• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕುಮಾರಸ್ವಾಮಿಯವರು ಸಾಲಮನ್ನಾ ವಿಳಂಬ ಮಾಡಿದ್ದಕ್ಕೆ ಎಷ್ಟು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಗೊತ್ತಾ?

TNN Correspondent Posted On July 24, 2018
0


0
Shares
  • Share On Facebook
  • Tweet It

ಅತ್ತ ಎಚ್.ಡಿ.ದೇವೇಗೌಡರೂ ನಾನು ಮಣ್ಣಿನ ಮಗ ಎನ್ನುತ್ತಾರೆ, ಇತ್ತ ಅವರ ಮಗ ಕುಮಾರಸ್ವಾಮಿಯವರೂ ಮಣ್ಣಿನ ಮಗ ಎನ್ನುತ್ತಾರೆ. ಇದರ ಅರ್ಥ ರೈತರನ್ನು ಸೆಳೆಯುವುದೇ ಆಗಿದೆ ಎಂಬುದನ್ನು ಬಿಡಿಸಿ ಹೇಳಬೇಕಿಲ್ಲ. ಆದರೆ ಕುಮಾರಸ್ವಾಮಿಯವರು ರಾಜ್ಯದಲ್ಲಿ ಆಡಳಿತಕ್ಕೆ ಬಂದ ಮೇಲೆ ಕೊಟ್ಟ ಮಾತಿನಂತೆ ಸಾಲ ಮನ್ನಾ ಮಾಡದೆ ಇರುವುದಕ್ಕೆ ಈಗ ರೈತರು ತಮ್ಮ ಪ್ರಾಣವನ್ನೇ ಅರ್ಪಿಸುವಂತಾಗಿದೆ.

ಹೌದು, ರಾಜ್ಯದಲ್ಲಿ ಚುನಾವಣೆಗೂ ಮುನ್ನ ನಾವು ರೈತರ ಪರ ಆಡಳಿತ ನಡೆಸುತ್ತೇವೆ, ಅಧಿಕಾರಕ್ಕೆ ಬಂದ 24 ಗಂಟೆಯಲ್ಲೇ ರೈತರ ಸಂಪೂರ್ಣ ಸಾಲ ಮನ್ನಾ ಮಾಡುತ್ತೇವೆ ಎಂದರು. ಆದರೆ ಅಧಿಕಾರಕ್ಕೆ ಬಂದ ಬಳಿಕ ರೈತರ ಸಾಲ ಮನ್ನಾ ಮಾಡಲು ಸದ್ಯಕ್ಕೆ ಆಗುವುದಿಲ್ಲ ಎಂದರು, ಹಣದ ಕೊರತೆ ಎಂದು ವರಾತ ತೆಗೆದರು. ಅದಾದ ಬಳಿಕ ನಾನು ರಾಜ್ಯದ ಜನರ ಮುಲಾಜಿನಲ್ಲಿಲ್ಲ, ನಾನು ಕಾಂಗ್ರೆಸ್ ಮುಲಾಜಿನಲ್ಲಿದ್ದೇನೆ ಎಂದು ಮತ ಹಾಕಿದ ಎಲ್ಲರ ಕೆನ್ನೆಗೆ ಬಾರಿಸುವಂತೆ ಮಾತನಾಡಿದರು.

ಇದೆಲ್ಲದರ ನಡುವೆ ರೈತರ ಸಾಲ ಮನ್ನಾ ವಿಷಯವನ್ನು ಕುಮಾರಸ್ವಾಮಿಯವರು ಮರೆತೇ ಬಿಟ್ಟದ್ದರು. ಆದರೆ ರಾಜ್ಯದ ರೈತರೇ ಒತ್ತಾಯ ಮಾಡುವಂತಾಯಿತು. ಸಾಂದರ್ಭಿಕ ಶಿಶುವನ್ನು ಬಡಿದೆಬ್ಬಿಸಬೇಕಾಯಿತು. ಕೊನೆಗೆ ಅಧಿಕಾರಕ್ಕೆ ಬಂದ ಹಲವು ದಿನಗಳ ಬಳಿಕ ರೈತರ ಸಾಲ ಮನ್ನಾ ಮಾಡುವ ಘೋಷಣೆ ಮಾಡಿದರು ಕುಮಾರಸ್ವಾಮಿ.

ಆದರೆ ಈ ಅವಧಿಯಲ್ಲೇ ರೈತರು ಸಾಲದಿಂದ ಬೇಸತ್ತು ಹೋಗಿದ್ದರು. ಅಲ್ಲದೆ ಸಾಲ ಮನ್ನಾ ಮಾಡಿ ಹಲವು ದಿನ ಕಳೆದರೂ ಸಾಲ ಮನ್ನಾ ಆಗದ ಕಾರಣ ಬೇಸತ್ತ ಸುಮಾರು 28 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಹೇಳಿ ಒಬ್ಬ ಮುಖ್ಯಮಂತ್ರಿ ಮೈಮರೆತರೆ, ಆಡಿದ ಮಾತು ಮರೆತು ಹೋದರೆ ಏನಾಗುತ್ತದೆ ಎಂಬುದಕ್ಕೆ ಇದೇ ಸಾಕ್ಷಿ. ಮಣ್ಣಿನ ಮಕ್ಕಳು ಇದನ್ನು ಅರ್ಥ ಮಾಡಿಕೊಳ್ಳುವುದು ಯಾವಾಗ?

0
Shares
  • Share On Facebook
  • Tweet It




Trending Now
ವಿದ್ಯುತ್ ಕ್ಷೇತ್ರದ ಖಾಸಗೀಕರಣ ವಿರೋಧಿಸಿ ವೇದವ್ಯಾಸ ಕಾಮತರಿಗೆ ಮನವಿ ಸಲ್ಲಿಸಿದ ಒಕ್ಕೂಟ
Tulunadu News June 29, 2026
ಉಡುಪಿ ಕಾಂಗ್ರೆಸ್ ಮುಖಂಡ ಅಮೃತ್ ಶೆಣೈಗೆ 3 ವರ್ಷ ಜೈಲು ಶಿಕ್ಷೆ!
Tulunadu News June 26, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ವಿದ್ಯುತ್ ಕ್ಷೇತ್ರದ ಖಾಸಗೀಕರಣ ವಿರೋಧಿಸಿ ವೇದವ್ಯಾಸ ಕಾಮತರಿಗೆ ಮನವಿ ಸಲ್ಲಿಸಿದ ಒಕ್ಕೂಟ
    • ಉಡುಪಿ ಕಾಂಗ್ರೆಸ್ ಮುಖಂಡ ಅಮೃತ್ ಶೆಣೈಗೆ 3 ವರ್ಷ ಜೈಲು ಶಿಕ್ಷೆ!
    • ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ
    • Najlepsze bonusy i sloty w polskim kasynie online
    • ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
  • Popular Posts

    • 1
      ವಿದ್ಯುತ್ ಕ್ಷೇತ್ರದ ಖಾಸಗೀಕರಣ ವಿರೋಧಿಸಿ ವೇದವ್ಯಾಸ ಕಾಮತರಿಗೆ ಮನವಿ ಸಲ್ಲಿಸಿದ ಒಕ್ಕೂಟ

  • Privacy Policy
  • Contact
© Tulunadu Infomedia.

Press enter/return to begin your search