• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕೇರಳದ ಮಾಂಸ ತ್ಯಾಜ್ಯ ಮಾಫಿಯಾ ಪತ್ತೆ ಹಚ್ಚಿದ ಇರ್ದೆ ಗ್ರಾಮಸ್ಥರು

Tulunadu News Posted On July 17, 2018
0


0
Shares
  • Share On Facebook
  • Tweet It

ಮಂಗಳೂರು : ಕೇರಳದ ಮಾಂಸ ವರ್ತಕರು ಕರ್ನಾಟಕದ ಗಡಿ ಭಾಗವನ್ನು ತ್ಯಾಜ್ಯ ಸುರಿಯುವ ಡಂಪಿಂಗ್ ಯಾರ್ಡ್ ಆಗಿ ಪರಿವರ್ತಿಸಿದ್ದು, ಕೇರಳದ ಕ್ಯಾಲಿಕಟ್ ನಿಂದ ಕೋಳಿ ತ್ಯಾಜ್ಯ ಮತ್ತು ಇತರ ಮಾಂಸ ತ್ಯಾಜ್ಯಗಳನ್ನು ಕರ್ನಾಟಕದ ಪ್ರದೇಶದಲ್ಲಿ ಸುರಿಯುವ ಮಾಫಿಯಾವೊಂದನ್ನು ಪುತ್ತೂರಿನಲ್ಲಿ ಪತ್ತೆ ಹಚ್ಚಲಾಗಿದೆ. ಕಳೆದ ಕೆಲವು ದಿನಗಳಿಂದ ಪುತ್ತೂರು ತಾಲೂಕು ಸೇರಿದಂತೆ ಜಿಲ್ಲೆಯ ಹಲವು ಕಡೆಗಳಲ್ಲಿ ಟನ್ ಗಟ್ಟಲೆ ಕೋಳಿ ತ್ಯಾಜ್ಯ ಹಾಗೂ ಇತರ ಮಾಂಸದ ತ್ಯಾಜ್ಯಗಳನ್ನು ರಾತ್ರೋ ರಾತ್ರಿ ಪುತ್ತೂರು, ಸುಳ್ಯ ಪ್ರದೇಶದಲ್ಲಿ ಸುರಿದು ಹೋಗುವ ತಂಡವೊಂದನ್ನು ಪುತ್ತೂರಿನ ಇರ್ದೆ ಗ್ರಾಮಸ್ಥರು ಮತ್ತು ಪಂಚಾಯತ್ ಅಧಿಕಾರಿಗಳು ಪತ್ತೆ ಹಚ್ಚಿದ್ದಾರೆ. ಈ ತಂಡ ಕೇರಳದಿಂದ ತ್ಯಾಜ್ಯವನ್ನು ತಂದು ಕರ್ನಾಟಕದ ಹೆದ್ದಾರಿ ಬದಿಯಲ್ಲಿ ಹಾಗೂ ಅರಣ್ಯ ಪ್ರದೇಶಗಳಲ್ಲಿ ಸುರಿಯುತ್ತಿರುವ ವಿಚಾರವನ್ನು ಬಾಯ್ಬಿಟ್ಟಿದೆ. “ಲಾರಿ ಹಾಗೂ ಕಾರಿನಲ್ಲಿ ಬಂದು ತ್ಯಾಜ್ಯ ವಿಲೇವಾರಿ ಮಾಡಿ ಹೋಗುತ್ತಿದ್ದೆವು. ಇದಕ್ಕೆ ಸ್ಥಳೀಯ ಯುವಕನೊಬ್ಬ ದಾರಿ ತೋರಿಸಿ ಏಜೆಂಟ್ ರೀತಿ ಸಹಕರಿಸುತ್ತಿದ್ದ” ಎಂದು ಕಿಡಿಗೇಡಿಗಳು ಬಾಯಿಬಿಟ್ಟಿದ್ದಾರೆ. ಕೇರಳದ ಕ್ಯಾಲಿಕಟ್ ನಿಂದ ಸುಮಾರು 300 ಕಿ.ಮೀ. ಕ್ರಮಿಸಿ ಬಂದು ತ್ಯಾಜ್ಯವನ್ನು ಪುತ್ತೂರು, ಸುಳ್ಯದ ಅರಣ್ಯ ಹಾಗು ರಸ್ತೆ ಬದಿ ಸುರಿದು ಹೋಗುವ ಈ ದಂಧೆ ಲಕ್ಷಾಂತರ ರೂಪಾಯಿ ವಹಿವಾಟು ಹೊಂದಿದೆ ಎಂದು ಹೇಳಲಾಗುತ್ತಿದೆ. ಕೇರಳದ ಅನಧಿಕೃತ ಕಸಾಯಿಖಾನೆಗಳ ತ್ಯಾಜ್ಯ ವಿಲೇವಾರಿಗೆ ಕಾನೂನು ಬಿಡುವುದಿಲ್ಲ. ಈ ಹಿನ್ನೆಲೆಯಲ್ಲಿ ಈ ತ್ಯಾಜ್ಯವನ್ನು ಚೀಲಗಳಲ್ಲಿ ತೊಂಬಿಸಿ ಇಲ್ಲಿ ಎಸೆಯಲಾಗುತ್ತಿದೆ ಎಂದು ಹೇಳಲಾಗಿದೆ.
0
Shares
  • Share On Facebook
  • Tweet It




Trending Now
ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
Tulunadu News January 30, 2026
ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
Tulunadu News January 28, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
  • Popular Posts

    • 1
      ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • 2
      ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ

  • Privacy Policy
  • Contact
© Tulunadu Infomedia.

Press enter/return to begin your search