• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಭಾರತೀಯ ನೌಕಾಪಡೆಯಲ್ಲಿ ಮೂರನೇ ಉನ್ನತ ಹುದ್ದೆಗೇರಿದ ಕೊಡಗಿನ ವೀರ ಉತ್ತಯ್ಯ!

TNN Correspondent Posted On August 3, 2018
0


0
Shares
  • Share On Facebook
  • Tweet It

ಕೊಡಗು ಎಂದ ತಕ್ಷಣ ನಮ್ಮ ನೆನಪಿಗೆ ಬರುವುದು ಅಲ್ಲಿನ ನಿಸರ್ಗ ಸಂಪತ್ತು. ಅದಾದ ನಂತರ ನಮ್ಮ ಸ್ಮೃತಿಪಟಲಕ್ಕೆ ಬರುವುದು ಜನರಲ್ ಕಾರ್ಯಪ್ಪ. ಇವರ ಬಳಿಕ ದೇಶಕ್ಕಾಗಿ ಹೋರಾಡಿದ ಕೊಡಗಿನ ಕುಟುಂಬಗಳು, ವೀರ ಸೈನಿಕರು, ಮಳೆ, ಕೊಡವ ಸಂಸ್ಕೃತಿ ನೆನಪಾಗುತ್ತದೆ. ಕೊಡಗು ಎಂದಾಕ್ಷಣ ಸೈನಿಕರು ನೆನಪಾಗುವ ಹಾಗೆ ಇಲ್ಲಿನ ವೀರರು ದೇಶಕ್ಕೆ ಸೇವೆ ಸಲ್ಲಿಸಿದ್ದಾರೆ.

ಸೈನ್ಯದ ವಿಷಯಕ್ಕೆ ಸಂಬಂಧಿಸಿದಂತೆ ಇಂತಹ ವೀರ ಇತಿಹಾಸ ಇರುವ ಕೊಡಗಿನಿಂದ ಈಗ ವೀರನೊಬ್ಬ ಭಾರತೀಯ ನೌಕಾಪಡೆಯಲ್ಲಿ ಮೂರನೇ ಅತ್ಯುನ್ನತ ಸ್ಥಾನಕ್ಕೆ ಏರುವ ಮೂಲಕ ಕೊಡಗು ಹಾಗೂ ಕರ್ನಾಟಕದ ಕೀರ್ತಿಪತಾಕೆಯನ್ನು ಹಾರಿಸಿದ್ದಾರೆ. ಅವರ ಹೆಸರು ಐಚ್ಚೆಟ್ಟಿರ ಬಿ. ಉತ್ತಯ್ಯ.

ಹೌದು, ಬಿ. ಉತ್ತಯ್ಯ ಅವರು ಭಾರತೀಯ ನೌಕಾಪಡೆಯ ರಿಯರ್ ಅಡ್ಮಿರಲ್ ಆಗಿ ನೇಮಕವಾಗಿದ್ದು, ಆ ಮೂಲಕ ಭಾರತೀಯ ನೌಕಾಪಡೆಯಲ್ಲಿ ಈ ಹುದ್ದೆಗೇರಿದ ಕೊಡಗಿನ ಮೊದಲ ವ್ಯಕ್ತಿ ಎಂಬ ಖ್ಯಾತಿಗೆ ಭಾಜನರಾಗಿದ್ದಾರೆ. ಅಲ್ಲದೆ ನೌಕಾಪಡೆಯಲ್ಲಿ ರಿಯರ್ ಅಡ್ಮಿರಲ್ ಹುದ್ದೆ ಅಲಂಕರಿಸಿರುವುದು ಭೂ ಸೇನೆಯಲ್ಲಿ ಮೇಜರ್ ಜನರಲ್ ಹುದ್ದೆಗೆ ಸಮ ಎಂಬುದು ಗಮನಾರ್ಹವಾಗಿದೆ.

