• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಲೋಕಸಭೆ ಚುನಾವಣೆಯಲ್ಲೂ ರಾಜ್ಯದಲ್ಲಿ ಬಿಜೆಪಿ ಮುನ್ನಡೆ ಸಾಧಿಸಲು ಕಮಲ ಪಡೆ ಹೇಗೆ ಸಜ್ಜಾಗಿದೆ ನೋಡಿ!

TNN Correspondent Posted On July 26, 2018
0


0
Shares
  • Share On Facebook
  • Tweet It

ಬೆಂಗಳೂರು: ಕಳೆದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಮುನ್ನಡೆ ಸಾಧಿಸಲು ಮೋದಿ ಅವರ ಅಲೆ, ಯಡಿಯೂರಪ್ಪ ಅವರ ನಾಯಕತ್ವ, ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ವೈಫಲ್ಯ ಎಷ್ಟು ಪರಿಣಾಮ ಬೀರಿದೆಯೋ, ಅದರಲ್ಲಿ ಸಾಮಾಜಿಕ ಜಾಲತಾಣದ ಪಾತ್ರವೂ ಪ್ರಮುಖವಾಗಿತ್ತು.

ಫೇಸ್ ಬುಕ್, ಟ್ವಿಟರ್, ವಾಟ್ಸ್ ಆ್ಯಪ್ ಗಳಲ್ಲಿ ರಾಜ್ಯ ಸರ್ಕಾರದ ವೈಫಲ್ಯ, ಬಿಜೆಪಿಯ ಅಭಿವೃದ್ಧಿ ಪರ ಆಡಳಿತ, ಸಿದ್ದರಾಮಯ್ಯರ ಇಬ್ಬಂದಿ ಹಾಗೂ ಧರ್ಮ ಆಧಾರಿತ ಯೋಜನೆಗಳು ಚರ್ಚೆಯಾದವು. ಅವುಗಳು ಮತವಾಗಿಯೂ ಪರಿಣಮಿಸಿ ರಾಜ್ಯದಲ್ಲಿ ಬಿಜೆಪಿ ನೂರಕ್ಕೂ ಅಧಿಕ ವಿಧಾನಸಭೆ ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲು ಅನುಕೂಲವಾಯಿತು. ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿದ್ದ ಬಿಜೆಪಿ ಸುಮಾರು 25 ಸಾವಿರ ವಾಟ್ಸ್ ಆ್ಯಪ್ ಗ್ರೂಪ್ ರಚಿಸಿತ್ತು.

ಈಗ ಮುಂಬರುವ ಲೋಕಸಭೆ ಚುನಾವಣೆಯಲ್ಲಿಯೂ ಬಿಜೆಪಿ ಮುನ್ನಡೆ ಸಾಧಿಸಲು ಯೋಜನೆ ರೂಪಿಸಿದ್ದು, ವಾಟ್ಸ್ ಆ್ಯಪ್ ಅನ್ನು ಪ್ರಬಲವಾಗಿ ಬಳಸಲು ಮುಂದಾಗಿದೆ. ಅದಕ್ಕಾಗಿ ಸುಮಾರು 35 ಸಾವಿರ ವಾಟ್ಸ್ ಆ್ಯಪ್ ಗ್ರೂಪ್ ರಚಿಸಲು ಮುಂದಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ಅಭಿಪ್ರಾಯ ರೂಪಿಸಲು ಚಿಂತನೆ ನಡೆಸಿದೆ ಎಂದು ತಿಳಿದುಬಂದಿದೆ.

ಹೀಗೆ ರಚಿಸುವ 35 ಸಾವಿರ ವಾಟ್ಸ್ಆ್ಯಪ್ ಗ್ರೂಪ್ ಗಳಿಗೆ ನರೇಂದ್ರ ಮೋದಿ ಅವರ ಭಾವಚಿತ್ರವನ್ನು ಡಿಪಿ ಆಗಿ ಸೆಟ್ ಮಾಡುವಂತೆ ರಾಜ್ಯ ಬಿಜೆಪಿ ಸೂಚಿಸಿದ್ದು, ಹರ ಹರ ಮೋದಿ ರಿಂಗ್ ಟೋನ್ ಸೆಟ್ ಮಾಡಿಕೊಳ್ಳುವ ಮೂಲಕ ಮೋದಿ ಅವರ ಅಲೆಯನ್ನು ಮತ್ತಷ್ಟು ಹೆಚ್ಚಿಸುವಂತೆ ಸೂಚಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಒಟ್ಟಿನಲ್ಲಿ ಬಿಜೆಪಿ ಹಾಗೂ ನರೇಂದ್ರ ಮೋದಿ ಅವರು ಮೊದಲಿನಿಂದಲೂ ಸಾಮಾಜಿಕ ಜಾಲತಾಣವನ್ನು ಸಮರ್ಪಕವಾಗಿ ಹಾಗೂ ಪರಿಣಾಮಕಾರಿಯಾಗಿ ಬಳಸುತ್ತಿದ್ದು, ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಈ ತಂತ್ರ ಮತ್ತಷ್ಟು ಯಶಸ್ವಿಯಾಗುತ್ತದೆ ಎಂದೇ ರಾಜಕೀಯ ವಲಯದಲ್ಲಿ ಬಿಂಬಿಸಲಾಗುತ್ತಿದೆ.

