• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ರಾಹುಲ್ ಗಾಂಧಿ ಮಾಡಿದ ರಾಫೆಲ್ ಸವಾಲಿಗೆ ಯಡಿಯೂರಪ್ಪ ಹೇಗೆ ಟಾಂಗ್ ನೀಡಿದ್ದಾರೆ ಗೊತ್ತಾ?

TNN Correspondent Posted On August 14, 2018
0


0
Shares
  • Share On Facebook
  • Tweet It

ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ರಾಹುಲ್ ಗಾಂಧಿಯವರಿಗೆ ಪೆಟ್ರೋಲ್ ಕೆಜಿ ಲೆಕ್ಕದಲ್ಲಿ ಸಿಗುತ್ತದೋ, ಲೀಟರ್ ಲೆಕ್ಕದಲ್ಲಿ ಸಿಗುತ್ತದೋ ಗೊತ್ತಿಲ್ಲ. ಅದರೆ ಅವರು ಭಾಷಣಕ್ಕೆ ನಿಂತರೆ ಮಾತ್ರ ದೇಶದ ಅಭಿವೃದ್ಧಿ ಬಗ್ಗೆ ಮಾತನಾಡುತ್ತಾರೆ. ಆದರೆ ಹಾಗೆ ಮಾತನಾಡುವಾಗ ಅಭಿವೃದ್ಧಿಗಿಂತ ಕೇಂದ್ರ ಸರ್ಕಾರದ ವಿರುದ್ಧ ಟೀಕೆ ಮಾಡುವುದರಲ್ಲೇ ಕಾಲ ಕಳೆದುಬಿಡುತ್ತಾರೆ.

ಯಾವುದೇ ದಾಖಲೆ, ಅಂಕಿ-ಅಂಶ ಇಲ್ಲದೆ ವೃಥಾ ಆರೋಪ ಮಾಡುವಲ್ಲಿ ರಾಹುಲ್ ಗಾಂಧಿ ನಿಸ್ಸೀಮರಾಗಿದ್ದು, ಇತ್ತೀಚೆಗೆ ಭಾರತ ಸರ್ಕಾರ 2015ರಲ್ಲಿ ಫ್ರಾನ್ಸ್ ನೊಂದಿಗೆ ಮಾಡಿಕೊಂಡಿರುವ ರಾಫೆಲ್ ಯುದ್ಧ ವಿಮಾನ ಖರೀದಿ ಒಪ್ಪಂದದಲ್ಲಿ ಹಗರಣವಾಗಿದೆ ಎಂದು ರಾಹುಲ್ ಗಾಂಧಿಯವರು ಹಲವು ತಿಂಗಳಿಂದ ಆರೋಪ ಮಾಡುತ್ತಲೇ ಇದ್ದಾರೆ. ಆದರೆ ಇದುವರೆಗೂ ಹೇಗೆ ಹಗರಣವಾಗಿದೆ ಎಂಬ ಕುರಿತು ಅಧಿಕೃತ ದಾಖಲೆಯನ್ನೇ ಬಿಡುಗಡೆ ಮಾಡಿಲ್ಲ. ಬರೀ ಆರೋಪವನ್ನಷ್ಟೇ ಮಾಡಿದ್ದಾರೆ.

ಅಷ್ಟೇ ಅಲ್ಲ, ಸೋಮವಾರ ಮತ್ತೊಂದು ಹೆಜ್ಜೆ ಮುಂದೆ ಹೋಗಿದ್ದ ರಾಹುಲ್ ಗಾಂಧಿಯವರು, ಬೀದರ್ ನಲ್ಲಿ ಆಯೋಜಿಸಿದ್ದ ಕಾಂಗ್ರೆಸ್ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸವಾಲು ಹಾಕಿದ್ದರು. ರಾಫೆಲ್ ಒಪ್ಪಂದದ ಕುರಿತು ನನ್ನ ಜತೆ ಚರ್ಚೆಗೆ ಬನ್ನಿ ನರೇಂದ್ರ ಮೋದಿ ಅವರೇ ಎಂದು ಗುಟುರು ಹಾಕಿದ್ದರು.

ಆದರೆ ರಾಹುಲ್ ಗಾಂಧಿಯವರ ಸವಾಲಿಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಟಾಂಗ್ ನೀಡಿದ್ದು, ಭಾರತ ಪ್ರಸ್ತುತ ವಿಶ್ವದ 6ನೇ ಬೃಹತ್ ವಿತ್ತೀಯ ರಾಷ್ಟ್ರ ಎಂಬ ಹೆಗ್ಗಳಿಕೆ ಹೊಂದಿದೆ. ಮೋದಿ ಸರ್ಕಾರದ ನೇತೃತ್ವದಲ್ಲೇ ಮೂರನೇ ಸ್ಥಾನಕ್ಕೂ ಹೋಗುತ್ತದೆ. ಹಾಗಾಗಿ ರಾಹುಲ್ ಗಾಂಧಿಯವರು ಇಂಥ ಸವಾಲು ಹಾಕುವ ಮುನ್ನ ತಮ್ಮ ಪಕ್ಷದ ಪರಿಸ್ಥಿತಿ ಬಗ್ಗೆ ಮೊದಲು ಅವಲೋಕನ ಮಾಡಿಕೊಳ್ಳಬೇಕು ಎಂದು ಯಡಿಯೂರಪ್ಪ ಅವರು ಟಾಂಗ್ ನೀಡಿದ್ದಾರೆ.

0
Shares
  • Share On Facebook
  • Tweet It




Trending Now
ಕುಡುಕರ ಲಿವರ್ ಚಿಕಿತ್ಸೆಗೆ ಸರಕಾರ ಹಣ ನೀಡಲಿ ಎಂದ ಶಾಸಕರು!
Tulunadu News December 9, 2025
ಸ್ಮೃತಿ ಹೊಸ ಇನ್ಸಿಂಗ್ಸ್ ಆರಂಭ!
Tulunadu News December 9, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕುಡುಕರ ಲಿವರ್ ಚಿಕಿತ್ಸೆಗೆ ಸರಕಾರ ಹಣ ನೀಡಲಿ ಎಂದ ಶಾಸಕರು!
    • ಸ್ಮೃತಿ ಹೊಸ ಇನ್ಸಿಂಗ್ಸ್ ಆರಂಭ!
    • ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
    • ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
  • Popular Posts

    • 1
      ಕುಡುಕರ ಲಿವರ್ ಚಿಕಿತ್ಸೆಗೆ ಸರಕಾರ ಹಣ ನೀಡಲಿ ಎಂದ ಶಾಸಕರು!
    • 2
      ಸ್ಮೃತಿ ಹೊಸ ಇನ್ಸಿಂಗ್ಸ್ ಆರಂಭ!

  • Privacy Policy
  • Contact
© Tulunadu Infomedia.

Press enter/return to begin your search