• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಸಿಎಂ ನೀಡಿದ ಐಫೋನ್ ಮರಳಿಸಲು ನಿರ್ಧರಿಸಿ, ಮಾದರಿಯಾದ ಬಿಜೆಪಿ ಸಂಸದರು

TNN Correspondent Posted On July 18, 2018
0


0
Shares
  • Share On Facebook
  • Tweet It

ಬೆಂಗಳೂರು: ರಾಜ್ಯದಲ್ಲಿರುವ ಸಾಲು ಸಾಲು ಸಮಮಸ್ಯೆಗಳ ಮಧ್ಯೆ ರಾಜ್ಯದ ಸಂಸದರಿಗೆ ಐಫೋನ್ ಬ್ಯಾಗ್ ಮತ್ತು ಮೋಚಿ ಲೆದರ್ ಬ್ಯಾಗ್ ಉಡುಗೊರೆ ನೀಡಿರುವ ರಾಜ್ಯ ಸರ್ಕಾರದ ನಿರ್ಧಾರ ತೀವ್ರ ವಿವಾದ ಸೃಷ್ಟಿಸಿದೆ. ರಾಜ್ಯದಲ್ಲಿರುವ ಸಮಸ್ಯೆಗಳಿಗೆ ಸ್ಪಂದಿಸಿ ನಮಗೆ ಉಡುಗೊರೆ ಬೇಡ ಎಂಬ ಸಂದೇಶವನ್ನು ನೀಡಲು ಬಿಜೆಪಿ ಸಂಸದರು ನಿರ್ಧರಿಸಿದ್ದಾರೆ. ಈ ಮೂಲಕ ತೆರಿಗೆ ಹಣ ಜನಪ್ರತಿನಿಧಿಗಳ ಐಷಾರಾಮಿ ಜೀವನಕ್ಕೆ ಬಳಸಬಾರದು ಎಂಬ ಸಂದೇಶವನ್ನು ನೀಡಿದ್ದಾರೆ.

ರಾಜ್ಯ ಸರ್ಕಾರ  ದೆಹಲಿಯಲ್ಲಿ ಬುಧವಾರ ನಡೆಯಲಿರುವ ಸಂಸದರ ಸಭೆಗೆ ಆಮಂತ್ರಣ ನೀಡುವ ಜೊತೆಗೆ ಆ್ಯಪಲ್ ಐಫೋನ್ ಎಕ್ಸ್ ಮತ್ತು  ಮೋಚಿ ಲೆದರ್ ಬ್ಯಾಗ್ ನ್ನು ಉಡುಗೊರೆಯಾಗಿ ನೀಡಿದ್ದು, ಅದನ್ನು ಬಿಜೆಪಿ ಸಂಸದರು ವಾಪಸ್ ನೀಡಲು ನಿರ್ಧರಿಸಿದ್ದಾರೆ ಎಂದು ಕೇಂದ್ರ ಸಚಿವ ಅನಂತಕುಮಾರ ಹೇಳಿದ್ದಾರೆ.

‘ನಾನು ಈಗಾಗಲೇ ಐಫೋನ್ ಮತ್ತು ಬ್ಯಾಗ್ ನ್ನು ಮರಳಿ ನೀಡಿದ್ದೇನೆ. ಜೊತೆಗೆ ರಾಜ್ಯ ಬಿಜೆಪಿಯ ಎಲ್ಲ ಸಂಸದರು ಐ ಫೋನ್ ವಾಪಸ್ ನೀಡಲು ನಿರ್ಧರಿಸಿದ್ದಾರೆ ಎಂದು ಕೇಂದ್ರ ಸಚಿವ ಅನಂತ್ ಕುಮಾರ ಸಿಎಂ ಕುಮಾರಸ್ವಾಮಿಗೆ ಟ್ವೀಟ್ ಮಾಡಿದ್ದಾರೆ. ಸಿಎಂ ಕುಮಾರಸ್ವಾಮಿಯವರೇ, ನನ್ನ ಬೆಂಗಳೂರು ಕಚೇರಿಗೆ ಕಾವೇರಿ ನದಿಗೆ ಸಂಬಂಧಪಟ್ಟ ದಾಖಲೆ ಹಾಗೂ ದುಬಾರಿ ಬೆಲೆಯ ಐ ಫೋನ್‌ ಅನ್ನು ಬ್ಯಾಗ್‌ನಲ್ಲಿ ನೀಡಲಾಗಿತ್ತು. ಆದರೆ, ನನ್ನ ಆದೇಶದ ಮೇರೆಗೆ ನನ್ನ ಕಾರ್ಯದರ್ಶಿ ಸೋಮವಾರವೇ ಬ್ಯಾಗ್ ವಾಪಸ್ ಕಳಿಸಿದ್ದಾರೆ. ಈ ರೀತಿಯ ಉಡುಗೊರೆಗಳಿಗೆ ಸರಕಾರದ ಹಣ ಬಳಕೆ ಸರಿಯಲ್ಲ ಎಂದು ಅನಂತಕುಮಾರ ಟ್ವೀಟ್ ಮಾಡಿದ್ದಾರೆ.

ಸರಿಯಾಗಿ ಸಂಬಳ ಸಿಗದೆ ಪೌರಕಾರ್ಮಿಕರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪ್ರತಿದಿನ ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ರಾಜ್ಯದಲ್ಲಿ ಅತಿವೃಷ್ಟಿಯಿಂದ ಪ್ರವಾಹ ಉಂಟಾಗಿದೆ. ರೈತರ ಹಾಗೂ ಜನರ ಜೀವನವನ್ನು ಹಾಳು ಮಾಡುತ್ತಿದೆ. ಹೀಗಾಗಿ, ರಾಜ್ಯ ಸರಕಾರ ತನ್ನ ಬೊಕ್ಕಸದಲ್ಲಿರುವ ಹಾಗೂ ಜನರ ತೆರಿಗೆ ಹಣದ ಪ್ರತಿ ಪೈಸೆಯನ್ನೂ ಜನರ ಕಷ್ಟವನ್ನು ಪರಿಹರಿಸಲು ವಿನಿಯೋಗಿಸಿ ಎಂದು ಸಲಹೆ ನೀಡಿದ್ದಾರೆ.

0
Shares
  • Share On Facebook
  • Tweet It




Trending Now
ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
Tulunadu News February 18, 2026
ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
Tulunadu News February 12, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
    • ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
  • Popular Posts

    • 1
      ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!

  • Privacy Policy
  • Contact
© Tulunadu Infomedia.

Press enter/return to begin your search