• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಸಾಲಮನ್ನಾ ಮಾಡಲು ಯೋಚಿಸಿದ ಕುಮಾರಸ್ವಾಮಿ ಸರ್ಕಾರದ ಬಳಿ ಇದಕ್ಕೆಲ್ಲ ಹಣ ಇತ್ತೇ?

TNN Correspondent Posted On August 10, 2018


  • Share On Facebook
  • Tweet It

ವಿಧಾನಸಭೆಯ 224 ಕ್ಷೇತ್ರಗಳಿಗೆ ನಡೆದ ಚುನಾವಣೆಯಲ್ಲಿ ಕೇವಲ 38 ಸ್ಥಾನಗಳಲ್ಲಿ ಗೆದ್ದರೂ ಕಾಂಗ್ರೆಸ್ ಜತೆ ಮೈತ್ರಿ ಮಾಡಿಕೊಂಡು ಸರ್ಕಾರ ರಚಿಸಿರುವ, ದೇವೇಗೌಡರೇ ಕುಮಾರಸ್ವಾಮಿ ಸಾಂದರ್ಭಿಕ ಶಿಶು ಎಂದು ಕರೆದಿರುವ ಕುಮಾರಸ್ವಾಮಿಯವರು ರಾಜ್ಯದ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸುತ್ತಲೇ ನಾಡಿನ ಜನತೆಗೆ ನೀಡಿದ ಮಾತನ್ನು ಮರೆತು, ಬೇರೆಯದ್ದೇ ವರಸೆ ತೆಗೆದರು.

ಹೌದು, ಚುನಾವಣೆಗೂ ಮೊದಲು, ನಾನು ಯಾವುದೇ ಪಕ್ಷದ ಜತೆಗೂ ಮೈತ್ರಿ ಮಾಡಿಕೊಳ್ಳುವುದಿಲ್ಲ, ಬೇಕಾದರೆ ಬರೆದುಕೊಡುತ್ತೇನೆ ಎಂದು ಜೋರು ದನಿಯಲ್ಲಿ ಮಾತನಾಡಿದ್ದರು. ಚುನಾವಣೆ ಪ್ರಚಾರದ ವೇಳೆಯಲ್ಲಂತೂ ಅಧಿಕಾರಕ್ಕೆ ಬಂದ 24 ಗಂಟೆಯೊಳಗೆ ರೈತರ ಸಾಲ ಮನ್ನಾ ಮಾಡುತ್ತೇನೆ ಎಂದು ಘೋಷಿಸಿಬಿಟ್ಟರು. ಆದರೆ ಅಧಿಕಾರ ಹಿಡಿದ ಬಳಿಕ ವರಸೆ ಬದಲಿಸಿದ ಕುಮಾರಸ್ವಾಮಿಯವರು ಕೂಡಲೇ ಸಾಲ ಮನ್ನಾ ಮಾಡಲು ದುಡ್ಡಿಲ್ಲ ಎಂದರು.

ಆದರೆ ಇಂತಹ ಕುಮಾರಸ್ವಾಮಿಯವರ ಸರ್ಕಾರ ಅಧಿಕಾರ ಸ್ವೀಕರಿಸಲು ಲಕ್ಷಾಂತರ ರೂಪಾಯಿ ಖರ್ಚು ಮಾಡಿದೆ. ಹಾಗಂತ ಇವರೇನೂ ಸಮಾರಂಭಕ್ಕಾಗಿ ಖರ್ಚು ಮಾಡಿಲ್ಲ. ಬದಲಾಗಿ ಸಮಾರಂಭಕ್ಕೆ ಆಗಮಿಸಿದ ಗಣ್ಯರು ಬೆಂಗಳೂರಿನಲ್ಲಿದ್ದು, ಒಗ್ಗಟ್ಟು ಪ್ರದರ್ಶಿಸಿ ಹೋಗಲು ಲಕ್ಷಾಂತರ ರೂಪಾಯಿ ಖರ್ಚು ಮಾಡಲಾಗಿದೆ. ಶೀಘ್ರವೇ ಸಾಲ ಮನ್ನಾ ಮಾಡಲು ದುಡ್ಡಿರದ ಕುಮಾರಸ್ವಾಮಿಯವರು ಇಷ್ಟೆಲ್ಲ ಹೇಗೆ ಖರ್ಚು ಮಾಡಿದರು ಎಂಬುದು ಸಾರ್ವಜನಿಕ ವಲಯದಲ್ಲಿ ಚರ್ಚೆ ಹಾಗೂ ಟೀಕೆಗೆ ಕಾರಣವಾಗಿದೆ.

