• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಭಾರತೀಯ ನೌಕಾಪಡೆಯಲ್ಲಿ ಮೂರನೇ ಉನ್ನತ ಹುದ್ದೆಗೇರಿದ ಕೊಡಗಿನ ವೀರ ಉತ್ತಯ್ಯ!

TNN Correspondent Posted On August 3, 2018
0


0
Shares
  • Share On Facebook
  • Tweet It

ಕೊಡಗು ಎಂದ ತಕ್ಷಣ ನಮ್ಮ ನೆನಪಿಗೆ ಬರುವುದು ಅಲ್ಲಿನ ನಿಸರ್ಗ ಸಂಪತ್ತು. ಅದಾದ ನಂತರ ನಮ್ಮ ಸ್ಮೃತಿಪಟಲಕ್ಕೆ ಬರುವುದು ಜನರಲ್ ಕಾರ್ಯಪ್ಪ. ಇವರ ಬಳಿಕ ದೇಶಕ್ಕಾಗಿ ಹೋರಾಡಿದ ಕೊಡಗಿನ ಕುಟುಂಬಗಳು, ವೀರ ಸೈನಿಕರು, ಮಳೆ, ಕೊಡವ ಸಂಸ್ಕೃತಿ ನೆನಪಾಗುತ್ತದೆ. ಕೊಡಗು ಎಂದಾಕ್ಷಣ ಸೈನಿಕರು ನೆನಪಾಗುವ ಹಾಗೆ ಇಲ್ಲಿನ ವೀರರು ದೇಶಕ್ಕೆ ಸೇವೆ ಸಲ್ಲಿಸಿದ್ದಾರೆ.

ಸೈನ್ಯದ ವಿಷಯಕ್ಕೆ ಸಂಬಂಧಿಸಿದಂತೆ ಇಂತಹ ವೀರ ಇತಿಹಾಸ ಇರುವ ಕೊಡಗಿನಿಂದ ಈಗ ವೀರನೊಬ್ಬ ಭಾರತೀಯ ನೌಕಾಪಡೆಯಲ್ಲಿ ಮೂರನೇ ಅತ್ಯುನ್ನತ ಸ್ಥಾನಕ್ಕೆ ಏರುವ ಮೂಲಕ ಕೊಡಗು ಹಾಗೂ ಕರ್ನಾಟಕದ ಕೀರ್ತಿಪತಾಕೆಯನ್ನು ಹಾರಿಸಿದ್ದಾರೆ. ಅವರ ಹೆಸರು ಐಚ್ಚೆಟ್ಟಿರ ಬಿ. ಉತ್ತಯ್ಯ.

ಹೌದು, ಬಿ. ಉತ್ತಯ್ಯ ಅವರು ಭಾರತೀಯ ನೌಕಾಪಡೆಯ ರಿಯರ್ ಅಡ್ಮಿರಲ್ ಆಗಿ ನೇಮಕವಾಗಿದ್ದು, ಆ ಮೂಲಕ ಭಾರತೀಯ ನೌಕಾಪಡೆಯಲ್ಲಿ ಈ ಹುದ್ದೆಗೇರಿದ ಕೊಡಗಿನ ಮೊದಲ ವ್ಯಕ್ತಿ ಎಂಬ ಖ್ಯಾತಿಗೆ ಭಾಜನರಾಗಿದ್ದಾರೆ. ಅಲ್ಲದೆ ನೌಕಾಪಡೆಯಲ್ಲಿ ರಿಯರ್ ಅಡ್ಮಿರಲ್ ಹುದ್ದೆ ಅಲಂಕರಿಸಿರುವುದು ಭೂ ಸೇನೆಯಲ್ಲಿ ಮೇಜರ್ ಜನರಲ್ ಹುದ್ದೆಗೆ ಸಮ ಎಂಬುದು ಗಮನಾರ್ಹವಾಗಿದೆ.

1984ರಿಂದಲೇ ಸೇನೆಯಲ್ಲಿ ಸೇವೆ ಮಾಡುತ್ತಿರುವ ಬಿ, ಉತ್ತಯ್ಯ ಅವರು ಬಿ.ಟೆಕ್., ಎಂ.ಟೆಕ್ ಹಾಗೂ ಎಂಫಿಲ್ ಪದವಿ ಪಡೆದಿದ್ದಾರೆ. ಉತ್ತಯ್ಯ ಅವರ ಕಾರ್ಯಕ್ಷೇತ್ರ ದೆಹಲಿಯಾಗಿದ್ದು, ಕುಟುಂಬ ಬೆಂಗಳೂರಿನಲ್ಲಿ ವಾಸಿಸುತ್ತಿದೆ. ಉತ್ತಯ್ಯ ಅವರಿಗೆ ಪತ್ನಿ, ಒಬ್ಬ ಪುತ್ರ ಹಾಗೂ ಒಬ್ಬ ಪುತ್ರಿ ಇದ್ದಾರೆ. ಇದಕ್ಕೂ ಮುನ್ನ ನೌಕಾಪಡೆಯಲ್ಲಿ ಕಮಾಡೋರ್ ಆಗಿ ಕಾರ್ಯನಿರ್ವಹಿಸಿದ್ದರು. ಉತ್ತಯ್ಯ ಅವರು ನೌಕಾಪಡೆಯ ಅಡ್ಮಿರಲ್ ಆಗಿ ಹೊರಹೊಮ್ಮುವ ಮೂಲಕ ಪ್ರತಿ ಕನ್ನಡಿಗೂ ಮತ್ತಷ್ಟು ಹೆಮ್ಮೆಪಡುವಂತಾಗಲಿ ಎಂದು ಆಶಿಸೋಣ.

0
Shares
  • Share On Facebook
  • Tweet It




Trending Now
ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
Tulunadu News March 27, 2026
ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
Tulunadu News March 20, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
  • Popular Posts

    • 1
      ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!

  • Privacy Policy
  • Contact
© Tulunadu Infomedia.

Press enter/return to begin your search