• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ರಾಹುಲ್ ಗಾಂಧಿ ಮಾಡಿದ ರಾಫೆಲ್ ಸವಾಲಿಗೆ ಯಡಿಯೂರಪ್ಪ ಹೇಗೆ ಟಾಂಗ್ ನೀಡಿದ್ದಾರೆ ಗೊತ್ತಾ?

TNN Correspondent Posted On August 14, 2018
0


0
Shares
  • Share On Facebook
  • Tweet It

ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ರಾಹುಲ್ ಗಾಂಧಿಯವರಿಗೆ ಪೆಟ್ರೋಲ್ ಕೆಜಿ ಲೆಕ್ಕದಲ್ಲಿ ಸಿಗುತ್ತದೋ, ಲೀಟರ್ ಲೆಕ್ಕದಲ್ಲಿ ಸಿಗುತ್ತದೋ ಗೊತ್ತಿಲ್ಲ. ಅದರೆ ಅವರು ಭಾಷಣಕ್ಕೆ ನಿಂತರೆ ಮಾತ್ರ ದೇಶದ ಅಭಿವೃದ್ಧಿ ಬಗ್ಗೆ ಮಾತನಾಡುತ್ತಾರೆ. ಆದರೆ ಹಾಗೆ ಮಾತನಾಡುವಾಗ ಅಭಿವೃದ್ಧಿಗಿಂತ ಕೇಂದ್ರ ಸರ್ಕಾರದ ವಿರುದ್ಧ ಟೀಕೆ ಮಾಡುವುದರಲ್ಲೇ ಕಾಲ ಕಳೆದುಬಿಡುತ್ತಾರೆ.

ಯಾವುದೇ ದಾಖಲೆ, ಅಂಕಿ-ಅಂಶ ಇಲ್ಲದೆ ವೃಥಾ ಆರೋಪ ಮಾಡುವಲ್ಲಿ ರಾಹುಲ್ ಗಾಂಧಿ ನಿಸ್ಸೀಮರಾಗಿದ್ದು, ಇತ್ತೀಚೆಗೆ ಭಾರತ ಸರ್ಕಾರ 2015ರಲ್ಲಿ ಫ್ರಾನ್ಸ್ ನೊಂದಿಗೆ ಮಾಡಿಕೊಂಡಿರುವ ರಾಫೆಲ್ ಯುದ್ಧ ವಿಮಾನ ಖರೀದಿ ಒಪ್ಪಂದದಲ್ಲಿ ಹಗರಣವಾಗಿದೆ ಎಂದು ರಾಹುಲ್ ಗಾಂಧಿಯವರು ಹಲವು ತಿಂಗಳಿಂದ ಆರೋಪ ಮಾಡುತ್ತಲೇ ಇದ್ದಾರೆ. ಆದರೆ ಇದುವರೆಗೂ ಹೇಗೆ ಹಗರಣವಾಗಿದೆ ಎಂಬ ಕುರಿತು ಅಧಿಕೃತ ದಾಖಲೆಯನ್ನೇ ಬಿಡುಗಡೆ ಮಾಡಿಲ್ಲ. ಬರೀ ಆರೋಪವನ್ನಷ್ಟೇ ಮಾಡಿದ್ದಾರೆ.

ಅಷ್ಟೇ ಅಲ್ಲ, ಸೋಮವಾರ ಮತ್ತೊಂದು ಹೆಜ್ಜೆ ಮುಂದೆ ಹೋಗಿದ್ದ ರಾಹುಲ್ ಗಾಂಧಿಯವರು, ಬೀದರ್ ನಲ್ಲಿ ಆಯೋಜಿಸಿದ್ದ ಕಾಂಗ್ರೆಸ್ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸವಾಲು ಹಾಕಿದ್ದರು. ರಾಫೆಲ್ ಒಪ್ಪಂದದ ಕುರಿತು ನನ್ನ ಜತೆ ಚರ್ಚೆಗೆ ಬನ್ನಿ ನರೇಂದ್ರ ಮೋದಿ ಅವರೇ ಎಂದು ಗುಟುರು ಹಾಕಿದ್ದರು.

ಆದರೆ ರಾಹುಲ್ ಗಾಂಧಿಯವರ ಸವಾಲಿಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಟಾಂಗ್ ನೀಡಿದ್ದು, ಭಾರತ ಪ್ರಸ್ತುತ ವಿಶ್ವದ 6ನೇ ಬೃಹತ್ ವಿತ್ತೀಯ ರಾಷ್ಟ್ರ ಎಂಬ ಹೆಗ್ಗಳಿಕೆ ಹೊಂದಿದೆ. ಮೋದಿ ಸರ್ಕಾರದ ನೇತೃತ್ವದಲ್ಲೇ ಮೂರನೇ ಸ್ಥಾನಕ್ಕೂ ಹೋಗುತ್ತದೆ. ಹಾಗಾಗಿ ರಾಹುಲ್ ಗಾಂಧಿಯವರು ಇಂಥ ಸವಾಲು ಹಾಕುವ ಮುನ್ನ ತಮ್ಮ ಪಕ್ಷದ ಪರಿಸ್ಥಿತಿ ಬಗ್ಗೆ ಮೊದಲು ಅವಲೋಕನ ಮಾಡಿಕೊಳ್ಳಬೇಕು ಎಂದು ಯಡಿಯೂರಪ್ಪ ಅವರು ಟಾಂಗ್ ನೀಡಿದ್ದಾರೆ.

0
Shares
  • Share On Facebook
  • Tweet It




Trending Now
ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
Tulunadu News March 27, 2026
ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
Tulunadu News March 20, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
  • Popular Posts

    • 1
      ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!

  • Privacy Policy
  • Contact
© Tulunadu Infomedia.

Press enter/return to begin your search