ಆರ್.ಟಿ.ಐ. ಕಾರ್ಯಕರ್ತರೊಬ್ಬರು ಸಲ್ಲಿಸಿದ ಅರ್ಜಿಯಲ್ಲಿ ಈ ವಿಷಯ ಬಹಿರಂಗವಾಗಿದ್ದು, ಬರೀ ಗಣ್ಯರು ಬೆಂಗಳೂರಿಗೆ ಬಂದು ಹೋಗಲು ಸರ್ಕಾರದ ಖಜಾನೆಯಿಂದ ಬರೋಬ್ಬರಿ 42 ಲಕ್ಷ ರೂಪಾಯಿ ಖರ್ಚು ಮಾಡಲಾಗಿದೆ ಎಂದು ತಿಳಿದುಬಂದಿದೆ. ಆದರೆ ಒಂದು ಪ್ರಮಾಣ ವಚನ ಕಾರ್ಯಕ್ರಮಕ್ಕೆ ಆಗಮಿಸಿದ ಗಣ್ಯರಿಗೆ ಇಷ್ಟೊಂದು ಹಣ ಖರ್ಚು ಮಾಡುವುದು ಬೇಕಿತ್ತಾ, ಇದರಿಂದ ರಾಜ್ಯದ ಜನರಿಗೆ ಏನು ಪ್ರಯೋಜನ ಎಂಬ ಮಾತುಗಳು ಕೇಳಿಬರುತ್ತಿವೆ.

ಹೀಗೆ ಬಂದು ಸರ್ಕಾರದ ಹಣ ಖರ್ಚು ಮಾಡಿರುವವರಲ್ಲಿ ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅಗ್ರ ಪಂಕ್ತಿಯಲ್ಲಿದ್ದು, ಇವರು 8.72 ಲಕ್ಷ ರೂಪಾಯಿ ಖರ್ಚು ಮಾಡಿದ್ದಾರೆ. ಉಳಿದಂತೆ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ 1.85 ಲಕ್ಷ ರೂಪಾಯಿ, ಶರದ್ ಯಾದವ್ 1.67 ಲಕ್ಷ, ಅಖಿಲೇಶ್ ಯಾದವ್ 1.02 ಲಕ್ಷ ರೂಪಾಯಿ ಸೇರಿ ಹಲವರು 42 ಲಕ್ಷ ರೂಪಾಯಿ ಬಿಲ್ ಮಾಡಿದ್ದಾರೆ ಎಂದು ತಿಳಿದುಬಂದಿದೆ.

  • Share On Facebook
  • Tweet It




Trending Now
ಎಷ್ಟು ಇಂಚಿನ ಪೈಪ್ ಹಾಕಬೇಕು ಎಂದು ಗೊತ್ತಿಲ್ಲದವರಿಗೆ ಎಷ್ಟು ಕೋಟಿ ಬಂದರೆಷ್ಟು?
Tulunadu News February 16, 2019
ಮೇಯರ್ ಕೊನೆಯ ಸುದ್ದಿಗೋಷ್ಟಿಯಲ್ಲಿ ಹೇಳದೇ ಇದ್ದ ಕಾಮಗಾರಿಗಳ ಪಟ್ಟಿ ನನ್ನ ಬಳಿ ಇದೆ!!
Tulunadu News February 15, 2019
Leave A Reply