0
Shares
  • Share On Facebook
  • Tweet It




Trending Now
20 ವರ್ಷಗಳ ಬಳಿಕ ರಾಜ್ ಠಾಕ್ರೆ ಹಾಗೂ ಉದ್ದವ್ ಠಾಕ್ರೆ ಸಮ್ಮಿಲನ!
Tulunadu News July 5, 2025
20, 30 ವಯಸ್ಸಿನಲ್ಲಿ ಮಗು ಬೇಕೆನ್ನುವ ಆಸೆ ಹುಟ್ಟಿರಲಿಲ್ಲ, 40 ರಲ್ಲಿ ಬಂತು! ಖ್ಯಾತ ನಟಿಯ ಮನದಿಂಗಿತ...
Tulunadu News July 5, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • 20 ವರ್ಷಗಳ ಬಳಿಕ ರಾಜ್ ಠಾಕ್ರೆ ಹಾಗೂ ಉದ್ದವ್ ಠಾಕ್ರೆ ಸಮ್ಮಿಲನ!
    • 20, 30 ವಯಸ್ಸಿನಲ್ಲಿ ಮಗು ಬೇಕೆನ್ನುವ ಆಸೆ ಹುಟ್ಟಿರಲಿಲ್ಲ, 40 ರಲ್ಲಿ ಬಂತು! ಖ್ಯಾತ ನಟಿಯ ಮನದಿಂಗಿತ...
    • ಸ್ಯಾನಿಟರಿ ಪ್ಯಾಡ್ ಪ್ಯಾಕೆಟ್ ಮೇಲೆ ರಾಹುಲ್ ಗಾಂಧಿ ಫೋಟೋಗೆ ಜೆಡಿಯು-ಬಿಜೆಪಿ ವ್ಯಂಗ್ಯ!
    • ಪರಸ್ಪರ ಸಮ್ಮತಿಯಿಂದ ನಡೆದ ಲೈಂಗಿಕ ಕ್ರಿಯೆ ನಂತರ ರೇಪ್ ಎನ್ನಲಾಗುವುದಿಲ್ಲ - ಕೇರಳ ಹೈಕೋರ್ಟ್ ಆದೇಶ
    • ಭಾರತದ ಇತಿಹಾಸದಲ್ಲಿ 2025ರ ಹಜ್ ಯಾತ್ರಾ ಆಯೋಜನೆ ಅತ್ಯಂತ ಯಶಸ್ವಿ - ಕೇಂದ್ರ ಸಚಿವ ಕಿರಣ್ ರಿಜ್ಜು
    • ಈ ಬಾರಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ಮಹಿಳೆಗೆ ಪಟ್ಟ?
    • ರೇಪ್ ಕೇಸಿನಲ್ಲಿ ಕಾಂಪ್ರಮೈಸ್ ಆದರೆ ಸಂತ್ರಸ್ತೆಯ ವಿರುದ್ಧವೇ ದೂರು ದಾಖಲು - ಬಾಂಬೆ ಹೈಕೋರ್ಟ್ ಪೀಠ!
    • ದೆಹಲಿಯಲ್ಲಿ 10 ವರ್ಷ ದಾಟಿದ ಕಾರುಗಳು ಕಡಿಮೆ ದರದಲ್ಲಿ ಸಿಗಲಿವೆ! ಯಾಕ್ ಗೊತ್ತಾ?
    • ಟಾಯ್ಲೆಟಲ್ಲಿ ಮಹಿಳಾ ಉದ್ಯೋಗಿಗಳ ವಿಡಿಯೋ ರೆಕಾರ್ಡ್... ಇನ್ಫೋಸಿಸ್ ಉದ್ಯೋಗಿ ಬಂಧನ!
    • ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಜಿಲ್ಲೆ ಎಂದು ನಾಮಕರಣ ಮಾಡಬೇಕಾ?
  • Popular Posts

    • 1
      20 ವರ್ಷಗಳ ಬಳಿಕ ರಾಜ್ ಠಾಕ್ರೆ ಹಾಗೂ ಉದ್ದವ್ ಠಾಕ್ರೆ ಸಮ್ಮಿಲನ!
    • 2
      20, 30 ವಯಸ್ಸಿನಲ್ಲಿ ಮಗು ಬೇಕೆನ್ನುವ ಆಸೆ ಹುಟ್ಟಿರಲಿಲ್ಲ, 40 ರಲ್ಲಿ ಬಂತು! ಖ್ಯಾತ ನಟಿಯ ಮನದಿಂಗಿತ...
    • 3
      ಸ್ಯಾನಿಟರಿ ಪ್ಯಾಡ್ ಪ್ಯಾಕೆಟ್ ಮೇಲೆ ರಾಹುಲ್ ಗಾಂಧಿ ಫೋಟೋಗೆ ಜೆಡಿಯು-ಬಿಜೆಪಿ ವ್ಯಂಗ್ಯ!
    • 4
      ಪರಸ್ಪರ ಸಮ್ಮತಿಯಿಂದ ನಡೆದ ಲೈಂಗಿಕ ಕ್ರಿಯೆ ನಂತರ ರೇಪ್ ಎನ್ನಲಾಗುವುದಿಲ್ಲ - ಕೇರಳ ಹೈಕೋರ್ಟ್ ಆದೇಶ
    • 5
      ಭಾರತದ ಇತಿಹಾಸದಲ್ಲಿ 2025ರ ಹಜ್ ಯಾತ್ರಾ ಆಯೋಜನೆ ಅತ್ಯಂತ ಯಶಸ್ವಿ - ಕೇಂದ್ರ ಸಚಿವ ಕಿರಣ್ ರಿಜ್ಜು

  • Privacy Policy
  • Contact
© Tulunadu Infomedia.

Press enter/return to begin your search