• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಸುದ್ದಿ 

ಶಿರಾಡಿ ಘಾಟ್‍ನಲ್ಲಿ ಆ.23ರವರೆಗೆ ಲಘುವಾಹನ, ಆ.25 ವರೆಗೆ ಭಾರೀ ವಾಹನಗಳ ಸಂಚಾರ ನಿರ್ಬಂಧ

Tulunadu News Posted On August 16, 2018
0


0
Shares
  • Share On Facebook
  • Tweet It

ಹಾಸನ: ಭಾರೀ ಮಳೆಯಿಂದಾಗಿ ಶಿರಾಡಿ ಘಾಟ್‍ನಲ್ಲಿ ಗುಡ್ಡ ಕುಸಿದಿದ್ದು, ಆಗಸ್ಟ್ 20ರವರೆಗೆ ಲಘು ವಾಹನಗಳ ಸಂಚಾರ ಹಾಗೂ 25ರವರೆಗೆ ಭಾರೀ ವಾಹನಗಳ ಸಂಚಾರವನ್ನು ನಿರ್ಬಂಧಿಸಲಾಗಿದೆ.

ರಸ್ತೆ ಮೇಲೆ ಬಿದ್ದಿರುವ ಮಣ್ಣು ಕುಸಿತ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದ್ದರಿಂದ ಕಾರ್ಯಾಚರಣೆಗಾಗಿ ಹತ್ತು ದಿನಗಳ ಕಾಲ ವಾಹನ ಸಂಚಾರ ನಿಷೇಧ ಮಾಡಲಾಗಿದೆ. ಆಗಸ್ಟ್ 20ರವರೆಗೆ ಎಲ್ಲಾ ವಾಹನ ಹಾಗೂ ಆಗಸ್ಟ್ 25 ರವರೆಗೆ ರಾಷ್ಟ್ರೀಯ ಹೆದ್ದಾರಿ-75 ಶಿರಾಡಿಘಾಟ್ ರಸ್ತೆಯಲ್ಲಿ ಭಾರಿ ವಾಹನಗಳು ನಿಷೇಧ ಮಾಡಿ ಈ ಬಗ್ಗೆ ಸಕಲೇಶಪುರ ಉಪವಿಭಾಗಾಧಿಕಾರಿ ಲಕ್ಷ್ಮೀಕಾಂತ ರೆಡ್ಡಿ ಆದೇಶ ಹೊರಡಿಸಿದ್ದಾರೆ.

ಪತ್ರದಲ್ಲಿ ಏನಿದೆ?:
ಜಿಲ್ಲೆಯಾದ್ಯಂತ ಮುಂದಿನ ಮೂರು ದಿನಗಳವರೆಗೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಆದ್ದರಿಂದ ಅರಬ್ಬಿ ಸಮುದ್ರದ ಅಲೆಗಳು 3 ರಿಂದ 4 ಮೀಟರ್ ಗಳಷ್ಟು ಎತ್ತರವಿದ್ದು, ಮೀನುಗಾರರು ಸುಮುದ್ರಕ್ಕೆ ಇಳಿಯಬಾರದು. ಸಂಪಾಜೆ, ಶಿರಾಡಿ ಘಾಟ್ ಬಂದ್ ಆಗಿದ್ದು ಚಾರ್ಮಾಡಿ ಘಾಟಿಯಲ್ಲಿ ವಾಹನಗಳು ಸಂಚರಿಸಬಹುದು.

ನೇತ್ರಾವತಿ, ಕುಮಾರಧಾರ ನದಿ ಪಾತ್ರದ ತಗ್ಗು ಪ್ರದೇಶದ ಜನರು ಎತ್ತರ ಪ್ರದೇಶಗಳಿಗೆ ತೆರಳುವುದು. ಎಂದಿನಂತೆ ಶಾಲಾ ಕಾಲೇಜುಗಳು ನಡೆಯುತ್ತವೆ. (ಮಳೆಯ ಪ್ರಮಾಣ ಹೆಚ್ಚಾದಲ್ಲಿ ಸಂಬಂಧಪಟ್ಟ ತಾಲೂಕಿನ ತಹಶೀಲ್ದಾರರು ರಜೆ ಫೋಷಿಸಬಹುದು ಎಂದು ಜಿಲ್ಲಾ ವಿಪತ್ತು ಮಿರ್ವಹಣಾ ಪ್ರಾಧಿಕಾರ ಇಲಾಖೆಯಿಂದ ಪತ್ರದ ಮೂಲಕ ಜಿಲ್ಲಾಧಿಕಾರಿ ಅವರು ತಿಳಿಸಿದ್ದಾರೆ.

ಚಾರ್ಮಾಡಿ ಘಾಟ್ ಮೂಲಕ ವಾಹನ ಸಂಚಾರಕ್ಕೆ ಅವಕಾಶ ನೀಡಲಾಗಿದೆ. ದೊಡ್ಡತಪ್ಲು ಬಳಿ ಗ್ಯಾಸ್ ಟ್ಯಾಂಕರ್ ಉರುಳಿ ಬಿದ್ದಿದ್ದು, ಲಾರಿಯಲ್ಲಿದ್ದ ಕೆ.ಆರ್.ಪೇಟೆ ಮೂಲದ ಸಂದೀಪ್ ಹಾಗು ಮಾನ್ವಿ ಮೂಲದ ವೆಂಕಟೇಶ್ ಸಾವನ್ನಪ್ಪಿದ್ದಾರೆ. ಟ್ಯಾಂಕರ್ ನೋಡಲು ಹೋದ ಮಂಗಳೂರು ಮೂಲದ ರಾಮದೇವ್ ಅಪಘಾತದಲ್ಲಿ ಸಾವನ್ನಪ್ಪಿದ್ದರು.

ಘಟನೆ ನಡೆದ ಸ್ಥಳಕ್ಕೆ ಸಚಿವ ರೇವಣ್ಣ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಹೆತ್ತೂರು ಹೋಬಳಿ ಪಟ್ಲ ಗ್ರಾಮದ ಬಳಿ ರಸ್ತೆ ಬಿರುಕು ಬಿಟ್ಟಿದೆ. ಗುಡ್ಡ ಕುಸಿತಕ್ಕೆ ಮಂಗಳೂರು-ಬೆಂಗಳೂರು ರೈಲು ಸಂಚಾರ ಸ್ಥಗಿತವಾಗಿದೆ. 4 ವರ್ಷಗಳ ಬಳಿಕ ಬೇಲೂರಿನ ಯಗಚಿ ಜಲಾಶಯ ಭರ್ತಿಯಾಗಿದೆ.

0
Shares
  • Share On Facebook
  • Tweet It




Trending Now
ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
Tulunadu News April 14, 2026
ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
Tulunadu News April 7, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!

  • Privacy Policy
  • Contact
© Tulunadu Infomedia.

Press enter/return to begin your search