  • Recent Posts

    • ಎಷ್ಟು ಇಂಚಿನ ಪೈಪ್ ಹಾಕಬೇಕು ಎಂದು ಗೊತ್ತಿಲ್ಲದವರಿಗೆ ಎಷ್ಟು ಕೋಟಿ ಬಂದರೆಷ್ಟು?
    • ಮೇಯರ್ ಕೊನೆಯ ಸುದ್ದಿಗೋಷ್ಟಿಯಲ್ಲಿ ಹೇಳದೇ ಇದ್ದ ಕಾಮಗಾರಿಗಳ ಪಟ್ಟಿ ನನ್ನ ಬಳಿ ಇದೆ!!
    • ಸೋರಿ ಹೋಗಿರುವ ಎರಡು ಕೋಟಿ ಪತ್ತೆ ಹಚ್ಚಲು ಕಾಮನ್ ಸೆನ್ಸ್ ಬೇಕು, ಸಿಎ ಡಿಗ್ರಿ ಅಲ್ಲ!!
    • ಟ್ರೇಡ್ ಲೈಸೆನ್ಸ್ ನವೀಕರಣದ ಕೊನೆಯ ದಿನ ಹತ್ತಿರ ಬಂದಂತೆ ಇದೇನು ಉಪಟಳ!!
    • ಈ ಬಾರಿಯ ಬಜೆಟ್‍ನಲ್ಲೂ ಕುಮಾರಸ್ವಾಮಿಯವರು ಕರಾವಳಿಗೆ ಮಲತಾಯಿ ಧೋರಣೆ ಮಾಡಿದ್ರಾ?!
    • ತೆರಿಗೆ, ಬಿಲ್ ವಸೂಲಿ ಮಾಡುವುದು ಪಾಲಿಕೆಯ ಹಕ್ಕು, ಭಿಕ್ಷೆ ತೆಗೆದುಕೊಂಡ ಹಾಗೆ ಅಂಗಲಾಚಬಾರದು!!
    • ಯಕ್ಷಗಾನ ಕಲಾವಿದನ ಮೇಲೆ ಬ್ರಹ್ಮಾಸ್ತ್ರ ಬಿಟ್ಟ ರೈಗಳು ಮಾಡಿದ್ದು ಸರಿಯಾ ಪೊಲೀಸರೇ?
    • ಕಾಂಕ್ರೀಟಿಕರಣದ ನಡುವೆ ಹೀಗೊಂದು ಹೊಸ ಡಸ್ಟ್ ಬಿನ್!!
    • ಶ್ರೀನಿವಾಸ್ ಕಾಲೇಜಿನವರೇ ನಿಮ್ಮ ಅಂಗೈ ಅಗಲದ ಜಾಗದಲ್ಲಿ ರಸ್ತೆ ಅಗಲ ಮಾಡೋಕೆ ಆಗಲ್ಲ!!
    • ಮುಳುಗುವ ಹಡಗಿನಲ್ಲಿ ತೂತು ಕೊರೆದ ಪಾಲಿಕೆಯ ಕೊನೆಯ ಬಜೆಟ್!!
  • Popular Posts

    • 1
      ಎಷ್ಟು ಇಂಚಿನ ಪೈಪ್ ಹಾಕಬೇಕು ಎಂದು ಗೊತ್ತಿಲ್ಲದವರಿಗೆ ಎಷ್ಟು ಕೋಟಿ ಬಂದರೆಷ್ಟು?
    • 2
      ಮೇಯರ್ ಕೊನೆಯ ಸುದ್ದಿಗೋಷ್ಟಿಯಲ್ಲಿ ಹೇಳದೇ ಇದ್ದ ಕಾಮಗಾರಿಗಳ ಪಟ್ಟಿ ನನ್ನ ಬಳಿ ಇದೆ!!
    • 3
      ಸೋರಿ ಹೋಗಿರುವ ಎರಡು ಕೋಟಿ ಪತ್ತೆ ಹಚ್ಚಲು ಕಾಮನ್ ಸೆನ್ಸ್ ಬೇಕು, ಸಿಎ ಡಿಗ್ರಿ ಅಲ್ಲ!!
    • 4
      ಟ್ರೇಡ್ ಲೈಸೆನ್ಸ್ ನವೀಕರಣದ ಕೊನೆಯ ದಿನ ಹತ್ತಿರ ಬಂದಂತೆ ಇದೇನು ಉಪಟಳ!!


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia, Mangalore - 1

Press enter/return to begin your search