• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಅಭಿಪ್ರಾಯ ಸುದ್ದಿ 

ಶಿರಾಡಿ ಘಾಟ್ ಸಂಚಾರಕ್ಕೆ ಮುಕ್ತ, ಮೈಮರೆತರೆ ಪ್ರಪಾತಕ್ಕೆ ಖಚಿತ

Tulunadu News Posted On July 17, 2018
0


0
Shares
  • Share On Facebook
  • Tweet It

ಮಂಗಳೂರು: ಮಂಗಳೂರು – ಬೆಂಗಳೂರು ಮಧ್ಯೆ ಸಂಚರಿಸುವ ವಾಹನ ಸವಾರರಿಗೊಂದು ಸಂತಸದ ಸುದ್ದಿ. ಆರು ತಿಂಗಳಿನಿಂದ ವಾಹನ ಸಂಚಾರ ಸಂಪೂರ್ಣ ನಿಷೇಧಗೊಂಡಿದ್ದ ಶಿರಾಢಿಘಾಟ್ ರಸ್ತೆ ಭಾನುವಾರದಿಂದ ಸಂಚಾರಕ್ಕೆ ಮುಕ್ತಗೊಳ್ಳಲಿದೆ.

ಶಿರಾಡಿ ಘಾಟ್ ರಸ್ತೆಯ ಎರಡನೇ ಹಂತದ ಕಾಂಕ್ರೀಟ್ ಕಾಮಗಾರಿ ಅಂತಿಮ ಹಂತಕ್ಕೆ ತಲುಪಿದ ಹಿನ್ನೆಲೆಯಲ್ಲಿ ಭಾನುವಾರದಿಂದ ಈ ರಸ್ತೆಯಲ್ಲಿ ವಾಹನಗಳ ಸಂಚಾರಕ್ಕೆ ಅನುವು ಮಾಡಿಕೊಡಲಾಗುತ್ತಿದೆ. ಆದರೆ ಈ ರಸ್ತೆಯಲ್ಲಿ ವಾಹನ ಸವಾರರು ಮೈ ಮರೆತೆರೆ ಪ್ರಪಾತಕ್ಕೆ ಉರುಳಿ ಬೀಳುವ ಅತಂಕ ಕೂಡ ಸೃಷ್ಟಿಯಾಗಿದೆ. ಸುರಕ್ಷತೆ ಕಾಮಗಾರಿ ಮುಗಿಸದೆ ತರಾತುರಿಯಲ್ಲಿ ವಾಹನ ಸಂಚಾರಕ್ಕೆ ಅನುವು ಮಾಡಿದ ಈ ರಸ್ತೆಯಲ್ಲಿ ವಾಹನಗಳ ಸಂಚಾರ ಎಷ್ಟು ಸುರಕ್ಷಿತ ಎನ್ನುವ ಗೊಂದಲ ಈಗ ಕಾಡತೊಡಗಿದೆ. ಪ್ರತಿ ಮಳೆಗಾಲದ ಸಂದರ್ಭದಲ್ಲೂ ಪ್ರಯಾಣಿಕರಿಗೆ ಭಾರೀ ಸಮಸ್ಯೆ ಕೊಡುತ್ತಿದ್ದ ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿಘಾಟ್ ರಸ್ತೆಗೆ ಕಾಂಕ್ರೀಟ್ ಕಾಮಗಾರಿ ಮಾಡುವ ಕೊನೆಯ ಹಂತಕ್ಕೆ ತಲುಪಿದೆ. ಶಿರಾಡಿಘಾಟ್ ನ 26 ಕಿಲೋಮೀಟರ್ ರಸ್ತೆಗೆ ಕಾಂಕ್ರೀಟ್ ಕಾಮಗಾರಿಗಾಗಿ ಕೇಂದ್ರ ಸರಕಾರ ಸುಮಾರು 183 ಕೋಟಿ ರೂಪಾಯಿ ವೆಚ್ಚದಲ್ಲಿ ಈ ಯೋಜನೆಯನ್ನು ಹಮ್ಮಿಕೊಂಡಿತ್ತು. ಮೊದಲ ಹಂತದಲ್ಲಿ ಕೆಂಪುಹೊಳೆಯಿಂದ ಮಾರನಹಳ್ಳಿವರೆಗಿನ 13 ಕಿಲೋಮೀಟರ್ ಉದ್ದದ ರಸ್ತೆ ಕಾಮಗಾರಿಯನ್ನು ಈಗಾಗಲೇ ಮುಗಿಸಲಾಗಿದ್ದು, ಅಡ್ಡಹೊಳೆಯಿಂದ ಕೆಂಪುಹೊಳೆವರೆಗಿನ 13 ಕಿಲೋಮೀಟರ್ ರಸ್ತೆ ಕಾಮಗಾರಿ ಇದೀಗ ಮುಗಿಯುವ ಹಂತದಲ್ಲಿದೆ.  ಕಾಮಗಾರಿ ಆರಂಭಗೊಂಡು 6 ತಿಂಗಳು ಕಳೆದಿದ್ದು, ಈ ರಸ್ತೆಯುದ್ದಕ್ಕೂ ವಾಹನ ಸಂಚಾರಕ್ಕೆ ಸಂಪೂರ್ಣ ನಿಷೇಧ ಹೇರಲಾಗಿತ್ತು. ಇದೀಗ ಕಾಮಗಾರಿ ಪೂರ್ಣಗೊಳ್ಳುವ ಹಂತದಲ್ಲಿರುವ ಹಿನ್ನೆಲೆಯಲ್ಲಿ ಜುಲೈ 15ರಿಂದಲೇ ವಾಹನ ಸಂಚಾರಕ್ಕೆ ಮುಕ್ತಗೊಳಲಿದೆ.

