• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕುಮಾರಸ್ವಾಮಿಯವರು ಸಾಲಮನ್ನಾ ವಿಳಂಬ ಮಾಡಿದ್ದಕ್ಕೆ ಎಷ್ಟು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಗೊತ್ತಾ?

TNN Correspondent Posted On July 24, 2018
0


0
Shares
  • Share On Facebook
  • Tweet It

ಅತ್ತ ಎಚ್.ಡಿ.ದೇವೇಗೌಡರೂ ನಾನು ಮಣ್ಣಿನ ಮಗ ಎನ್ನುತ್ತಾರೆ, ಇತ್ತ ಅವರ ಮಗ ಕುಮಾರಸ್ವಾಮಿಯವರೂ ಮಣ್ಣಿನ ಮಗ ಎನ್ನುತ್ತಾರೆ. ಇದರ ಅರ್ಥ ರೈತರನ್ನು ಸೆಳೆಯುವುದೇ ಆಗಿದೆ ಎಂಬುದನ್ನು ಬಿಡಿಸಿ ಹೇಳಬೇಕಿಲ್ಲ. ಆದರೆ ಕುಮಾರಸ್ವಾಮಿಯವರು ರಾಜ್ಯದಲ್ಲಿ ಆಡಳಿತಕ್ಕೆ ಬಂದ ಮೇಲೆ ಕೊಟ್ಟ ಮಾತಿನಂತೆ ಸಾಲ ಮನ್ನಾ ಮಾಡದೆ ಇರುವುದಕ್ಕೆ ಈಗ ರೈತರು ತಮ್ಮ ಪ್ರಾಣವನ್ನೇ ಅರ್ಪಿಸುವಂತಾಗಿದೆ.

ಹೌದು, ರಾಜ್ಯದಲ್ಲಿ ಚುನಾವಣೆಗೂ ಮುನ್ನ ನಾವು ರೈತರ ಪರ ಆಡಳಿತ ನಡೆಸುತ್ತೇವೆ, ಅಧಿಕಾರಕ್ಕೆ ಬಂದ 24 ಗಂಟೆಯಲ್ಲೇ ರೈತರ ಸಂಪೂರ್ಣ ಸಾಲ ಮನ್ನಾ ಮಾಡುತ್ತೇವೆ ಎಂದರು. ಆದರೆ ಅಧಿಕಾರಕ್ಕೆ ಬಂದ ಬಳಿಕ ರೈತರ ಸಾಲ ಮನ್ನಾ ಮಾಡಲು ಸದ್ಯಕ್ಕೆ ಆಗುವುದಿಲ್ಲ ಎಂದರು, ಹಣದ ಕೊರತೆ ಎಂದು ವರಾತ ತೆಗೆದರು. ಅದಾದ ಬಳಿಕ ನಾನು ರಾಜ್ಯದ ಜನರ ಮುಲಾಜಿನಲ್ಲಿಲ್ಲ, ನಾನು ಕಾಂಗ್ರೆಸ್ ಮುಲಾಜಿನಲ್ಲಿದ್ದೇನೆ ಎಂದು ಮತ ಹಾಕಿದ ಎಲ್ಲರ ಕೆನ್ನೆಗೆ ಬಾರಿಸುವಂತೆ ಮಾತನಾಡಿದರು.

ಇದೆಲ್ಲದರ ನಡುವೆ ರೈತರ ಸಾಲ ಮನ್ನಾ ವಿಷಯವನ್ನು ಕುಮಾರಸ್ವಾಮಿಯವರು ಮರೆತೇ ಬಿಟ್ಟದ್ದರು. ಆದರೆ ರಾಜ್ಯದ ರೈತರೇ ಒತ್ತಾಯ ಮಾಡುವಂತಾಯಿತು. ಸಾಂದರ್ಭಿಕ ಶಿಶುವನ್ನು ಬಡಿದೆಬ್ಬಿಸಬೇಕಾಯಿತು. ಕೊನೆಗೆ ಅಧಿಕಾರಕ್ಕೆ ಬಂದ ಹಲವು ದಿನಗಳ ಬಳಿಕ ರೈತರ ಸಾಲ ಮನ್ನಾ ಮಾಡುವ ಘೋಷಣೆ ಮಾಡಿದರು ಕುಮಾರಸ್ವಾಮಿ.

