• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಅಭಿಪ್ರಾಯ ಸುದ್ದಿ 

ಕೇರಳದ ಮಾಂಸ ತ್ಯಾಜ್ಯ ಸುರಿಯುತ್ತಿದ್ದ ಐವರ ಬಂಧನ

Tulunadu News Posted On July 17, 2018
0


0
Shares
  • Share On Facebook
  • Tweet It

ಮಂಗಳೂರು : ಕೇರಳದ ಮಾಂಸ ತ್ಯಾಜ್ಯ ತಂದು ಪುತ್ತೂರು, ವಿಟ್ಲ ಪ್ರದೇಶದಲ್ಲಿ ಸುರಿದು ಪರಾರಿಯಾಗುತ್ತಿದ್ದ ತಂಡವನ್ನು ವಿಟ್ಲ ಪೋಲಿಸರು ಬಂಧಿಸಿದ್ದಾರೆ.ಕೋಳಿ ಹಾಗೂ ಇನ್ನಿತರ ಮಾಂಸ ತ್ಯಾಜ್ಯ ತುಂಬಿದ ಲಾರಿಯನ್ನು ಪೊಲೀಸರು ವಶಪಡಿಸಿಕೊಂಡಿದ್ದು, ಐವರನ್ನು ಬಂಧಿಸಿದ್ದಾರೆ.

ಬಂಧಿತ ಆರೋಪಿಗಳನ್ನು ಪತ್ತೂರು ವಳಮೊಗರು ಗ್ರಾಮದ ಮಹಮ್ಮದ್ ರಫೀಕ್ (30), ಕೇರಳ ಕೋಯಿಕೋಡ್ ನಿವಾಸಿ ಅಹಮ್ಮದ್ ಗಜನಿ (34), ಕೇರಳ ಮಲಪರಂ ನಿವಾಸಿ ಸೌಫಿ (30), ಕೇರಳ ಕೋಯಿಕೋಡ್ ನಿವಾಸಿ ಮಸೂದ್ (25) , ಬಿಹಾರದ ಪೊಸಿಬಾಕಾ ನಿವಾಸಿ ಮಹಮ್ಮದ್ ಜಿಯಾವುಲ್ ಅನ್ಸಾರಿ (20) ಎಂದು ಗುರುತಿಸಲಾಗಿದೆ.ಕಳೆದ ಕೆಲವು ದಿನಗಳಿಂದ ಪುತ್ತೂರು ತಾಲೂಕು ಸೇರಿದಂತೆ ಜಿಲ್ಲೆಯ ಹಲವು ಕಡೆಗಳಲ್ಲಿ ಟನ್ ಗಟ್ಟಲೆ ಕೋಳಿ ತ್ಯಾಜ್ಯ ಹಾಗೂ ಇತರ ಮಾಂಸದ ತ್ಯಾಜ್ಯಗಳನ್ನು ರಾತ್ರೋ ರಾತ್ರಿ ಬಂದು ಸುರಿದು ಪರಾರಿಯಾಗುತ್ತಿರುವ ಪ್ರಕರಣ ಬೆಳಕಿಗೆ ಬಂದಿದ್ದವು .

ಈ ರೀತಿ ಮಾಂಸದ ತ್ಯಾಜ್ಯದ ಸುರಿದು ಪರಾರಿಯಾಗುವ ತಂಡವೊಂದನ್ನು ಪುತ್ತೂರಿನ ಇರ್ದೆ ಗ್ರಾಮಸ್ತರು ಮತ್ತು ಪಂಚಾಯತ್ ಅಧಿಕಾರಿಗಳು ಪತ್ತೆ ಹಚ್ಚಿದ್ದರು. ಈ ಕುರಿತು ವಿಟ್ಲ ಠಾಣೆಗೆ ಮಾಹಿತಿ ಕೂಡ ನೀಡಿದ್ದರು . ಸ್ಥಳಕ್ಕೆ ಆಗಮಿಸಿದ ಪೊಲೀಸರು ಲಾರಿಯನ್ನು ವಶಕ್ಕೆ ಪಡೆದು ಅದರಲ್ಲಿದ್ದ ಐವರನ್ನು ಬಂಧಿಸಿದ್ದಾರೆ.

ಕೇರಳದಿಂದ ತ್ಯಾಜ್ಯವನ್ನು ತಂದು ಕರ್ನಾಟಕದ ಹೆದ್ದಾರಿ ಬದಿಯಲ್ಲಿ ಹಾಗೂ ಅರಣ್ಯ ಪ್ರದೇಶಗಳಲ್ಲಿ ಸುರಿಯುತ್ತಿರುವ ವಿಚಾರವನ್ನು ಕಿಡಿಗೇಡಿಗಳು ಬಾಯ್ಬಿಟ್ಟಿದ್ದಾರೆ. ಲಾರಿ ಹಾಗು ಕಾರಿನಲ್ಲಿ ಬಂದು ತ್ಯಾಜ್ಯವನ್ನು ವಿಲೇವಾರಿ ಮಾಡಿ ಹೋಗುತ್ತದ್ದ ವಿಚಾರ ಬೆಳೆಕಿಗೆ ಬಂದಿದೆ. ಸ್ಥಳೀಯ ಯುವಕರು ಕೂಡ ಇದರಲ್ಲಿ ಶಾಮೀಲಾಗಿರುವುದಾಗಿ ಆರೋಪಿಗಳು ಬಾಯಿಬಿಟ್ಟಿದ್ದಾರೆ.

0
Shares
  • Share On Facebook
  • Tweet It




Trending Now
ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
Tulunadu News January 23, 2026
ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
Tulunadu News January 20, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
  • Popular Posts

    • 1
      ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • 2
      ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • 3
      ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • 4
      ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!

  • Privacy Policy
  • Contact
© Tulunadu Infomedia.

Press enter/return to begin your search