• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಸುದ್ದಿ 

ಕಡಲ್ಕೊರೆತ : ಡೇಂಜರ್ ಝೋನ್ ನಲ್ಲಿ ಸೋಮೇಶ್ವರದ ಕಿನಾರೆ

Tulunadu News Posted On July 17, 2018
0


0
Shares
  • Share On Facebook
  • Tweet It

ಮಂಗಳೂರು  : ಕರ್ನಾಟಕದ ಕರಾವಳಿಯಲ್ಲಿ ಮುಂಗಾರು ತೀವ್ರವಾಗುತ್ತಿದ್ದಂತೆ ಸಮುದ್ರ ಕಿನಾರೆಯಲ್ಲಿ ಕಡಲ ಕೊರೆತದ ಭೀತಿ ಆವರಿಸತೊಡಗುತ್ತದೆ. ಮಂಗಳೂರು ಸುತ್ತಮತ್ತ ಕಡಲ ತಡಿಯ ಪ್ರದೇಶಗಳಲ್ಲಿ ತಡೆಗೋಡೆ ನಿರ್ಮಾಣ ಹಾಗು ಬ್ರೇಕ್ ವಾಟರ್ ನಿಂದಾಗಿ ಕಳೆದ 2 ವರ್ಷಗಳಿಂದ ಕಡಲ ಕೊರೆತದ ಭೀತಿ ತಗ್ಗಿತ್ತು. ಆದರೆ ಈ ಬಾರಿ ಮಳೆಯ ಅಬ್ಬರ ಹೆಚ್ಚಿರುವ ಹಿನ್ನೆಲೆಯಲ್ಲಿ ಮಂಗಳೂರು ಹೊರವಲಯದಲ್ಲಿ ಮತ್ತೆ ಕಡಲ ಕೊರೆತ ಆರಂಭವಾಗಿದೆ.

ಮಂಗಳೂರು ಹೊರವಲಯದ ಸೋಮೇಶ್ವರ, ಉಚ್ಚಿಲ ಪ್ರದೇಶದಲ್ಲಿ ಕಡಲಕೊರೆತ ತೀವ್ರಗೊಂಡಿದೆ. ಈ ಹಿನ್ನಲೆಯಲ್ಲಿ ಸೋಮೇಶ್ವರ ಕಡಲ ಕಿನಾರೆಯನ್ನು ಜಿಲ್ಲಾಡಳಿತ ಡೇಂಜರ್ ಝೋನ್ ಎಂದು ಘೋಷಿಸಿದೆ. ಉಳ್ಳಾಲದ ಕೈಕೊ, ಸುಭಾಷ್ ನಗರ ಸೇರಿದಂತೆ ಉಚ್ಚಿಲ ಪ್ರದೇಶದಲ್ಲಿ ಆಳೆತ್ತರದ ಕಲೆಗಳು ಏಳುತ್ತಿದ್ದು ಕಡಲು ರೌದ್ರಾವತಾರ ತಾಳಿದೆ. ಸಮುದ್ರ ತೀರದ ಹಲವಾರು ಮರಗಳನ್ನು ಸಮುದ್ರ ಈಗಾಗಲೆ ಆಪೋಷನ ತೆಗೆದುಕೊಂಡಿದೆ. ಕಲಡ ತೀರದಲ್ಲಿ ವಾಸಿಸುವ ನೂರಾರು ಕುಟುಂಬಗಳು ಆತಂಕದಲ್ಲಿ ಕಾಲ ಕಳೆಯುವ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಪ್ರದೇಶದಲ್ಲಿ ಮರಳು ಕರಗಿ ಸಮುದ್ರ ಪಾಲಾಗುತಿದ್ದು ಭೂ ಪ್ರದೇಶ ಸಮುದ್ರದ ಒಡಲು ಸೇರುತ್ತಿದೆ. ಉಲ್ಲಾಳದಲ್ಲಿ ಸುಮಾರು 10ಕ್ಕೂ ಹೆಚ್ಚು ಮನೆಗಳು ಅಪಾಯದ ಅಂಚಿನಲ್ಲಿವೆ. ಸಂಜೆ ಆಗುತ್ತಿದ್ದಂತೆ ಭಾರೀ ಅಲೆಗಳು ಏಳುವ ಸಾಧ್ಯತೆ ಇದೆ ಎಂದು ದಕ್ಷಿಣ ಕನ್ನಡ ಜಿಲ್ಲಾಡಳಿತ ಎಚ್ಚರಿಕೆ ನೀಡಿದೆ. ಕಳೆದೊಂದು ವಾರದಿಂದ ಸೋಮೇಶ್ವರ – ಉಚ್ಚಿಲದಲ್ಲಿ ಭಾರೀ ಕಡಲ್ಕೊರೆತ ಆರಂಭವಾಗಿದ್ದು ಈ ಕುರಿತು ಜಿಲ್ಲಾಡಳಿತ ಸೇರಿದಂತೆ ಸ್ಥಳಿಯಾಡಳಿತಕ್ಕೆ ಮಾಹಿತಿ ನೀಡಿದ್ದರು ಈ ವರೆಗೆ ಸೂಕ್ತ ಕ್ರಮ ಕೈಗೊಂಡಿಲ್ಲ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

0
Shares
  • Share On Facebook
  • Tweet It




Trending Now
ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
Tulunadu News April 7, 2026
ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
Tulunadu News April 7, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
  • Popular Posts

    • 1
      ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • 2
      ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • 3
      ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ

  • Privacy Policy
  • Contact
© Tulunadu Infomedia.

Press enter/return to begin your search