• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಅಭಿಪ್ರಾಯ ಮನೋರಂಜನೆ ಸುದ್ದಿ 

ಫುಜ್ಲಾನಾ ಜಿಎಸ್ ಬಿ ಪ್ರೋ ಕಬಡ್ಡಿ -ಪರ್ಲ್ ಸಿಟಿ ಸ್ಮ್ಯಾಶರ್ಸ್ ಚಾಂಪಿಯನ್

Tulunadu News Posted On July 23, 2018
0


0
Shares
  • Share On Facebook
  • Tweet It

ಫುಜ್ಲಾನಾ ಜಿಎಸ್ ಬಿ ಪ್ರೋ ಕಬಡ್ಡಿ ಪಂದ್ಯಾಟದ ಅಂತಿಮ ಸುತ್ತಿನಲ್ಲಿ ಡಿವಿಕೆ ವಾರಿಯರ್ಸ್ ಅನ್ನು ಸೋಲಿಸಿ ಪರ್ಲ್ ಸಿಟಿ ಸ್ಮ್ಯಾಶರ್ಸ್ ಪುತ್ತೂರು ಪ್ರಶಸ್ತಿ ಗೆದ್ದುಕೊಂಡಿತು. ಅಂತಿಮ ಪಂದ್ಯಾಟದಲ್ಲಿ 37-24 ಅಂಕಗಳಿಂದ ಪರ್ಲ್ ಸಿಟಿ ಸ್ಮ್ಯಾಶರ್ಸ್ ಪುತ್ತೂರು ಜಿಎಸ್ ಬಿ ಟ್ರೋಫಿ ಮತ್ತು ಒಂದು ಲಕ್ಷ್ಷ ರೂಪಾಯಿಯನ್ನು ತನ್ನದಾಗಿಸಿತು.

ಪ್ರಶಸ್ತಿ ವಿತರಿಸಿ ಮಾತನಾಡಿದ ಮಂಗಳೂರು ನಗರ ದಕ್ಷಿಣ ಶಾಸಕ ಡಿ ವೇದವ್ಯಾಸ ಕಾಮತ್ ಅವರು ಕ್ರೀಡೆಯಲ್ಲಿ ಪ್ರತಿಭೆಗಳನ್ನು ಪ್ರೋತ್ಸಾಹಿಸಲು ಕೊಡಿಯಾಲ್ ಸ್ಫೊರ್ಟ್ ಎಸೋಸಿಯೇಶನ್ ಎರಡು ವರ್ಷಗಳಿಂದ ಕ್ರಿಕೆಟ್ ಮತ್ತು ಕಬಡ್ಡಿ ಪಂದ್ಯಾಟಗಳನ್ನು ಆಯೋಜಿಸುತ್ತಿದೆ. ಅಷ್ಟೇ ಅಲ್ಲದೆ ಕ್ರೀಡೆಯಲ್ಲಿ ಉನ್ನತ ಸ್ಥಾನಕ್ಕೆರಲು ಶ್ರಮಿಸುವ ಜಿಎಸ್ ಬಿ ಕ್ರೀಡಾಳುಗಳಿಗೆ ಸಹಾಯಹಸ್ತ ಕೂಡ ಚಾಚುವ ಕೆಲಸ ಮಾಡುತ್ತಿದೆ ಎಂದರು. ಬೆಸ್ಟ್ ರೈಡರ್ ಪ್ರಶಸ್ತಿಯನ್ನು ಡಿವಿಕೆ ತಂಡದ ಶ್ರೀಕಾಂತ್ ಪ್ರಭು, ಬೆಸ್ಟ್ ಕ್ಯಾಚರ್ ಆಗಿ ನಿತಿನ್ ಪುತ್ತೂರು, ಫುಜ್ಲಾನ್ ಪ್ಲೇಯರ್ ಆಫ್ ದಿ ಮ್ಯಾಚ್ ಪರ್ಲ್ ಸಿಟಿ ಪುತ್ತೂರು ತಂಡದ ಸುಬ್ರಾಯ್ ಕಾಮತ್, ಮಾಡರ್ನ್ ಎಮರ್ಜಿಂಗ್ ಪ್ಲೇಯರ್ ಆಗಿ ನಮೋ ವಾರಿಯರ್ ಮುಂಬೈ ತಂಡದ ರಕ್ಷಿತ್ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡರು.

ಸಮಾರೋಪ ಸಮಾರಂಭದಲ್ಲಿ ಕಾಮತ್ ಕೇಟರರ್ಸ್ ಮಾಲೀಕರಾದ ಸುಧಾಕರ ಕಾಮತ್, ಶ್ರೀ ವೆಂಕಟರಮಣ ದೇವಸ್ಥಾನದ ಟ್ರಸ್ಟಿ ರಾಮಚಂದ್ರ ಕಾಮತ್, ಲೆಕ್ಕ ಪರಿಶೋಧಕ ಜಗನ್ನಾಥ ಕಾಮತ್, ಉದ್ಯಮಿಗಳಾದ ಸುರೇಶ್ ಕಾಮತ್, ಅನಂತ ಕಾಮತ್, ನರೇಂದ್ರ ನಾಯಕ್, ರಾಜೇಶ್ ಕಿಣಿ ಭಾರತೀಯ ಸೇನೆಯ ಲೆಫ್ಟಿನೆಂಟ್ ಕರ್ನಲ್ ಮಂಜುನಾಥ ಪೈ, ರಮೇಶ್ ಮಲ್ಯ, ಪೂಜಾ ಪೈ, ಕಬಡ್ಡಿ ಎಸೋಸಿಯೇಶನ್ ಅಮರನಾಥ ರೈ, ವಕೀಲ ಸತೀಶ್ ಭಟ್, ಅರವಿಂದ ಪ್ರಭು, ಹನುಮಂತ ಕಾಮತ್, ನರೇಶ್ ಶೆಣೈ, ಶಿವಾನಂದ ಶೆಣೈ, ಚೇತನ್ ಕಾಮತ್, ನರೇಶ್ ಪ್ರಭು , ವಿಘ್ನೇಶ್ ನಾಯಕ್ ಉಪಸ್ಥಿತರಿದ್ದರು.

