• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಸುದ್ದಿ 

ಕಡಲ್ಕೊರೆತ : ಡೇಂಜರ್ ಝೋನ್ ನಲ್ಲಿ ಸೋಮೇಶ್ವರದ ಕಿನಾರೆ

Tulunadu News Posted On July 17, 2018
0


0
Shares
  • Share On Facebook
  • Tweet It

ಮಂಗಳೂರು  : ಕರ್ನಾಟಕದ ಕರಾವಳಿಯಲ್ಲಿ ಮುಂಗಾರು ತೀವ್ರವಾಗುತ್ತಿದ್ದಂತೆ ಸಮುದ್ರ ಕಿನಾರೆಯಲ್ಲಿ ಕಡಲ ಕೊರೆತದ ಭೀತಿ ಆವರಿಸತೊಡಗುತ್ತದೆ. ಮಂಗಳೂರು ಸುತ್ತಮತ್ತ ಕಡಲ ತಡಿಯ ಪ್ರದೇಶಗಳಲ್ಲಿ ತಡೆಗೋಡೆ ನಿರ್ಮಾಣ ಹಾಗು ಬ್ರೇಕ್ ವಾಟರ್ ನಿಂದಾಗಿ ಕಳೆದ 2 ವರ್ಷಗಳಿಂದ ಕಡಲ ಕೊರೆತದ ಭೀತಿ ತಗ್ಗಿತ್ತು. ಆದರೆ ಈ ಬಾರಿ ಮಳೆಯ ಅಬ್ಬರ ಹೆಚ್ಚಿರುವ ಹಿನ್ನೆಲೆಯಲ್ಲಿ ಮಂಗಳೂರು ಹೊರವಲಯದಲ್ಲಿ ಮತ್ತೆ ಕಡಲ ಕೊರೆತ ಆರಂಭವಾಗಿದೆ.

ಮಂಗಳೂರು ಹೊರವಲಯದ ಸೋಮೇಶ್ವರ, ಉಚ್ಚಿಲ ಪ್ರದೇಶದಲ್ಲಿ ಕಡಲಕೊರೆತ ತೀವ್ರಗೊಂಡಿದೆ. ಈ ಹಿನ್ನಲೆಯಲ್ಲಿ ಸೋಮೇಶ್ವರ ಕಡಲ ಕಿನಾರೆಯನ್ನು ಜಿಲ್ಲಾಡಳಿತ ಡೇಂಜರ್ ಝೋನ್ ಎಂದು ಘೋಷಿಸಿದೆ. ಉಳ್ಳಾಲದ ಕೈಕೊ, ಸುಭಾಷ್ ನಗರ ಸೇರಿದಂತೆ ಉಚ್ಚಿಲ ಪ್ರದೇಶದಲ್ಲಿ ಆಳೆತ್ತರದ ಕಲೆಗಳು ಏಳುತ್ತಿದ್ದು ಕಡಲು ರೌದ್ರಾವತಾರ ತಾಳಿದೆ. ಸಮುದ್ರ ತೀರದ ಹಲವಾರು ಮರಗಳನ್ನು ಸಮುದ್ರ ಈಗಾಗಲೆ ಆಪೋಷನ ತೆಗೆದುಕೊಂಡಿದೆ. ಕಲಡ ತೀರದಲ್ಲಿ ವಾಸಿಸುವ ನೂರಾರು ಕುಟುಂಬಗಳು ಆತಂಕದಲ್ಲಿ ಕಾಲ ಕಳೆಯುವ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಪ್ರದೇಶದಲ್ಲಿ ಮರಳು ಕರಗಿ ಸಮುದ್ರ ಪಾಲಾಗುತಿದ್ದು ಭೂ ಪ್ರದೇಶ ಸಮುದ್ರದ ಒಡಲು ಸೇರುತ್ತಿದೆ. ಉಲ್ಲಾಳದಲ್ಲಿ ಸುಮಾರು 10ಕ್ಕೂ ಹೆಚ್ಚು ಮನೆಗಳು ಅಪಾಯದ ಅಂಚಿನಲ್ಲಿವೆ. ಸಂಜೆ ಆಗುತ್ತಿದ್ದಂತೆ ಭಾರೀ ಅಲೆಗಳು ಏಳುವ ಸಾಧ್ಯತೆ ಇದೆ ಎಂದು ದಕ್ಷಿಣ ಕನ್ನಡ ಜಿಲ್ಲಾಡಳಿತ ಎಚ್ಚರಿಕೆ ನೀಡಿದೆ. ಕಳೆದೊಂದು ವಾರದಿಂದ ಸೋಮೇಶ್ವರ – ಉಚ್ಚಿಲದಲ್ಲಿ ಭಾರೀ ಕಡಲ್ಕೊರೆತ ಆರಂಭವಾಗಿದ್ದು ಈ ಕುರಿತು ಜಿಲ್ಲಾಡಳಿತ ಸೇರಿದಂತೆ ಸ್ಥಳಿಯಾಡಳಿತಕ್ಕೆ ಮಾಹಿತಿ ನೀಡಿದ್ದರು ಈ ವರೆಗೆ ಸೂಕ್ತ ಕ್ರಮ ಕೈಗೊಂಡಿಲ್ಲ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

0
Shares
  • Share On Facebook
  • Tweet It




Trending Now
ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
Tulunadu News November 1, 2025
ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
Tulunadu News October 31, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
    • ದೀಪಾವಳಿ ಬೋನಸ್ ಕಡಿಮೆ ಕೊಟ್ಟಿದ್ದಕ್ಕೆ ಟೋಲ್ ಸಿಬ್ಬಂದಿಗಳು ಮಾಡಿದ್ದೇನು?
  • Popular Posts

    • 1
      ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • 2
      ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • 3
      ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?

  • Privacy Policy
  • Contact
© Tulunadu Infomedia.

Press enter/return to begin your search