• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಸ್ವಾತಂತ್ರ್ಯ ದಿನಾಚರಣೆಗೆ ಉಗ್ರರ ಕರಿನೆರಳು, ಸ್ಫೋಟಕ ಜಪ್ತಿ, ಬೆಂಗಳೂರಿನಲ್ಲಿ ಒಬ್ಬನ ಬಂಧನ

TNN Correspondent Posted On August 10, 2018
0


0
Shares
  • Share On Facebook
  • Tweet It

ನವದೆಹಲಿ/ಬೆಂಗಳೂರು: ದೇಶದ ಸ್ವಾತಂತ್ರ್ಯ ದಿನಾಚರಣೆಗೆ ಇನ್ನೂ ಐದೇ ದಿನ ಬಾಕಿ ಇರುವ ಮೊದಲೇ ದಿನಾಚರಣೆಗೆ ಉಗ್ರರ ಕರಿನೆರಳು ಇದೆ ಎಂಬುದಕ್ಕೆ ಸಾಕ್ಷಿ ದೊರೆತಿದೆ. ನವದೆಹಲಿಯಲ್ಲಿ ಪೊಲೀಸರು ಅಪಾರ ಪ್ರಮಾಣದ ಸ್ಫೋಟಕ ವಶಪಡಿಸಿಕೊಂಡರೆ, ಬೆಂಗಳೂರಿನಲ್ಲಿ ಒಬ್ಬ ಶಂಕಿತ ಉಗ್ರನನ್ನು ಬಂಧಿಸಿದ್ದಾರೆ.

ಗುರುವಾರ ತಡರಾತ್ರಿ ರಾಷ್ಟ್ರ ರಾಜಧಾನಿಯಲ್ಲಿ ಕಾರ್ಬೈನ್, ಕಾರ್ಟಿಡ್ಜ್ ಸೇರಿ ಹಲವು ಸ್ಫೋಟಕ, ವಿವಿಧ ಶಸ್ತ್ರಾಸ್ತ್ರಗಳನ್ನು ಪೊಲೀಸರು ಜಪ್ತಿ ಮಾಡಿದ್ದಾರೆ. ಇತ್ತ ಬೆಂಗಳೂರಿನಲ್ಲಿ ಒಬ್ಬನನ್ನು ಬಂಧಿಸಿದ್ದು, ಈತ ಬಾಂಗ್ಲಾದೇಶದ ಉಗ್ರ ಎಂದು ಪೊಲೀಸರು ಶಂಕಿಸಿದ್ದಾರೆ. ಆದಾಗ್ಯೂ ಸ್ವಾತಂತ್ರ್ಯ ದಿನಾಚರಣೆಗೆ ಅಡ್ಡಿಪಡಿಸುವುದು ಇವನ ಉದ್ದೇಶವಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

ಉತ್ತರ ಪ್ರದೇಶದ ಸೊಯ್ಯಮ್ ಅಲಿಯಾಸ್ ಆಸ್ ಮೊಹಮ್ಮದ್ ಬಂಧಿತ ಎಂದು ಗುರುತಿಸಲಾಗಿದೆ. ಇವನು ಬಾಂಗ್ಲಾದೇಶದಿಂದ ಭಾರತಕ್ಕೆ ಅಕ್ರಮವಾಗಿ ಬಂದು ನೆಲೆಸಿ, ಉಗ್ರ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿದ್ದಾನೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಶಂಕಿತ ಉಗ್ರನ ಬಂಧನದ ಕುರಿತು ಡಿವೈಎಸ್ಪಿ ಸಂಜೀವ್ ಕುಮಾರ್ ಯಾದವ್ ಮಾಹಿತಿ ನೀಡಿದ್ದು, ಜಿ.ಟಿ. ಕರ್ನಲ್ ರಸ್ತೆಯ ಶಿಂಘೋಲ್ ಎಂಬ ಗ್ರಾಮದಲ್ಲಿ ಸೊಯ್ಯಮ್ ನನ್ನು ಬಂಧಿಸಲಾಗಿದೆ. ಇತ್ತೀಚೆಗಷ್ಟೇ ದಿಲ್ಲಿಯಲ್ಲಿ ಅಜಂ ಎಂಬಾತನನ್ನು ಬಂಧಿಸಲಾಗಿತ್ತು ಎಂದು ಮಾಹಿತಿ ನೀಡಿದ್ದಾರೆ.

ಪ್ರತಿ ವರ್ಷದಂತೆ ಈ ವರ್ಷವೂ ಸ್ವಾತಂತ್ರ್ಯ ದಿನಾಚರಣೆಗೆ ಉಗ್ರರ ಕರಿನೆರಳು ಇರುವುದರಿಂದ ಪೊಲೀಸರು ವಿಶೇಷ ತಂಡಗಳನ್ನು ರಚಿಸಿ ಭದ್ರತೆ ಒದಗಿಸುತ್ತಿದ್ದಾರೆ. ಅಲ್ಲದೆ, ಹಲವೆಡೆ ಗಸ್ತು ತಿರುಗಿ ಯಾವುದೇ ಆಘಾತಕಾರಿ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುತ್ತಿದ್ದಾರೆ.

0
Shares
  • Share On Facebook
  • Tweet It




Trending Now
ಉಡುಪಿ ಕಾಂಗ್ರೆಸ್ ಮುಖಂಡ ಅಮೃತ್ ಶೆಣೈಗೆ 3 ವರ್ಷ ಜೈಲು ಶಿಕ್ಷೆ!
Tulunadu News June 26, 2026
ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ
Tulunadu News June 16, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಉಡುಪಿ ಕಾಂಗ್ರೆಸ್ ಮುಖಂಡ ಅಮೃತ್ ಶೆಣೈಗೆ 3 ವರ್ಷ ಜೈಲು ಶಿಕ್ಷೆ!
    • ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ
    • Najlepsze bonusy i sloty w polskim kasynie online
    • ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
  • Popular Posts

    • 1
      ಉಡುಪಿ ಕಾಂಗ್ರೆಸ್ ಮುಖಂಡ ಅಮೃತ್ ಶೆಣೈಗೆ 3 ವರ್ಷ ಜೈಲು ಶಿಕ್ಷೆ!

  • Privacy Policy
  • Contact
© Tulunadu Infomedia.

Press enter/return to begin your search