• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಅಭಿಪ್ರಾಯ ಮನೋರಂಜನೆ ಸುದ್ದಿ 

ಆಷಾಢ ಮಾಸದಲ್ಲಿ ಮಾರಿ ಓಡಿಸಲು ತುಳುನಾಡಿನ ಮನೆ ಮನೆಗೆ ಬರುವ ಆಟಿ ಕಳೆಂಜ

Tulunadu News Posted On July 23, 2018
0


0
Shares
  • Share On Facebook
  • Tweet It

ಮಂಗಳೂರು: ಜಾನಪದ ವೈಶಿಷ್ಟ್ಯಗಳಿಗೆ ಗುರುತಿಸಿಕೊಂಡಿರುವ ತುಳುನಾಡಿನಲ್ಲಿ ಅಷಾಢಮಾಸ ಆರಂಭವಾಗಿದೆ. ಈ ಆಟಿ ತಿಂಗಳು ಆರಂಭವಾಗುತ್ತಿದ್ದಂತೆ ಆಟಿ ಕಳೆಂಜ ಮನೆ ಮನೆ ಬಾಗಿಲಲ್ಲಿ ಪ್ರತ್ಯಕ್ಷನಾಗುತ್ತಾನೆ. ಆಟಿ ಕಳೆಂಜ ಮನೆಮನೆಗೆ ಬಂದು ಮಾರಿಯನ್ನು ನಿವಾರಿಸುತ್ತಾನೆ. ಮೂಡಣದ ಮಾರಿಯನ್ನು ಮೂಡಣದೂರಿಗೆ ಸಾಗಿಸುತ್ತಾನೆ. ಮನುಷ್ಯರಿಗಾಗಲಿ, ಪ್ರಾಣಿಗಳಿಗಾಗಲೀ ಬರುವ ಕಾಯಿಲೆಯನ್ನು ನಿವಾರಣೆ ಮಾಡುವ ಮಾಂತ್ರಿಕನಂತೆ ಕಳೆಂಜ ಎನ್ನುವುದು ತುಳು ಜನರ ನಂಬಿಕೆ.
ಮಾರಿಯನ್ನು ನಿವಾರಣೆ ಮಾಡುವ ಆಟಿ ಕಳೆಂಜ ಭೂತಾರಾಧನೆಯಲ್ಲಿ ವೀರರ ಆರಾಧನೆ ಬಹಳ ಮುಖ್ಯವಾದ ಒಂದು ಅಂಗ. ಯೋಧರು ಅಥವಾ ಅರಸರು ತಮ್ಮ ಮರಣದ ಬಳಿಕ ದೈವಗಳಾಗಿ ಆರಾಧನೆಗೊಂಡ ನಿದರ್ಶನಗಳು ಭೂತಾರಾಧನೆಯಲ್ಲಿ ಸಾಕಷ್ಟಿವೆ. ಆಟಿ ಕಳಂಜ ಸಂಪ್ರದಾಯದಲ್ಲಿ ಮಾನುಷ ಮತ್ತು ಅತಿಮಾನುಷ ನಡುವಿನ ರೂಪವಾದ ಮಂತ್ರವಾದಿಯು ದಾರ್ಶನಿಕನಾಗಿ ಕಾಣುತ್ತಾನೆ. ತುಳುನಾಡಿನ ಆಟಿ ಮಾಸದಲ್ಲಿ ಮನೆಮನೆಯಲ್ಲಿ ಪ್ರತ್ಯಕ್ಷನಾಗುವ ಆಟಿ ಕಳೆಂಜ, ಮನುಷ್ಯರಿಗಾಗಲೀ , ಪ್ರಾಣಿಗಳಿಗಾಗಲೀ ಬರುವ ಮಾರಿಯನ್ನು ನಿವಾರಣೆ ಮಾಡುವನು ಹಾಗೂ ಅದಕ್ಕೆ ಪರಿಹಾರ ನೀಗುವವನು ಎನ್ನುವುದು ತುಳು ಜನರ ನಂಬಿಕೆ.
