• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಸಿಎಂ ನೀಡಿದ ಐಫೋನ್ ಮರಳಿಸಲು ನಿರ್ಧರಿಸಿ, ಮಾದರಿಯಾದ ಬಿಜೆಪಿ ಸಂಸದರು

TNN Correspondent Posted On July 18, 2018


  • Share On Facebook
  • Tweet It

ಬೆಂಗಳೂರು: ರಾಜ್ಯದಲ್ಲಿರುವ ಸಾಲು ಸಾಲು ಸಮಮಸ್ಯೆಗಳ ಮಧ್ಯೆ ರಾಜ್ಯದ ಸಂಸದರಿಗೆ ಐಫೋನ್ ಬ್ಯಾಗ್ ಮತ್ತು ಮೋಚಿ ಲೆದರ್ ಬ್ಯಾಗ್ ಉಡುಗೊರೆ ನೀಡಿರುವ ರಾಜ್ಯ ಸರ್ಕಾರದ ನಿರ್ಧಾರ ತೀವ್ರ ವಿವಾದ ಸೃಷ್ಟಿಸಿದೆ. ರಾಜ್ಯದಲ್ಲಿರುವ ಸಮಸ್ಯೆಗಳಿಗೆ ಸ್ಪಂದಿಸಿ ನಮಗೆ ಉಡುಗೊರೆ ಬೇಡ ಎಂಬ ಸಂದೇಶವನ್ನು ನೀಡಲು ಬಿಜೆಪಿ ಸಂಸದರು ನಿರ್ಧರಿಸಿದ್ದಾರೆ. ಈ ಮೂಲಕ ತೆರಿಗೆ ಹಣ ಜನಪ್ರತಿನಿಧಿಗಳ ಐಷಾರಾಮಿ ಜೀವನಕ್ಕೆ ಬಳಸಬಾರದು ಎಂಬ ಸಂದೇಶವನ್ನು ನೀಡಿದ್ದಾರೆ.

ರಾಜ್ಯ ಸರ್ಕಾರ  ದೆಹಲಿಯಲ್ಲಿ ಬುಧವಾರ ನಡೆಯಲಿರುವ ಸಂಸದರ ಸಭೆಗೆ ಆಮಂತ್ರಣ ನೀಡುವ ಜೊತೆಗೆ ಆ್ಯಪಲ್ ಐಫೋನ್ ಎಕ್ಸ್ ಮತ್ತು  ಮೋಚಿ ಲೆದರ್ ಬ್ಯಾಗ್ ನ್ನು ಉಡುಗೊರೆಯಾಗಿ ನೀಡಿದ್ದು, ಅದನ್ನು ಬಿಜೆಪಿ ಸಂಸದರು ವಾಪಸ್ ನೀಡಲು ನಿರ್ಧರಿಸಿದ್ದಾರೆ ಎಂದು ಕೇಂದ್ರ ಸಚಿವ ಅನಂತಕುಮಾರ ಹೇಳಿದ್ದಾರೆ.

‘ನಾನು ಈಗಾಗಲೇ ಐಫೋನ್ ಮತ್ತು ಬ್ಯಾಗ್ ನ್ನು ಮರಳಿ ನೀಡಿದ್ದೇನೆ. ಜೊತೆಗೆ ರಾಜ್ಯ ಬಿಜೆಪಿಯ ಎಲ್ಲ ಸಂಸದರು ಐ ಫೋನ್ ವಾಪಸ್ ನೀಡಲು ನಿರ್ಧರಿಸಿದ್ದಾರೆ ಎಂದು ಕೇಂದ್ರ ಸಚಿವ ಅನಂತ್ ಕುಮಾರ ಸಿಎಂ ಕುಮಾರಸ್ವಾಮಿಗೆ ಟ್ವೀಟ್ ಮಾಡಿದ್ದಾರೆ. ಸಿಎಂ ಕುಮಾರಸ್ವಾಮಿಯವರೇ, ನನ್ನ ಬೆಂಗಳೂರು ಕಚೇರಿಗೆ ಕಾವೇರಿ ನದಿಗೆ ಸಂಬಂಧಪಟ್ಟ ದಾಖಲೆ ಹಾಗೂ ದುಬಾರಿ ಬೆಲೆಯ ಐ ಫೋನ್‌ ಅನ್ನು ಬ್ಯಾಗ್‌ನಲ್ಲಿ ನೀಡಲಾಗಿತ್ತು. ಆದರೆ, ನನ್ನ ಆದೇಶದ ಮೇರೆಗೆ ನನ್ನ ಕಾರ್ಯದರ್ಶಿ ಸೋಮವಾರವೇ ಬ್ಯಾಗ್ ವಾಪಸ್ ಕಳಿಸಿದ್ದಾರೆ. ಈ ರೀತಿಯ ಉಡುಗೊರೆಗಳಿಗೆ ಸರಕಾರದ ಹಣ ಬಳಕೆ ಸರಿಯಲ್ಲ ಎಂದು ಅನಂತಕುಮಾರ ಟ್ವೀಟ್ ಮಾಡಿದ್ದಾರೆ.

