• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಸುದ್ದಿ 

ನೇತ್ರಾವತಿ ಹಾಗು ಕುಮಾರಧಾರ ಸಹಸ್ರಲಿಂಗೇಶ್ವರದಲ್ಲಿ ಸಂಗಮ : ಭಕ್ತರಿಂದ ಗಂಗಾಪೂಜೆ

Tulunadu News Posted On August 16, 2018
0


0
Shares
  • Share On Facebook
  • Tweet It

ಮಂಗಳೂರು: ಪಶ್ಚಿಮ ಘಟ್ಟ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿದೆ. ಇದರಿಂದಾಗಿ ಒಂದೆಡೆ ಜನಜೀವನ ಅಸ್ತವ್ಯಸ್ತಗೊಂಡಿದ್ದು, ಇನ್ನೊಂದೆಡೆ ಕೆಲ ಅಪರೂಪದ ವಿದ್ಯಮಾನಗಳಿಗೂ ಸಾಕ್ಷಿಯಾಗುತ್ತಿದೆ. ಸರಿಸುಮಾರು 5 ವರ್ಷಗಳ ಬಳಿಕ ದಕ್ಷಿಣ ಕನ್ನಡ ಜಿಲ್ಲೆಯ ಜೀವನದಿಗಳಾದ ನೇತ್ರಾವತಿ ಮತ್ತು ಕುಮಾರಧಾರಾ ನದಿಗಳು ಉಪ್ಪಿನಂಗಡಿ ಸಹಸ್ರಲಿಂಗೇಶ್ವರ ದೇವಸ್ಥಾನದ ಮುಂದೆ ಸಂಗಮಗೊಂಡಿದೆ.

ಸತತವಾಗಿ ಪಶ್ಚಿಮ ಘಟ್ಟದಲ್ಲಿ ಭಾರೀ ಮಳೆಯಾಗಿದ್ದರೂ, ಕುಮಾರಧಾರ ಮತ್ತು ನೇತ್ರಾವತಿ ನದಿಗಳು ಸಂಗಮ ಆಗಿರಲಿಲ್ಲ. ಆದರೆ ರಾತ್ರಿ ನೀರಿನ ಒಳಹರಿವು ಹೆಚ್ಚಾಗುತ್ತಿದ್ದಂತೆ ನಿನ್ನೆ ರಾತ್ರಿ ನದಿಗಳ ಸಂಗಮವಾಗಿದ್ದು, ಎರಡೂ ನದಿಗಳ ನೀರು ದೇವಸ್ಥಾನದ ಒಳಗೆ ನುಗ್ಗಿ ಗರ್ಭಗುಡಿ ಪ್ರವೇಶ ಮಾಡುವ ಅಪರೂಪದ ಸನ್ನಿವೇಶಕ್ಕೆ ಸಾವಿರಾರು ಭಕ್ತರು ಸಾಕ್ಷಿಯಾದರು. ಇದೇ ಸಂದರ್ಭದಲ್ಲಿ ಸೇರಿದ್ದ ಅರ್ಚಕರು ಮತ್ತು ಭಕ್ತವೃಂದ ಗಂಗಾಪೂಜೆ ನಡೆಸಿದರು. ಈ ಹಿಂದೆ ಕೊನೆಯ ಬಾರಿಗೆ ಅಂದರೆ 2013ರ ಜುಲೈ 4ರಂದು ಹಾಗೂ ಅದಕ್ಕೂ ಹಿಂದೆ 2008ರ ಆಗಸ್ಟ್ 13ರಂದು ಉಭಯ ನದಿಗಳು ಸಂಗಮಗೊಂಡಿದ್ದವು. ನಿನ್ನೆ ಮುಂಜಾನೆಯಿಂದಲೇ ತಟದಲ್ಲಿ ನದಿಗಳ ಸಂಗಮಕ್ಕಾಗಿ ಭಕ್ತರು ಕಾದು ಕುಳಿತಿದ್ದರು. ಇದರಿಂದಾಗಿ ಉಪ್ಪಿನಂಗಡಿಯ ಹೆದ್ದಾರಿಯಲ್ಲಿ ಭಾರೀ ವಾಹನ ದಟ್ಟಣೆ ಆಗಿತ್ತು.

0
Shares
  • Share On Facebook
  • Tweet It




Trending Now
ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
Tulunadu News October 27, 2025
ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
Tulunadu News October 22, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
    • ದೀಪಾವಳಿ ಬೋನಸ್ ಕಡಿಮೆ ಕೊಟ್ಟಿದ್ದಕ್ಕೆ ಟೋಲ್ ಸಿಬ್ಬಂದಿಗಳು ಮಾಡಿದ್ದೇನು?
    • ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
    • ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
    • "ಒಂದು ಶೋಗಾಗಿ ಕೈಕಾಲು ಹಿಡಿಯುತ್ತಿದ್ದ ಕಾಲದಿಂದ..." ರಿಷಬ್ ಶೆಟ್ಟಿ 2016 ರ ಘಟನೆಯನ್ನು ನೆನಪಿಸಿಕೊಂಡದ್ದು ಯಾಕೆ?
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಕ್ರಮ ಕಸಾಯಿಖಾನೆ ಮುಟ್ಟುಗೋಲು ಹಾಕಿದ ಪ್ರಥಮ ಪ್ರಕರಣ ದಾಖಲು - ಎಸ್ಪಿ
    • ಗೆದ್ದರೂ ಟ್ರೋಫಿ ಪಡೆಯದೇ ದಿಟ್ಟ ಉತ್ತರ ನೀಡಿದ ಭಾರತೀಯ ತಂಡಕ್ಕೆ ಭೇಷ್!
    • ಕೇವಲ ₹100 ಲಂಚದ ಪ್ರಕರಣದಲ್ಲಿ 39 ವರ್ಷಗಳ ಬಳಿಕ ನಿರ್ದೋಷಿ ಘೋಷಣೆ!
  • Popular Posts

    • 1
      ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • 2
      ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • 3
      ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
    • 4
      ದೀಪಾವಳಿ ಬೋನಸ್ ಕಡಿಮೆ ಕೊಟ್ಟಿದ್ದಕ್ಕೆ ಟೋಲ್ ಸಿಬ್ಬಂದಿಗಳು ಮಾಡಿದ್ದೇನು?

  • Privacy Policy
  • Contact
© Tulunadu Infomedia.

Press enter/return to begin your search