 ಆಟಿ ಕಳೆಂಜ ವೇಷ ಹಾಕುವುದು ಹೇಗೆ? : ತುಳುನಾಡಿನಲ್ಲಿ ಸಾಮಾನ್ಯವಾಗಿ ನಲಿಕೆ ಜನಾಂಗದವರು ಆಟಿ ಕಳೆಂಜ ವೇಷ ಹಾಕುವ ವಾಡಿಕೆ. ಗ್ರಾಮಾಂತರ ಪ್ರದೇಶದಲ್ಲಿ ಇಂದಿಗೂ ಮನೆಗೆ ಕಳೆಂಜ ಬರುತ್ತಾನೆ. ಸಣ್ಣ ಬಾಲಕನೊಬ್ಬನಿಗೆ ತಲೆಗೆ ಕಂಗಿನ ಹಾಳೆಯ ಟೊಪ್ಪಿಗೆ ಇಟ್ಟು, ಮುಖಕ್ಕೆ ಬಿಳಿಯ ಬಣ್ಣ ಬಳಿದು, ದಡ್ಡಿಯ ನಾರಿನ ಗಡ್ಡ ಮೀಸೆ ಬಿಡಿಸಿ, ಕೆಂಪು ಬಣ್ಣದ ಅರಿವೆಯ ತೊಡಿಸಲಾಗುತ್ತದೆ. ಕಾಲಿಗೆ ಗೆಜ್ಜೆ ಕಟ್ಟಿ, ಕೈಯಲ್ಲೊಂದು ಓಲೆಗರಿಯ ತತ್ರ ಕೊಟ್ಟು ಆಟಿ ಕಳೆಂಜನ ವೇಷ ಹಾಕಿಸುತ್ತಾರೆ. ವೇಷಧಾರಿಯ ಜೊತೆಗಿರುವ ಮತ್ತೊಬ್ಬ ತೆಂಬರೆ ಎಂಬ ಚರ್ಮವಾದ್ಯ ಒಂದನ್ನು ಬಾರಿಸಿ, ಆಟಿ ಕಳೆಂಜನಿಗೆ ಸಂಬಂಧಪಟ್ಟ ಪಾಡ್ದನ ಹಾಡುತ್ತಿರುವಂತೆಯೇ ವೇಷಧಾರಿ ಮೆಲ್ಲನೆ ಕಾಲನ್ನಾಡಿಸುತ್ತ ಕೈಯಲ್ಲಿ ಹಿಡಿದಿರುವ ತಂತ್ರವನ್ನು ತಿರುಗಿಸುತ್ತ ಹಿಂದೆ- ಮುಂದೆ ಹೋಗುತ್ತಿರುತ್ತಾನೆ.
ತುಳುನಾಡ ಜನರ ನಂಬಿಕೆ ಆಟಿ ತಿಂಗಳಲ್ಲಿ ಮನೆಯ ಅಂಗಳಕ್ಕೆ ಬಂದು ಕುಣಿದ ಆಟಿ ಕಳೆಂಜನಿಗೆ ತಡ್ಪೆ ಎಂಬ ಮರದ ಸಾಧನದಲ್ಲಿ ಸ್ವಲ್ಪ ಭತ್ತ, ಅಕ್ಕಿ, ಹುಳಿ, ಮೆಣಸು, ಉಪ್ಪು, ಒಂದು ತುಂಡು ಇದ್ದಲು, ಸ್ವಲ್ಪ ಅಟ್ಟದ ಮಸಿ ಇಟ್ಟುಕೊಡುತ್ತಾರೆ. ಅಲ್ಲದೆ ಆತ ಅಂಗಳ ಇಳಿದು ಹೋಗುವಾಗ ಕುರಿನೀರನ್ನು ಅಥವಾ ಅರಿಸಿನ ಹಾಕಿದ ಬಣ್ಣದ ನೀರನ್ನು ಆತನ ಮೇಲೆ ಸಿಂಪಡಿಸುತ್ತಾರೆ. ಹೀಗೆ ಮಾಡಿದರೆ ಮನೆಯ ಅಶುಭ ಕಳೆಯುತ್ತದೆ ಎಂದು ತುಳುನಾಡ ಜನರ ನಂಬಿಕೆ.
ನಗರ ಪ್ರದೇಶಗಳಲ್ಲಿ ವಿರಳ ಈ ಸಂಪ್ರದಾಯ ಹಿಂದಿನಿಂದಲೂ ನಡೆದು ಕೊಂಡುಬಂದಿದೆ. ಆಧುನಿಕತೆಗೆ ತೆರೆದುಕೊಂಡಿರುವ ನಗರ ಪ್ರದೇಶಗಳಲ್ಲಿ ಆಟಿಕಳೆಂಜ ಅತ್ಯಂತ ವಿರಳ. ಅದರೆ ಗ್ರಾಮಾಂತರ ಪ್ರದೇಶದಲ್ಲಿ ಇಂದಿಗೂ ಆಟಿ ಕಳೆಂಜ ಮನೆ ಮನೆಗೆ ಬರುತ್ತಾನೆ. ಆಧುನಿಕತೆ ಎಷ್ಟೇ ಬೆಳೆದರೂ ಕರಾವಳಿಯ ಗ್ರಾಮಾಂತರ ಪ್ರದೇಶಗಳಲ್ಲಿ ಈ ಸಂಪ್ರದಾಯಗಳೂ ಇನ್ನೂ ಅಳಿಯದೆ ಉಳಿದಿದೆ. ಇಂತಹ ಸಂಪ್ರದಾಯ ಕಟ್ಟು ಪಾಡುಗಳಿಂದಲೇ ಸಮಾಜ ಇನ್ನೂ ಸ್ವಸ್ಥವಾಗಿದೆ
0
Shares
  • Share On Facebook
  • Tweet It