1984ರಿಂದಲೇ ಸೇನೆಯಲ್ಲಿ ಸೇವೆ ಮಾಡುತ್ತಿರುವ ಬಿ, ಉತ್ತಯ್ಯ ಅವರು ಬಿ.ಟೆಕ್., ಎಂ.ಟೆಕ್ ಹಾಗೂ ಎಂಫಿಲ್ ಪದವಿ ಪಡೆದಿದ್ದಾರೆ. ಉತ್ತಯ್ಯ ಅವರ ಕಾರ್ಯಕ್ಷೇತ್ರ ದೆಹಲಿಯಾಗಿದ್ದು, ಕುಟುಂಬ ಬೆಂಗಳೂರಿನಲ್ಲಿ ವಾಸಿಸುತ್ತಿದೆ. ಉತ್ತಯ್ಯ ಅವರಿಗೆ ಪತ್ನಿ, ಒಬ್ಬ ಪುತ್ರ ಹಾಗೂ ಒಬ್ಬ ಪುತ್ರಿ ಇದ್ದಾರೆ. ಇದಕ್ಕೂ ಮುನ್ನ ನೌಕಾಪಡೆಯಲ್ಲಿ ಕಮಾಡೋರ್ ಆಗಿ ಕಾರ್ಯನಿರ್ವಹಿಸಿದ್ದರು. ಉತ್ತಯ್ಯ ಅವರು ನೌಕಾಪಡೆಯ ಅಡ್ಮಿರಲ್ ಆಗಿ ಹೊರಹೊಮ್ಮುವ ಮೂಲಕ ಪ್ರತಿ ಕನ್ನಡಿಗೂ ಮತ್ತಷ್ಟು ಹೆಮ್ಮೆಪಡುವಂತಾಗಲಿ ಎಂದು ಆಶಿಸೋಣ.

0
Shares
  • Share On Facebook
  • Tweet It




Trending Now
ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
Tulunadu News September 16, 2025
ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
Tulunadu News September 16, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
    • ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
    • ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!
    • ಹಿಮಾಚಲ ಪ್ರವಾಹ ಪೀಡಿತರಿಗೆ 5 ಕೋಟಿ ನೆರವು – ಸಿಎಂ ಸಿದ್ದರಾಮಯ್ಯ ನಿರ್ಧಾರಕ್ಕೆ ಬಿಜೆಪಿ ಆಕ್ರೋಶ
    • ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
    • ಮದ್ದೂರು ಗಣೇಶ ಗಲಾಟೆಗೆ ಪೂರ್ತಿ ಮುಸ್ಲಿಮರೇ ಕಾರಣ: ಸಚಿವ ಚೆಲುವರಾಯ ಸ್ವಾಮಿ
    • ಹೆದ್ದಾರಿ ಸಮಸ್ಯೆ ನೋಡಬೇಕಾದ ಸಂಸದರು, ಶಾಸಕರು ಏನು ಮಾಡುತ್ತಿದ್ದಾರೆ- ಹೆಗ್ಡೆ
    • ಮೋದಿಯಂತಹ ಪ್ರಧಾನಿ ನಮಗೆ ಸಿಕ್ಕಿದ್ರೆ ನಾವು ಅಭಿವೃದ್ಧಿಯಾಗುತ್ತಿದ್ವಿ - ನೇಪಾಳಿ ಪ್ರತಿಭಟನಾಕಾರ
    • ನಂಗೆ ಸ್ವಲ್ಪ ವಿಷ ಕೊಡಿ ಎಂದು ನ್ಯಾಯಾಧೀಶರ ಮುಂದೆ ಕಣ್ಣೀರಿಟ್ಟ ದರ್ಶನ್ ಗೆ ಅಗತ್ಯ ಸೌಕರ್ಯ ನೀಡುವಂತೆ ನ್ಯಾಯಾಲಯ ಆದೇಶ!
  • Popular Posts

    • 1
      ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
    • 2
      ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
    • 3
      ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!
    • 4
      ಹಿಮಾಚಲ ಪ್ರವಾಹ ಪೀಡಿತರಿಗೆ 5 ಕೋಟಿ ನೆರವು – ಸಿಎಂ ಸಿದ್ದರಾಮಯ್ಯ ನಿರ್ಧಾರಕ್ಕೆ ಬಿಜೆಪಿ ಆಕ್ರೋಶ
    • 5
      ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!

  • Privacy Policy
  • Contact
© Tulunadu Infomedia.

Press enter/return to begin your search