• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕೇರಳದ ಮಾಂಸ ತ್ಯಾಜ್ಯ ಮಾಫಿಯಾ ಪತ್ತೆ ಹಚ್ಚಿದ ಇರ್ದೆ ಗ್ರಾಮಸ್ಥರು

Tulunadu News Posted On July 17, 2018
0


0
Shares
  • Share On Facebook
  • Tweet It

ಮಂಗಳೂರು : ಕೇರಳದ ಮಾಂಸ ವರ್ತಕರು ಕರ್ನಾಟಕದ ಗಡಿ ಭಾಗವನ್ನು ತ್ಯಾಜ್ಯ ಸುರಿಯುವ ಡಂಪಿಂಗ್ ಯಾರ್ಡ್ ಆಗಿ ಪರಿವರ್ತಿಸಿದ್ದು, ಕೇರಳದ ಕ್ಯಾಲಿಕಟ್ ನಿಂದ ಕೋಳಿ ತ್ಯಾಜ್ಯ ಮತ್ತು ಇತರ ಮಾಂಸ ತ್ಯಾಜ್ಯಗಳನ್ನು ಕರ್ನಾಟಕದ ಪ್ರದೇಶದಲ್ಲಿ ಸುರಿಯುವ ಮಾಫಿಯಾವೊಂದನ್ನು ಪುತ್ತೂರಿನಲ್ಲಿ ಪತ್ತೆ ಹಚ್ಚಲಾಗಿದೆ. ಕಳೆದ ಕೆಲವು ದಿನಗಳಿಂದ ಪುತ್ತೂರು ತಾಲೂಕು ಸೇರಿದಂತೆ ಜಿಲ್ಲೆಯ ಹಲವು ಕಡೆಗಳಲ್ಲಿ ಟನ್ ಗಟ್ಟಲೆ ಕೋಳಿ ತ್ಯಾಜ್ಯ ಹಾಗೂ ಇತರ ಮಾಂಸದ ತ್ಯಾಜ್ಯಗಳನ್ನು ರಾತ್ರೋ ರಾತ್ರಿ ಪುತ್ತೂರು, ಸುಳ್ಯ ಪ್ರದೇಶದಲ್ಲಿ ಸುರಿದು ಹೋಗುವ ತಂಡವೊಂದನ್ನು ಪುತ್ತೂರಿನ ಇರ್ದೆ ಗ್ರಾಮಸ್ಥರು ಮತ್ತು ಪಂಚಾಯತ್ ಅಧಿಕಾರಿಗಳು ಪತ್ತೆ ಹಚ್ಚಿದ್ದಾರೆ. ಈ ತಂಡ ಕೇರಳದಿಂದ ತ್ಯಾಜ್ಯವನ್ನು ತಂದು ಕರ್ನಾಟಕದ ಹೆದ್ದಾರಿ ಬದಿಯಲ್ಲಿ ಹಾಗೂ ಅರಣ್ಯ ಪ್ರದೇಶಗಳಲ್ಲಿ ಸುರಿಯುತ್ತಿರುವ ವಿಚಾರವನ್ನು ಬಾಯ್ಬಿಟ್ಟಿದೆ. “ಲಾರಿ ಹಾಗೂ ಕಾರಿನಲ್ಲಿ ಬಂದು ತ್ಯಾಜ್ಯ ವಿಲೇವಾರಿ ಮಾಡಿ ಹೋಗುತ್ತಿದ್ದೆವು. ಇದಕ್ಕೆ ಸ್ಥಳೀಯ ಯುವಕನೊಬ್ಬ ದಾರಿ ತೋರಿಸಿ ಏಜೆಂಟ್ ರೀತಿ ಸಹಕರಿಸುತ್ತಿದ್ದ” ಎಂದು ಕಿಡಿಗೇಡಿಗಳು ಬಾಯಿಬಿಟ್ಟಿದ್ದಾರೆ. ಕೇರಳದ ಕ್ಯಾಲಿಕಟ್ ನಿಂದ ಸುಮಾರು 300 ಕಿ.ಮೀ. ಕ್ರಮಿಸಿ ಬಂದು ತ್ಯಾಜ್ಯವನ್ನು ಪುತ್ತೂರು, ಸುಳ್ಯದ ಅರಣ್ಯ ಹಾಗು ರಸ್ತೆ ಬದಿ ಸುರಿದು ಹೋಗುವ ಈ ದಂಧೆ ಲಕ್ಷಾಂತರ ರೂಪಾಯಿ ವಹಿವಾಟು ಹೊಂದಿದೆ ಎಂದು ಹೇಳಲಾಗುತ್ತಿದೆ. ಕೇರಳದ ಅನಧಿಕೃತ ಕಸಾಯಿಖಾನೆಗಳ ತ್ಯಾಜ್ಯ ವಿಲೇವಾರಿಗೆ ಕಾನೂನು ಬಿಡುವುದಿಲ್ಲ. ಈ ಹಿನ್ನೆಲೆಯಲ್ಲಿ ಈ ತ್ಯಾಜ್ಯವನ್ನು ಚೀಲಗಳಲ್ಲಿ ತೊಂಬಿಸಿ ಇಲ್ಲಿ ಎಸೆಯಲಾಗುತ್ತಿದೆ ಎಂದು ಹೇಳಲಾಗಿದೆ.
0
Shares
  • Share On Facebook
  • Tweet It




Trending Now
ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
Tulunadu News November 20, 2025
ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
Tulunadu News November 18, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
    • ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
  • Popular Posts

    • 1
      ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
    • 2
      ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!

  • Privacy Policy
  • Contact
© Tulunadu Infomedia.

Press enter/return to begin your search