ಸರಿಯಾಗಿ ಸಂಬಳ ಸಿಗದೆ ಪೌರಕಾರ್ಮಿಕರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪ್ರತಿದಿನ ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ರಾಜ್ಯದಲ್ಲಿ ಅತಿವೃಷ್ಟಿಯಿಂದ ಪ್ರವಾಹ ಉಂಟಾಗಿದೆ. ರೈತರ ಹಾಗೂ ಜನರ ಜೀವನವನ್ನು ಹಾಳು ಮಾಡುತ್ತಿದೆ. ಹೀಗಾಗಿ, ರಾಜ್ಯ ಸರಕಾರ ತನ್ನ ಬೊಕ್ಕಸದಲ್ಲಿರುವ ಹಾಗೂ ಜನರ ತೆರಿಗೆ ಹಣದ ಪ್ರತಿ ಪೈಸೆಯನ್ನೂ ಜನರ ಕಷ್ಟವನ್ನು ಪರಿಹರಿಸಲು ವಿನಿಯೋಗಿಸಿ ಎಂದು ಸಲಹೆ ನೀಡಿದ್ದಾರೆ.

  • Share On Facebook
  • Tweet It


- Advertisement -


Trending Now
ಶಾಸಕರು ಮುಂದಿನ ಅವಧಿಗೆ ಮಾಡಲೇಬೇಕಾದ ಕಾರ್ಯಗಳು ಇವು!!
Tulunadu News March 29, 2023
ಲಿಂಕ್ ಮಾಡಿ ಎಂದರೆ ಕುಂಬಳಕಾಯಿ ಕಳ್ಳರಂತೆ ವರ್ತಿಸುವುದು ಯಾಕೆ?
Tulunadu News March 27, 2023
Leave A Reply

  • Recent Posts

    • ಶಾಸಕರು ಮುಂದಿನ ಅವಧಿಗೆ ಮಾಡಲೇಬೇಕಾದ ಕಾರ್ಯಗಳು ಇವು!!
    • ಲಿಂಕ್ ಮಾಡಿ ಎಂದರೆ ಕುಂಬಳಕಾಯಿ ಕಳ್ಳರಂತೆ ವರ್ತಿಸುವುದು ಯಾಕೆ?
    • ಪೌರ ಕಾರ್ಮಿಕರು ಕೆಲಸಕ್ಕೆ ಮರಳಿದ್ದು ಹೇಗೆ?
    • ರಾಹುಲ್ ಮುತ್ತಜ್ಜ ಮಾಡಿದ್ದ ಕಾನೂನು ಇವರಿಗೆ ಮುಳುವಾಯಿತು!
    • ಎಲ್ಲಾ ಗಾಂಧಿಗಳು ಮಹಾತ್ಮ ಗಾಂಧಿಯಂತಲ್ಲ ಎಂದು ರಾಹುಲ್ ಗೊತ್ತಿರಬೇಕಿತ್ತು!!
    • ಉಚಿತ ಖಚಿತ ಎನ್ನುವುದು ಯಾವಾಗಲೂ ಡೌಟ್ ಆಯಿತಾ?
    • ಕಸ ಸಂಗ್ರಹಣೆಯ ಹಿಂದೆ ಕಾಂಗ್ರೆಸ್ ರಾಜಕೀಯ ವಾಸನೆ!!
    • ಯಾರು ಯಾವ ಕ್ಷೇತ್ರದಲ್ಲಿ ಎಂದು ಯಾರಿಗೂ ಗೊತ್ತಿಲ್ಲ!!
    • ಗುಳಿಗನಿಗೆ ತಮಾಷೆ ಮಾಡಿ ಬದುಕುವುದುಂಟೆ!!
    • ನಾವು ಅಂಡರ್ ಸ್ಟ್ಯಾಂಡಿಂಗ್ ಮಾಡಿಕೊಂಡಿದ್ದೇವು ಎಂದು ಒಪ್ಪಿದ ಎಸ್ ಡಿಪಿಐ!!
  • Popular Posts

    • 1
      ಶಾಸಕರು ಮುಂದಿನ ಅವಧಿಗೆ ಮಾಡಲೇಬೇಕಾದ ಕಾರ್ಯಗಳು ಇವು!!
    • 2
      ಲಿಂಕ್ ಮಾಡಿ ಎಂದರೆ ಕುಂಬಳಕಾಯಿ ಕಳ್ಳರಂತೆ ವರ್ತಿಸುವುದು ಯಾಕೆ?
    • 3
      ಪೌರ ಕಾರ್ಮಿಕರು ಕೆಲಸಕ್ಕೆ ಮರಳಿದ್ದು ಹೇಗೆ?
    • 4
      ರಾಹುಲ್ ಮುತ್ತಜ್ಜ ಮಾಡಿದ್ದ ಕಾನೂನು ಇವರಿಗೆ ಮುಳುವಾಯಿತು!
    • 5
      ಎಲ್ಲಾ ಗಾಂಧಿಗಳು ಮಹಾತ್ಮ ಗಾಂಧಿಯಂತಲ್ಲ ಎಂದು ರಾಹುಲ್ ಗೊತ್ತಿರಬೇಕಿತ್ತು!!


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search