• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕುಮಾರಸ್ವಾಮಿಯವರು ಸಾಲಮನ್ನಾ ವಿಳಂಬ ಮಾಡಿದ್ದಕ್ಕೆ ಎಷ್ಟು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಗೊತ್ತಾ?

TNN Correspondent Posted On July 24, 2018
0


0
Shares
  • Share On Facebook
  • Tweet It

ಅತ್ತ ಎಚ್.ಡಿ.ದೇವೇಗೌಡರೂ ನಾನು ಮಣ್ಣಿನ ಮಗ ಎನ್ನುತ್ತಾರೆ, ಇತ್ತ ಅವರ ಮಗ ಕುಮಾರಸ್ವಾಮಿಯವರೂ ಮಣ್ಣಿನ ಮಗ ಎನ್ನುತ್ತಾರೆ. ಇದರ ಅರ್ಥ ರೈತರನ್ನು ಸೆಳೆಯುವುದೇ ಆಗಿದೆ ಎಂಬುದನ್ನು ಬಿಡಿಸಿ ಹೇಳಬೇಕಿಲ್ಲ. ಆದರೆ ಕುಮಾರಸ್ವಾಮಿಯವರು ರಾಜ್ಯದಲ್ಲಿ ಆಡಳಿತಕ್ಕೆ ಬಂದ ಮೇಲೆ ಕೊಟ್ಟ ಮಾತಿನಂತೆ ಸಾಲ ಮನ್ನಾ ಮಾಡದೆ ಇರುವುದಕ್ಕೆ ಈಗ ರೈತರು ತಮ್ಮ ಪ್ರಾಣವನ್ನೇ ಅರ್ಪಿಸುವಂತಾಗಿದೆ.

ಹೌದು, ರಾಜ್ಯದಲ್ಲಿ ಚುನಾವಣೆಗೂ ಮುನ್ನ ನಾವು ರೈತರ ಪರ ಆಡಳಿತ ನಡೆಸುತ್ತೇವೆ, ಅಧಿಕಾರಕ್ಕೆ ಬಂದ 24 ಗಂಟೆಯಲ್ಲೇ ರೈತರ ಸಂಪೂರ್ಣ ಸಾಲ ಮನ್ನಾ ಮಾಡುತ್ತೇವೆ ಎಂದರು. ಆದರೆ ಅಧಿಕಾರಕ್ಕೆ ಬಂದ ಬಳಿಕ ರೈತರ ಸಾಲ ಮನ್ನಾ ಮಾಡಲು ಸದ್ಯಕ್ಕೆ ಆಗುವುದಿಲ್ಲ ಎಂದರು, ಹಣದ ಕೊರತೆ ಎಂದು ವರಾತ ತೆಗೆದರು. ಅದಾದ ಬಳಿಕ ನಾನು ರಾಜ್ಯದ ಜನರ ಮುಲಾಜಿನಲ್ಲಿಲ್ಲ, ನಾನು ಕಾಂಗ್ರೆಸ್ ಮುಲಾಜಿನಲ್ಲಿದ್ದೇನೆ ಎಂದು ಮತ ಹಾಕಿದ ಎಲ್ಲರ ಕೆನ್ನೆಗೆ ಬಾರಿಸುವಂತೆ ಮಾತನಾಡಿದರು.

ಇದೆಲ್ಲದರ ನಡುವೆ ರೈತರ ಸಾಲ ಮನ್ನಾ ವಿಷಯವನ್ನು ಕುಮಾರಸ್ವಾಮಿಯವರು ಮರೆತೇ ಬಿಟ್ಟದ್ದರು. ಆದರೆ ರಾಜ್ಯದ ರೈತರೇ ಒತ್ತಾಯ ಮಾಡುವಂತಾಯಿತು. ಸಾಂದರ್ಭಿಕ ಶಿಶುವನ್ನು ಬಡಿದೆಬ್ಬಿಸಬೇಕಾಯಿತು. ಕೊನೆಗೆ ಅಧಿಕಾರಕ್ಕೆ ಬಂದ ಹಲವು ದಿನಗಳ ಬಳಿಕ ರೈತರ ಸಾಲ ಮನ್ನಾ ಮಾಡುವ ಘೋಷಣೆ ಮಾಡಿದರು ಕುಮಾರಸ್ವಾಮಿ.

ಆದರೆ ಈ ಅವಧಿಯಲ್ಲೇ ರೈತರು ಸಾಲದಿಂದ ಬೇಸತ್ತು ಹೋಗಿದ್ದರು. ಅಲ್ಲದೆ ಸಾಲ ಮನ್ನಾ ಮಾಡಿ ಹಲವು ದಿನ ಕಳೆದರೂ ಸಾಲ ಮನ್ನಾ ಆಗದ ಕಾರಣ ಬೇಸತ್ತ ಸುಮಾರು 28 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಹೇಳಿ ಒಬ್ಬ ಮುಖ್ಯಮಂತ್ರಿ ಮೈಮರೆತರೆ, ಆಡಿದ ಮಾತು ಮರೆತು ಹೋದರೆ ಏನಾಗುತ್ತದೆ ಎಂಬುದಕ್ಕೆ ಇದೇ ಸಾಕ್ಷಿ. ಮಣ್ಣಿನ ಮಕ್ಕಳು ಇದನ್ನು ಅರ್ಥ ಮಾಡಿಕೊಳ್ಳುವುದು ಯಾವಾಗ?

0
Shares
  • Share On Facebook
  • Tweet It




Trending Now
ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
Tulunadu News February 4, 2026
ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
Tulunadu News January 30, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
  • Popular Posts

    • 1
      ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • 2
      ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!

  • Privacy Policy
  • Contact
© Tulunadu Infomedia.

Press enter/return to begin your search