0
Shares
  • Share On Facebook
  • Tweet It


- Advertisement -


Trending Now
ಬೊಮ್ಮಾಯಿ 40% ಲಂಚದ ಆರೋಪ ಬಂದಾಗ ಸುಮ್ಮನೆ ಕುಳಿತು ತಪ್ಪು ಮಾಡಿದ್ರು - ಮೋಹನದಾಸ್ ಪೈ
Tulunadu News June 25, 2025
ನಿಜವಾಯ್ತು ದೈವದ ನುಡಿ: 36 ವರ್ಷಗಳ ಬಳಿಕ ತಾಯಿಯ ಮಡಿಲು ಸೇರಿದ ಹಿರಿಮಗ
Tulunadu News June 25, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಬೊಮ್ಮಾಯಿ 40% ಲಂಚದ ಆರೋಪ ಬಂದಾಗ ಸುಮ್ಮನೆ ಕುಳಿತು ತಪ್ಪು ಮಾಡಿದ್ರು - ಮೋಹನದಾಸ್ ಪೈ
    • ನಿಜವಾಯ್ತು ದೈವದ ನುಡಿ: 36 ವರ್ಷಗಳ ಬಳಿಕ ತಾಯಿಯ ಮಡಿಲು ಸೇರಿದ ಹಿರಿಮಗ
    • ನಮ್ಮ ಸರಕಾರವಿದ್ದೇ ಒಂದು ಚರಂಡಿ ಮಾಡಲು ಆಗಿಲ್ಲ - ಕಾಂಗ್ರೆಸ್ ಶಾಸಕ ಬಹಿರಂಗ ಬೇಸರ!
    • ಪೊಲೀಸರ ಮಧ್ಯರಾತ್ರಿ ಕಾರ್ಯಾಚರಣೆ: 20 ಲಕ್ಷ ರೂ ಮಾನನಷ್ಟ ಕೋರಿ ಅರ್ಜಿ: ಅರುಣ್ ಶ್ಯಾಮ್ ವಾದ...
    • ಮಂಗಳೂರಿನಲ್ಲಿ ಮಗುವಿನ ಅಪಹರಣ, ಮಾರಾಟಕ್ಕೆ ಯತ್ನ - ಒಬ್ಬನ ಬಂಧನ!
    • ಫಾಸ್ಟ್ ಟ್ಯಾಗ್ ಇನ್ನು ವರ್ಷದ ಪಾಸ್ ನಲ್ಲಿ ಲಭ್ಯ: ಎಷ್ಟು ಕೊಟ್ಟರೆ ಸಾಕು ಗೊತ್ತಾ?
    • ಭೀಕರ ರಸ್ತೆ ಅಪಘಾತ- ದಕ ಜಿಲ್ಲಾ NSUI ಉಪಾಧ್ಯಕ್ಷ ಸೇರಿ ಇಬ್ಬರು ಯುವಕರು ಸಾವು!
    • ವಿಮಾನ ದುರಂತ ಸ್ಥಳದಲ್ಲಿ ಸಿಕ್ಕಿವೆ ಸಾಕಷ್ಟು ಚಿನ್ನ, ಹಣ, ಭಗವದ್ಗೀತೆ!
    • ಲಂಡನ್ನಿಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ ಕೊನೆಯ ಕ್ಷಣದಲ್ಲಿ ಪ್ರಯಾಣ ರದ್ದು!
    • ಗಿರೀಶ್ ಭಾರದ್ವಾಜ್ ಮನವಿಗೆ ಸ್ಪಂದನೆ: ಹಿಂದೂ ಮುಖಂಡರ ರಾತ್ರಿ ಮನೆ ಭೇಟಿಯ ಬಗ್ಗೆ ವರದಿ ಕೇಳಿದ ಪೊಲೀಸ್ ದೂರು ಪ್ರಾಧಿಕಾರ!
  • Popular Posts

    • 1
      ಬೊಮ್ಮಾಯಿ 40% ಲಂಚದ ಆರೋಪ ಬಂದಾಗ ಸುಮ್ಮನೆ ಕುಳಿತು ತಪ್ಪು ಮಾಡಿದ್ರು - ಮೋಹನದಾಸ್ ಪೈ
    • 2
      ನಿಜವಾಯ್ತು ದೈವದ ನುಡಿ: 36 ವರ್ಷಗಳ ಬಳಿಕ ತಾಯಿಯ ಮಡಿಲು ಸೇರಿದ ಹಿರಿಮಗ
    • 3
      ನಮ್ಮ ಸರಕಾರವಿದ್ದೇ ಒಂದು ಚರಂಡಿ ಮಾಡಲು ಆಗಿಲ್ಲ - ಕಾಂಗ್ರೆಸ್ ಶಾಸಕ ಬಹಿರಂಗ ಬೇಸರ!
    • 4
      ಪೊಲೀಸರ ಮಧ್ಯರಾತ್ರಿ ಕಾರ್ಯಾಚರಣೆ: 20 ಲಕ್ಷ ರೂ ಮಾನನಷ್ಟ ಕೋರಿ ಅರ್ಜಿ: ಅರುಣ್ ಶ್ಯಾಮ್ ವಾದ...

  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search