Trending Now
ಮುಂದಿನ ಜನ್ಮದಲ್ಲಿ ಮುಸ್ಲಿಮನಾಗಿ ಹುಟ್ಟಲು ಆಸೆ- ಕೈ ಶಾಸಕ ಬಿ.ಕೆ.ಸಂಗಮೇಶ್ವರ್
Tulunadu News September 10, 2025
ನೇಪಾಳ ಪ್ರಧಾನಿ ಕೆಪಿ ಶರ್ಮಾ ಒಲಿ ರಾಜೀನಾಮೆ!
Tulunadu News September 9, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮುಂದಿನ ಜನ್ಮದಲ್ಲಿ ಮುಸ್ಲಿಮನಾಗಿ ಹುಟ್ಟಲು ಆಸೆ- ಕೈ ಶಾಸಕ ಬಿ.ಕೆ.ಸಂಗಮೇಶ್ವರ್
    • ನೇಪಾಳ ಪ್ರಧಾನಿ ಕೆಪಿ ಶರ್ಮಾ ಒಲಿ ರಾಜೀನಾಮೆ!
    • ಸೌಜನ್ಯ ಕೊಲೆ ಮಾಡಿದ್ದೇ ಮಾವ ವಿಠಲ ಗೌಡ - ಸ್ನೇಹಮಯಿ ಕೃಷ್ಣರಿಂದ ಎಸ್ಪಿಗೆ ದೂರು ಅರ್ಜಿ!
    • ಸೆಪ್ಟೆಂಬರ್ 9 ರಂದು ಮದ್ದೂರು ಸ್ವಯಂಪ್ರೇರಿತ ಬಂದ್ ಗೆ ಹಿಂದೂ ಮುಖಂಡರ ಕರೆ!
    • ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ: ಮದ್ದೂರು ಪಟ್ಟಣದಲ್ಲಿ ಗಲಭೆ – ತಡೆ ಆದೇಶ ಜಾರಿಯಲ್ಲಿ
    • ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆ: ಕರ್ನಾಟಕದಲ್ಲಿ ರಾಜಕೀಯ ಹೊಸ ಚರ್ಚೆ
    • ವಿವೇಕ್ ಅಗ್ನಿಹೋತ್ರಿ ನಿರ್ದೇಶನದ "ದಿ ಬೆಂಗಾಲ್ ಫೈಲ್ಸ್" ಸಿನೆಮಾಕ್ಕೆ ಪಶ್ಚಿಮ ಬಂಗಾಲದಲ್ಲಿ ಅಘೋಷಿತ ತಡೆ!
    • ಖಾರ್ ಬೂಂದಿ ತಿನ್ನುತ್ತಿದ್ದಿರಾ? ಎಚ್ಚರಿಕೆ!
    • ಸೀಟ್ ಬೆಲ್ಟ್ ಧರಿಸದ್ದಕ್ಕೆ ದಂಡ ಪಾವತಿ ಮಾಡಿದ ಸಿದ್ಧರಾಮಯ್ಯ!
    • ಡಿಕೆ ಶಿವಕುಮಾರ್ ದೇಶದ ಎರಡನೇ ಶ್ರೀಮಂತ ಸಚಿವ! ಎಡಿಆರ್ ವರದಿ
  • Popular Posts

    • 1
      ಮುಂದಿನ ಜನ್ಮದಲ್ಲಿ ಮುಸ್ಲಿಮನಾಗಿ ಹುಟ್ಟಲು ಆಸೆ- ಕೈ ಶಾಸಕ ಬಿ.ಕೆ.ಸಂಗಮೇಶ್ವರ್
    • 2
      ನೇಪಾಳ ಪ್ರಧಾನಿ ಕೆಪಿ ಶರ್ಮಾ ಒಲಿ ರಾಜೀನಾಮೆ!
    • 3
      ಸೌಜನ್ಯ ಕೊಲೆ ಮಾಡಿದ್ದೇ ಮಾವ ವಿಠಲ ಗೌಡ - ಸ್ನೇಹಮಯಿ ಕೃಷ್ಣರಿಂದ ಎಸ್ಪಿಗೆ ದೂರು ಅರ್ಜಿ!
    • 4
      ಸೆಪ್ಟೆಂಬರ್ 9 ರಂದು ಮದ್ದೂರು ಸ್ವಯಂಪ್ರೇರಿತ ಬಂದ್ ಗೆ ಹಿಂದೂ ಮುಖಂಡರ ಕರೆ!
    • 5
      ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ: ಮದ್ದೂರು ಪಟ್ಟಣದಲ್ಲಿ ಗಲಭೆ – ತಡೆ ಆದೇಶ ಜಾರಿಯಲ್ಲಿ

  • Privacy Policy
  • Contact
© Tulunadu Infomedia.

Press enter/return to begin your search