• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕೇರಳದ ಮಾಂಸ ತ್ಯಾಜ್ಯ ಮಾಫಿಯಾ ಪತ್ತೆ ಹಚ್ಚಿದ ಇರ್ದೆ ಗ್ರಾಮಸ್ಥರು

Tulunadu News Posted On July 17, 2018
0


0
Shares
  • Share On Facebook
  • Tweet It

ಮಂಗಳೂರು : ಕೇರಳದ ಮಾಂಸ ವರ್ತಕರು ಕರ್ನಾಟಕದ ಗಡಿ ಭಾಗವನ್ನು ತ್ಯಾಜ್ಯ ಸುರಿಯುವ ಡಂಪಿಂಗ್ ಯಾರ್ಡ್ ಆಗಿ ಪರಿವರ್ತಿಸಿದ್ದು, ಕೇರಳದ ಕ್ಯಾಲಿಕಟ್ ನಿಂದ ಕೋಳಿ ತ್ಯಾಜ್ಯ ಮತ್ತು ಇತರ ಮಾಂಸ ತ್ಯಾಜ್ಯಗಳನ್ನು ಕರ್ನಾಟಕದ ಪ್ರದೇಶದಲ್ಲಿ ಸುರಿಯುವ ಮಾಫಿಯಾವೊಂದನ್ನು ಪುತ್ತೂರಿನಲ್ಲಿ ಪತ್ತೆ ಹಚ್ಚಲಾಗಿದೆ. ಕಳೆದ ಕೆಲವು ದಿನಗಳಿಂದ ಪುತ್ತೂರು ತಾಲೂಕು ಸೇರಿದಂತೆ ಜಿಲ್ಲೆಯ ಹಲವು ಕಡೆಗಳಲ್ಲಿ ಟನ್ ಗಟ್ಟಲೆ ಕೋಳಿ ತ್ಯಾಜ್ಯ ಹಾಗೂ ಇತರ ಮಾಂಸದ ತ್ಯಾಜ್ಯಗಳನ್ನು ರಾತ್ರೋ ರಾತ್ರಿ ಪುತ್ತೂರು, ಸುಳ್ಯ ಪ್ರದೇಶದಲ್ಲಿ ಸುರಿದು ಹೋಗುವ ತಂಡವೊಂದನ್ನು ಪುತ್ತೂರಿನ ಇರ್ದೆ ಗ್ರಾಮಸ್ಥರು ಮತ್ತು ಪಂಚಾಯತ್ ಅಧಿಕಾರಿಗಳು ಪತ್ತೆ ಹಚ್ಚಿದ್ದಾರೆ. ಈ ತಂಡ ಕೇರಳದಿಂದ ತ್ಯಾಜ್ಯವನ್ನು ತಂದು ಕರ್ನಾಟಕದ ಹೆದ್ದಾರಿ ಬದಿಯಲ್ಲಿ ಹಾಗೂ ಅರಣ್ಯ ಪ್ರದೇಶಗಳಲ್ಲಿ ಸುರಿಯುತ್ತಿರುವ ವಿಚಾರವನ್ನು ಬಾಯ್ಬಿಟ್ಟಿದೆ. “ಲಾರಿ ಹಾಗೂ ಕಾರಿನಲ್ಲಿ ಬಂದು ತ್ಯಾಜ್ಯ ವಿಲೇವಾರಿ ಮಾಡಿ ಹೋಗುತ್ತಿದ್ದೆವು. ಇದಕ್ಕೆ ಸ್ಥಳೀಯ ಯುವಕನೊಬ್ಬ ದಾರಿ ತೋರಿಸಿ ಏಜೆಂಟ್ ರೀತಿ ಸಹಕರಿಸುತ್ತಿದ್ದ” ಎಂದು ಕಿಡಿಗೇಡಿಗಳು ಬಾಯಿಬಿಟ್ಟಿದ್ದಾರೆ. ಕೇರಳದ ಕ್ಯಾಲಿಕಟ್ ನಿಂದ ಸುಮಾರು 300 ಕಿ.ಮೀ. ಕ್ರಮಿಸಿ ಬಂದು ತ್ಯಾಜ್ಯವನ್ನು ಪುತ್ತೂರು, ಸುಳ್ಯದ ಅರಣ್ಯ ಹಾಗು ರಸ್ತೆ ಬದಿ ಸುರಿದು ಹೋಗುವ ಈ ದಂಧೆ ಲಕ್ಷಾಂತರ ರೂಪಾಯಿ ವಹಿವಾಟು ಹೊಂದಿದೆ ಎಂದು ಹೇಳಲಾಗುತ್ತಿದೆ. ಕೇರಳದ ಅನಧಿಕೃತ ಕಸಾಯಿಖಾನೆಗಳ ತ್ಯಾಜ್ಯ ವಿಲೇವಾರಿಗೆ ಕಾನೂನು ಬಿಡುವುದಿಲ್ಲ. ಈ ಹಿನ್ನೆಲೆಯಲ್ಲಿ ಈ ತ್ಯಾಜ್ಯವನ್ನು ಚೀಲಗಳಲ್ಲಿ ತೊಂಬಿಸಿ ಇಲ್ಲಿ ಎಸೆಯಲಾಗುತ್ತಿದೆ ಎಂದು ಹೇಳಲಾಗಿದೆ.
0
Shares
  • Share On Facebook
  • Tweet It




Trending Now
ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
Tulunadu News May 21, 2026
ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
Tulunadu News May 12, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
  • Popular Posts

    • 1
      ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್

  • Privacy Policy
  • Contact
© Tulunadu Infomedia.

Press enter/return to begin your search