• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಸ್ವಾತಂತ್ರ್ಯ ದಿನಾಚರಣೆಗೆ ಉಗ್ರರ ಕರಿನೆರಳು, ಸ್ಫೋಟಕ ಜಪ್ತಿ, ಬೆಂಗಳೂರಿನಲ್ಲಿ ಒಬ್ಬನ ಬಂಧನ

TNN Correspondent Posted On August 10, 2018
0


0
Shares
  • Share On Facebook
  • Tweet It

ನವದೆಹಲಿ/ಬೆಂಗಳೂರು: ದೇಶದ ಸ್ವಾತಂತ್ರ್ಯ ದಿನಾಚರಣೆಗೆ ಇನ್ನೂ ಐದೇ ದಿನ ಬಾಕಿ ಇರುವ ಮೊದಲೇ ದಿನಾಚರಣೆಗೆ ಉಗ್ರರ ಕರಿನೆರಳು ಇದೆ ಎಂಬುದಕ್ಕೆ ಸಾಕ್ಷಿ ದೊರೆತಿದೆ. ನವದೆಹಲಿಯಲ್ಲಿ ಪೊಲೀಸರು ಅಪಾರ ಪ್ರಮಾಣದ ಸ್ಫೋಟಕ ವಶಪಡಿಸಿಕೊಂಡರೆ, ಬೆಂಗಳೂರಿನಲ್ಲಿ ಒಬ್ಬ ಶಂಕಿತ ಉಗ್ರನನ್ನು ಬಂಧಿಸಿದ್ದಾರೆ.

ಗುರುವಾರ ತಡರಾತ್ರಿ ರಾಷ್ಟ್ರ ರಾಜಧಾನಿಯಲ್ಲಿ ಕಾರ್ಬೈನ್, ಕಾರ್ಟಿಡ್ಜ್ ಸೇರಿ ಹಲವು ಸ್ಫೋಟಕ, ವಿವಿಧ ಶಸ್ತ್ರಾಸ್ತ್ರಗಳನ್ನು ಪೊಲೀಸರು ಜಪ್ತಿ ಮಾಡಿದ್ದಾರೆ. ಇತ್ತ ಬೆಂಗಳೂರಿನಲ್ಲಿ ಒಬ್ಬನನ್ನು ಬಂಧಿಸಿದ್ದು, ಈತ ಬಾಂಗ್ಲಾದೇಶದ ಉಗ್ರ ಎಂದು ಪೊಲೀಸರು ಶಂಕಿಸಿದ್ದಾರೆ. ಆದಾಗ್ಯೂ ಸ್ವಾತಂತ್ರ್ಯ ದಿನಾಚರಣೆಗೆ ಅಡ್ಡಿಪಡಿಸುವುದು ಇವನ ಉದ್ದೇಶವಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

ಉತ್ತರ ಪ್ರದೇಶದ ಸೊಯ್ಯಮ್ ಅಲಿಯಾಸ್ ಆಸ್ ಮೊಹಮ್ಮದ್ ಬಂಧಿತ ಎಂದು ಗುರುತಿಸಲಾಗಿದೆ. ಇವನು ಬಾಂಗ್ಲಾದೇಶದಿಂದ ಭಾರತಕ್ಕೆ ಅಕ್ರಮವಾಗಿ ಬಂದು ನೆಲೆಸಿ, ಉಗ್ರ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿದ್ದಾನೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಶಂಕಿತ ಉಗ್ರನ ಬಂಧನದ ಕುರಿತು ಡಿವೈಎಸ್ಪಿ ಸಂಜೀವ್ ಕುಮಾರ್ ಯಾದವ್ ಮಾಹಿತಿ ನೀಡಿದ್ದು, ಜಿ.ಟಿ. ಕರ್ನಲ್ ರಸ್ತೆಯ ಶಿಂಘೋಲ್ ಎಂಬ ಗ್ರಾಮದಲ್ಲಿ ಸೊಯ್ಯಮ್ ನನ್ನು ಬಂಧಿಸಲಾಗಿದೆ. ಇತ್ತೀಚೆಗಷ್ಟೇ ದಿಲ್ಲಿಯಲ್ಲಿ ಅಜಂ ಎಂಬಾತನನ್ನು ಬಂಧಿಸಲಾಗಿತ್ತು ಎಂದು ಮಾಹಿತಿ ನೀಡಿದ್ದಾರೆ.

ಪ್ರತಿ ವರ್ಷದಂತೆ ಈ ವರ್ಷವೂ ಸ್ವಾತಂತ್ರ್ಯ ದಿನಾಚರಣೆಗೆ ಉಗ್ರರ ಕರಿನೆರಳು ಇರುವುದರಿಂದ ಪೊಲೀಸರು ವಿಶೇಷ ತಂಡಗಳನ್ನು ರಚಿಸಿ ಭದ್ರತೆ ಒದಗಿಸುತ್ತಿದ್ದಾರೆ. ಅಲ್ಲದೆ, ಹಲವೆಡೆ ಗಸ್ತು ತಿರುಗಿ ಯಾವುದೇ ಆಘಾತಕಾರಿ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುತ್ತಿದ್ದಾರೆ.

0
Shares
  • Share On Facebook
  • Tweet It




Trending Now
ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
Tulunadu News November 21, 2025
ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
Tulunadu News November 20, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
    • ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
  • Popular Posts

    • 1
      ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • 2
      ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ

  • Privacy Policy
  • Contact
© Tulunadu Infomedia.

Press enter/return to begin your search