಕುಳ ನೀಡಿ, ಬಂಧನಕ್ಕೆ ಒಳಗಾದ ಆರೋಪಿ.

ಸಂತೋಷ್ ಶೆಟ್ಟಿ ಪಂಜಿಮಾರ್ ಈ ಹಿಂದೆ ಕರ್ನಾಟಕ ರಕ್ಷಣಾ ವೇದಿಕೆಯ ಜಿಲ್ಲಾ ಗೌರವಾಧ್ಯಕ್ಷನಾಗಿದ್ದು, ಹಲವಾರು ಕೆಟ್ಟ ಕೆಲಸ ಮಾಡಿ ತನ್ನ ಸ್ಥಾನ ಕಳೆದುಕೊಂಡಿದ್ದ. ಆದರೆ ಅದೇ ಸ್ಥಾನದ ಹೆಸರು ಹೇಳಿ ಹಲವರನ್ನು ಈಗಲೂ ಮಂಗ ಮಾಡಿದ್ದಾನೆ. ಇತ್ತೀಚೆಗೆ ಶಿರ್ವ ಗ್ರಾಮದ ವಿವಾಹಿತ ಮಹಿಳೆಯೊಬ್ಬರನ್ನು ಪೀಡಿಸುತ್ತಿದ್ದು, ಹಲವು ಬಾರಿ ಎಚ್ಚರಿಕೆ ನೀಡಿದರೂ ಸಂತೋಷ್ ಯುವತಿಗೆ ಕಿರುಕುಳು ನೀಡುವುದನ್ನು ಬಿಟ್ಟಿರಲಿಲ್ಲ. ಸಂತೋಷ್ ಗೆ ತಕ್ಕ ಪಾಠ ಕಲಿಸಲು ಮುಂದಾದ ಮಹಿಳೆ, ಪ್ಲಾನ್ ಮಾಡಿ ತನ್ನ ಪತಿಯ ಸಹಾಯದೊಂದಿಗೆ ಆರೋಪಿಯನ್ನು ಸೆರೆಹಿಡಿದಿದ್ದಾರೆ. ರೂಮ್ ಬುಕ್ ಮಾಡಿ ಮಹಿಳೆಯನ್ನು ಕರೆಯಲು ಬಂದ ಸಂತೋಷ್ ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದಿದ್ದಾನೆ. ಸಂತೋಷ್ ಗೆ ಮಹಿಳೆ ಗೂಸಾ ನೀಡಿದ್ದಾಳೆ. ಸಂತೋಷ್ ವಿಷಯ ಮಾಧ್ಯಮಗಳಲ್ಲಿ ಪ್ರಚಾರವಾಗುತ್ತಿದ್ದಂತೆ , ಆತ ಸಂಘಟನೆಯಲ್ಲಿ ಇಲ್ಲ ಹಾಗೂ ಆತನನ್ನು ವಜಾಗೊಳಿಸಲಾಗಿದೆ ಎಂದು ಸಂಘಟನೆಯಿಂದ ಮಾಹಿತಿ ಬಂದಿದೆ. ಈ ಹಿಂದೆ ಹಲವು ಮಹಿಳೆಯರು, ಯುವತಿಯರಿಗೆ ಕರೆ ಮಾಡಿ ಮಂಚಕ್ಕೆ ಕರೆಯುತ್ತಿದ್ದ ಸಂತೋಷ್ ಶೆಟ್ಟಿಯ ನೈಜ ಮುಖವಾಡ ಈಗ ಬಯಲಾಗಿದೆ. ಸ್ಥಳಕ್ಕೆ ಶಿರ್ವ ಪೊಲೀಸರು ಆಗಮಿಸಿ ಆರೋಪಿಯನ್ನು ಬಂಧಿಸಿದ್ದಾರೆ. ಈ ಬಗ್ಗೆ ಶಿರ್ವ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

0
Shares
  • Share On Facebook
  • Tweet It




Trending Now
ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
Tulunadu News March 11, 2026
ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
Tulunadu News March 11, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
  • Popular Posts

    • 1
      ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • 2
      ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • 3
      ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!

  • Privacy Policy
  • Contact
© Tulunadu Infomedia.

Press enter/return to begin your search