ಆದರೆ ಈ ಅವಧಿಯಲ್ಲೇ ರೈತರು ಸಾಲದಿಂದ ಬೇಸತ್ತು ಹೋಗಿದ್ದರು. ಅಲ್ಲದೆ ಸಾಲ ಮನ್ನಾ ಮಾಡಿ ಹಲವು ದಿನ ಕಳೆದರೂ ಸಾಲ ಮನ್ನಾ ಆಗದ ಕಾರಣ ಬೇಸತ್ತ ಸುಮಾರು 28 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಹೇಳಿ ಒಬ್ಬ ಮುಖ್ಯಮಂತ್ರಿ ಮೈಮರೆತರೆ, ಆಡಿದ ಮಾತು ಮರೆತು ಹೋದರೆ ಏನಾಗುತ್ತದೆ ಎಂಬುದಕ್ಕೆ ಇದೇ ಸಾಕ್ಷಿ. ಮಣ್ಣಿನ ಮಕ್ಕಳು ಇದನ್ನು ಅರ್ಥ ಮಾಡಿಕೊಳ್ಳುವುದು ಯಾವಾಗ?

0
Shares
  • Share On Facebook
  • Tweet It




Trending Now
ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
Tulunadu News December 23, 2025
ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
Tulunadu News December 22, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!
    • ಭಕ್ತಿಗೀತೆ ಹಾಡುತ್ತಿದ್ದ ಗಾಯಕಿಯ ಮೇಲೆ ದರ್ಪ! ಜಾತ್ಯಾತೀತ ಗೀತೆ ಹಾಡಲು ಒತ್ತಾಯ!
    • ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ನೀಡಿ - ಸರಕಾರಕ್ಕೆ ಶಾಸಕ ಆಗ್ರಹ!
    • ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!
    • ಅಜಾನ್ ಚರ್ಚೆಯ ಸಂದರ್ಭದಲ್ಲಿ ದೀಪಾವಳಿ ಪಟಾಕಿ ವಿಷಯ ಎತ್ತಿದ ಸಚಿವ!
    • ಇಷ್ಟು ಚಿಕ್ಕ ವಯಸ್ಸಿಗೆ ಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ಕಾರ್ಯಾಧ್ಯಕ್ಷ ಪಟ್ಟ!
    • ಅನ್ಯಧರ್ಮ ಅವಹೇಳನ: ವಿಮಾನ ನಿಲ್ದಾಣದಲ್ಲೇ ಆರೋಪಿ ಸೆರೆ
    • ಸರಕಾರದಿಂದಲೇ ಟಿಪ್ಪು ಜಯಂತಿ ಆಚರಿಸಬೇಕೆಂಬ ಚರ್ಚೆಗೆ ವಿಜಯಾನಂದ ಕಾಶಪ್ಪನವರ್ ನಾಂದಿ!
  • Popular Posts

    • 1
      ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • 2
      ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • 3
      ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!
    • 4
      ಭಕ್ತಿಗೀತೆ ಹಾಡುತ್ತಿದ್ದ ಗಾಯಕಿಯ ಮೇಲೆ ದರ್ಪ! ಜಾತ್ಯಾತೀತ ಗೀತೆ ಹಾಡಲು ಒತ್ತಾಯ!
    • 5
      ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ನೀಡಿ - ಸರಕಾರಕ್ಕೆ ಶಾಸಕ ಆಗ್ರಹ!

  • Privacy Policy
  • Contact
© Tulunadu Infomedia.

Press enter/return to begin your search