ಈ ಶಿರಾಡಿಘಾಟ್ ರಸ್ತೆಯು ಅಪಾಯಕಾರಿ ರಸ್ತೆಗಳಲ್ಲಿ ಒಂದು ಎಂದೇ ಪರಿಗಣಿಸಲಾಗುತ್ತದೆ. ಇಲ್ಲಿ ಸುರಕ್ಷತೆಗೆ ಹೆಚ್ಚಿನ ಒತ್ತನ್ನೂ ನೀಡಲಾಗಿದೆ. ರಸ್ತೆಯ ಎರಡೂ ಕಡೆ ಸಂಪೂರ್ಣ ಇಳಿಜಾರು ಪ್ರದೇಶವಾದ ಕಾರಣ ರಸ್ತೆಯ ಎರಡೂ ಭಾಗಕ್ಕೂ ತಡೆಗೋಡೆಗಳನ್ನು ನಿರ್ಮಿಸಲು ನಿರ್ಧರಿಸಲಾಗಿದೆ. ಆದರೆ, ಈ ಹಂತದಲ್ಲಿ ರಸ್ತೆಯ ಹಲವಾರು ತಿರುವುಗಳಲ್ಲಿ ತಡೆಗೋಡೆಗಳು ಇನ್ನಷ್ಟೇ ನಿರ್ಮಾಣ ಆಗಬೇಕಿದೆ. ಇನ್ನು ಕೆಲವು ಕಡೆಗಳಲ್ಲಿ ಕಟ್ಟಿದ ತಡೆಗೋಡೆ ಕುಸಿದು ಬಿದ್ದಿದೆ. ಅಲ್ಲದೆ ಮೂರು ಪದರದಲ್ಲಿ ಕಾಂಕ್ರೀಟ್ ಹಾಕಿರುವ ಕಾರಣ ರಸ್ತೆಯು ನೆಲದ ಮಟ್ಟದಿಂದ 1 ಅಡಿಯಷ್ಟು ಎತ್ತರದಲ್ಲಿದೆ. ಅದನ್ನು ಸಮತಟ್ಟಾಗಿಸಲು ಇಕ್ಕೆಲಗಳಲ್ಲೂ ಮಣ್ಣನ್ನು ತುಂಬುವ ಕಾಮಗಾರಿ ಇನ್ನೂ ಪೂರ್ಣಗೊಂಡಿಲ್ಲ. ಇದರಿಂದಾಗಿ ಕೆಲವು ಕಡೆ ವಾಹನ ಚಾಲಕರು ಕೊಂಚ ಆಯ ತಪ್ಪಿದರೂ ಪಾತಾಳಕ್ಕೆ ಉರುಳಿ ಬೀಳುವ ಅಪಾಯವಿದೆ.

0
Shares
  • Share On Facebook
  • Tweet It




Trending Now
ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
Tulunadu News February 4, 2026
ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
Tulunadu News January 30, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
  • Popular Posts

    • 1
      ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • 2
      ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!

  • Privacy Policy
  • Contact
© Tulunadu Infomedia.

Press enter/return to begin your search