• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮೋದಿ ಅವರು ಹೊಗಳಿದ್ದ ಆಚಾರ್ಯರ ಕುಂಚದಲ್ಲಿ ಅರಳಿದ ರಾಮನ ಚಿತ್ರ ಮಾಡಿದೆ ಮೋಡಿ

TNN Correspondent Posted On July 25, 2018
0


0
Shares
  • Share On Facebook
  • Tweet It

ಮಂಗಳೂರು: ಕಳೆದ ಎರಡು ವರ್ಷಗಳ ಹಿಂದೆ ಕರಣ್ ಆಚಾರ್ಯ ಬಿಡಿಸಿದ ಹನುಮಂತನ ಚಿತ್ರ ದೇಶಾದ್ಯಂತ ಸುದ್ದಿಯಾಗಿತ್ತು. ಯಾರದ್ದೇ ವಾಹನ, ಬೈಕಿನ ಮೇಲೆ ಕರಣ್ ಬಿಡಿಸಿದ ಚಿತ್ರಗಳೇ ರಾರಾಜಿಸುತ್ತಿದ್ದವು. ಎಲ್ಲರೂ ರಾಮನ ಭಕ್ತ ಹನುಮನ ಬಂಟರೇ ಆಗಿದ್ದರು.

ಅಷ್ಟೇ ಏಕೆ, ಹಲವು ತಿಂಗಳುಗಳ ಹಿಂದೆ ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳೂರಿಗೆ ಬಂದಾಗ ಕನ್ನಡದ ಪ್ರತಿಭೆ ಕರಣ್ ಆಚಾರ್ಯರನ್ನು ಮನದುಂಬಿ ಹಾಡಿ ಹೊಗಳಿದ್ದರು. ಹಾಗೆ ಎನ್ನುವಷ್ಟರಮಟ್ಟಿಗೆ ಕರಣ್ ಆಚಾರ್ಯರ ಹನುಮಂತನ ಚಿತ್ರ ಮೋಡಿ ಮಾಡಿತ್ತು.

ಈಗ ಕರಣ್ ಆಚಾರ್ಯ ಅವರು ಮತ್ತೆ ನೂತನ ಚಿತ್ರದೊಂದಿಗೆ ಸುದ್ದಿಯಲ್ಲಿದ್ದು, ವಿರಾಟ್ ರಾಮನ ಚಿತ್ರ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಹೌದು, ವೆಕ್ಟರ್ ಆರ್ಟ್ ಮಾದರಿಯಲ್ಲಿ ಕರಣ್ ಆಚಾರ್ಯ ಅವರು ರಾಮನ ಚಿತ್ರ ಬಿಡಿಸಿದ್ದು ಜನಮನಸೂರೆಗೊಳ್ಳುತ್ತಿದೆ.

ಕೇರಳದಲ್ಲಿ ಆರಂಭವಾಗಿರುವ ರಾಮಾಯಣ ಮಾಸಕ್ಕೆ ಶುಭ ಕೋರುವ ಸಲುವಾಗಿ ಆಚಾರ್ಯರು ರಾಮನ ನಾಲ್ಕು ಚಿತ್ರಗಳನ್ನು ಬಿಡಿಸಿದ್ದು, ಕೇಸರಿ ಹಾಗೂ ಹಳದಿ ಬಣ್ಣದಲ್ಲಿ ಮೂಡಿಬಂದಿರುವ ಚಿತ್ರಗಳು ಜನರಿಗೆ ಇಷ್ಟವಾಗಿವೆ. ಅದರಲ್ಲೂ ಬೆನ್ನಲ್ಲಿ ಇರುವ ಬತ್ತಳಿಕೆ ಬಾಣಗಳು, ಕಪ್ಪು ಬಣ್ಣದ ರೇಖೆಗಳು ಎಲ್ಲರಿಗೂ ಇಷ್ಟವಾಗಿವೆ.

0
Shares
  • Share On Facebook
  • Tweet It




Trending Now
ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
Tulunadu News May 12, 2026
ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
Tulunadu News April 14, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
  • Popular Posts

    • 1
      ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!

  • Privacy Policy
  • Contact
© Tulunadu Infomedia.

Press enter/return to begin your search